25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಧಾರ್ಮಿಕ

ಧರ್ಮಸ್ಥಳ ಮೇಳದ ತಿರುಗಾಟ ಪ್ರಾರಂಭ

ಧರ್ಮಸ್ಥಳ : ಧರ್ಮಸ್ಥಳದ ಯಕ್ಷಗಾನ ಮಂಡಳಿಯ ಸೇವಾ ಹರಿಕೆ ಬಯಲಾಟ ಪ್ರದರ್ಶಕ್ಕಾಗಿ ಶನಿವಾರ ತಿರುಗಾಟ ಪ್ರಾರಂಭಗೊಂಡಿದೆ.
ಧರ್ಮಸ್ಥಳದಲ್ಲಿ ಶನಿವಾರ ಪೂರ್ವಾಹ್ನ ಗಂಟೆ 8.30ಕ್ಕೆ ಛತ್ರ  ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಬಳಿಕ ಯಕ್ಷಗಾನ ಮೇಳದ ಶ್ರೀ ಗಣಪತಿ ದೇವರ ಮೂರ್ತಿಯನ್ನು ಭವ್ಯ ಮೆರವಣಿಗೆಯಲ್ಲಿ ಮಂಜುಕೃಪಾ ನಿವಾಸಕ್ಕೆ ಕೊಂಡು ಹೋಗಿ ಅಲ್ಲಿ ಗಣಹೋಮ ಮತ್ತು ಮಹಾಪೂಜೆ ನೆರವೇರಿಸಲಾಯಿತು.


ಈ ಸಂದರ್ಭದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು , ಹೇಮಾವತಿ ವಿ. ಹೆಗ್ಗಡೆಯವರು, ಡಿ. ಹರ್ಷೇಂದ್ರ ಕುಮಾರ್, ಸುಪ್ರಿಯಾ ಹರ್ಷೇಂದ್ರ ಕುಮಾರ್ ಹಾಗೂ ಯಕ್ಷಗಾನ ಕಲಾವಿದರು, ಮೇಳದಲ್ಲಿ  ವ್ಯವಸ್ಥಾಪಕರಾದ ಗಿರೀಶ್ ಹೆಗ್ಡೆ ಮತ್ತು ಪುಷ್ಪರಾಜ ಶೆಟ್ಟಿ ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.
2024ರ ಮೇ 23ರ ವರೆಗೆ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಕ್ತಾದಿಗಳಿಂದ ಹರಿಕೆ ಸೇವಾ ಬಯಲಾಟ ಪ್ರದರ್ಶನ ಆಯೋಜಿಸಲಾಗಿದೆ.


ಪ್ರತಿದಿನ ಸಂಜೆ 7 ಗಂಟೆಯಿಂದ 12 ಗಂಟೆವರೆಗೆ ಕಾಲಮಿತಿ ಯಕ್ಷಗಾನ ಪ್ರದರ್ಶನದಲ್ಲಿ ಪೌರಾಣಿಕ ಪ್ರಸಂಗಗಳನ್ನು ಮಾತ್ರ ಸಾದರಪಡಿಸಲಾಗುತ್ತದೆ.

Related posts

ಶಿವರಾತ್ರಿ ಪ್ರಯುಕ್ತ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸುವ ಪಾದಯಾತ್ರಿಗಳಿಗೆ ಸಿಯೋನ್ ಆಶ್ರಮದಿಂದ ಉಚಿತ ಮಜ್ಜಿಗೆ ವಿತರಣೆ

Suddi Udaya

ಸೌಜನ್ಯ ಕೊಲೆ ಪ್ರಕರಣ: ಕೊಕ್ಕಡ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಗ್ರಾಮ ಸಮಿತಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಮನವಿ

Suddi Udaya

ಸೌತಡ್ಕ ಮಹಾಗಣಪತಿ ಕ್ಷೇತ್ರದಲ್ಲಿ ಕಿರಣ್ ಆಗ್ರೋಟೆಕ್ ಉಜಿರೆ -ಕೊಕ್ಕಡ ಇವರ 2025ರ ಕ್ಯಾಲೆಂಡರ್ ಬಿಡುಗಡೆ

Suddi Udaya

ನಾವೂರು 25ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ: ಧಾರ್ಮಿಕ ಸಭೆ

Suddi Udaya

ಲಾಯಿಲ: ಶ್ರೀ ಮಹಮ್ಮಾಯಿ ಅಮ್ಮನವರ ಮಾರಿ ಪೂಜೋತ್ಸವ

Suddi Udaya

ಮುಂಡಾಜೆ ಅಗರಿಯಲ್ಲಿ ಪ್ರಾಣಕ್ಕೆ ಕಂಟಕ ವಾಗಿರುವ ವಿದ್ಯುತ್ ತಂತಿ.

Suddi Udaya
error: Content is protected !!