23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಧಾರ್ಮಿಕ

ಧರ್ಮಸ್ಥಳ ಮೇಳದ ತಿರುಗಾಟ ಪ್ರಾರಂಭ

ಧರ್ಮಸ್ಥಳ : ಧರ್ಮಸ್ಥಳದ ಯಕ್ಷಗಾನ ಮಂಡಳಿಯ ಸೇವಾ ಹರಿಕೆ ಬಯಲಾಟ ಪ್ರದರ್ಶಕ್ಕಾಗಿ ಶನಿವಾರ ತಿರುಗಾಟ ಪ್ರಾರಂಭಗೊಂಡಿದೆ.
ಧರ್ಮಸ್ಥಳದಲ್ಲಿ ಶನಿವಾರ ಪೂರ್ವಾಹ್ನ ಗಂಟೆ 8.30ಕ್ಕೆ ಛತ್ರ  ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಬಳಿಕ ಯಕ್ಷಗಾನ ಮೇಳದ ಶ್ರೀ ಗಣಪತಿ ದೇವರ ಮೂರ್ತಿಯನ್ನು ಭವ್ಯ ಮೆರವಣಿಗೆಯಲ್ಲಿ ಮಂಜುಕೃಪಾ ನಿವಾಸಕ್ಕೆ ಕೊಂಡು ಹೋಗಿ ಅಲ್ಲಿ ಗಣಹೋಮ ಮತ್ತು ಮಹಾಪೂಜೆ ನೆರವೇರಿಸಲಾಯಿತು.


ಈ ಸಂದರ್ಭದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು , ಹೇಮಾವತಿ ವಿ. ಹೆಗ್ಗಡೆಯವರು, ಡಿ. ಹರ್ಷೇಂದ್ರ ಕುಮಾರ್, ಸುಪ್ರಿಯಾ ಹರ್ಷೇಂದ್ರ ಕುಮಾರ್ ಹಾಗೂ ಯಕ್ಷಗಾನ ಕಲಾವಿದರು, ಮೇಳದಲ್ಲಿ  ವ್ಯವಸ್ಥಾಪಕರಾದ ಗಿರೀಶ್ ಹೆಗ್ಡೆ ಮತ್ತು ಪುಷ್ಪರಾಜ ಶೆಟ್ಟಿ ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.
2024ರ ಮೇ 23ರ ವರೆಗೆ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಕ್ತಾದಿಗಳಿಂದ ಹರಿಕೆ ಸೇವಾ ಬಯಲಾಟ ಪ್ರದರ್ಶನ ಆಯೋಜಿಸಲಾಗಿದೆ.


ಪ್ರತಿದಿನ ಸಂಜೆ 7 ಗಂಟೆಯಿಂದ 12 ಗಂಟೆವರೆಗೆ ಕಾಲಮಿತಿ ಯಕ್ಷಗಾನ ಪ್ರದರ್ಶನದಲ್ಲಿ ಪೌರಾಣಿಕ ಪ್ರಸಂಗಗಳನ್ನು ಮಾತ್ರ ಸಾದರಪಡಿಸಲಾಗುತ್ತದೆ.

Related posts

ಬಳಂಜ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ : ತಳಿರು ತೋರಣದಿಂದ ಅಲಂಕಾರ, ಆರತಿ ಬೆಳಗಿ ತಿಲಕವಿಟ್ಟು, ಹೂಗುಚ್ಚ ನೀಡಿ ವಿದ್ಯಾರ್ಥಿಗಳಿಗೆ ಸ್ವಾಗತ

Suddi Udaya

ಧರ್ಮಸ್ಥಳಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭೇಟಿ

Suddi Udaya

ಸಾವ್ಯ ಕರ್ಪೋಟ್ಟು ಅನುರಾಧ ನಿವಾಸದ ಶ್ರೀಮತಿ ರಾಧಾ ಹೃದಯಾಘಾತದಿಂದ ನಿಧನ

Suddi Udaya

ಆ.4 ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನ ಸಂಗಮ ಕ್ಷೇತ್ರದಲ್ಲಿ ಆಟಿ ಅಮಾವಾಸ್ಯೆಯ ಪ್ರಯುಕ್ತ ತೀರ್ಥಸ್ನಾನ

Suddi Udaya

ಬೆಳ್ತಂಗಡಿ ಜೆಸಿಐ, ಮಂಜುಶ್ರೀ ವತಿಯಿಂದ ಶ್ರಾವಣ ತರಬೇತಿ ಕಾರ್ಯಕ್ರಮ

Suddi Udaya

ಕೋಳಿ ತ್ಯಾಜ್ಯದಿಂದ ಅಶುದ್ಧಿಯಾಗುತ್ತಿರುವ ಶಿಶಿಲದ‌ ” ಕಪಿಲೆ”

Suddi Udaya
error: Content is protected !!