22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಧಾರ್ಮಿಕ

ಧರ್ಮಸ್ಥಳ ಮೇಳದ ತಿರುಗಾಟ ಪ್ರಾರಂಭ

ಧರ್ಮಸ್ಥಳ : ಧರ್ಮಸ್ಥಳದ ಯಕ್ಷಗಾನ ಮಂಡಳಿಯ ಸೇವಾ ಹರಿಕೆ ಬಯಲಾಟ ಪ್ರದರ್ಶಕ್ಕಾಗಿ ಶನಿವಾರ ತಿರುಗಾಟ ಪ್ರಾರಂಭಗೊಂಡಿದೆ.
ಧರ್ಮಸ್ಥಳದಲ್ಲಿ ಶನಿವಾರ ಪೂರ್ವಾಹ್ನ ಗಂಟೆ 8.30ಕ್ಕೆ ಛತ್ರ  ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಬಳಿಕ ಯಕ್ಷಗಾನ ಮೇಳದ ಶ್ರೀ ಗಣಪತಿ ದೇವರ ಮೂರ್ತಿಯನ್ನು ಭವ್ಯ ಮೆರವಣಿಗೆಯಲ್ಲಿ ಮಂಜುಕೃಪಾ ನಿವಾಸಕ್ಕೆ ಕೊಂಡು ಹೋಗಿ ಅಲ್ಲಿ ಗಣಹೋಮ ಮತ್ತು ಮಹಾಪೂಜೆ ನೆರವೇರಿಸಲಾಯಿತು.


ಈ ಸಂದರ್ಭದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು , ಹೇಮಾವತಿ ವಿ. ಹೆಗ್ಗಡೆಯವರು, ಡಿ. ಹರ್ಷೇಂದ್ರ ಕುಮಾರ್, ಸುಪ್ರಿಯಾ ಹರ್ಷೇಂದ್ರ ಕುಮಾರ್ ಹಾಗೂ ಯಕ್ಷಗಾನ ಕಲಾವಿದರು, ಮೇಳದಲ್ಲಿ  ವ್ಯವಸ್ಥಾಪಕರಾದ ಗಿರೀಶ್ ಹೆಗ್ಡೆ ಮತ್ತು ಪುಷ್ಪರಾಜ ಶೆಟ್ಟಿ ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.
2024ರ ಮೇ 23ರ ವರೆಗೆ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಕ್ತಾದಿಗಳಿಂದ ಹರಿಕೆ ಸೇವಾ ಬಯಲಾಟ ಪ್ರದರ್ಶನ ಆಯೋಜಿಸಲಾಗಿದೆ.


ಪ್ರತಿದಿನ ಸಂಜೆ 7 ಗಂಟೆಯಿಂದ 12 ಗಂಟೆವರೆಗೆ ಕಾಲಮಿತಿ ಯಕ್ಷಗಾನ ಪ್ರದರ್ಶನದಲ್ಲಿ ಪೌರಾಣಿಕ ಪ್ರಸಂಗಗಳನ್ನು ಮಾತ್ರ ಸಾದರಪಡಿಸಲಾಗುತ್ತದೆ.

Related posts

ಶ್ರೀ ದೇವಿ ಭಗವತಿ ಅಮ್ಮನವರ ದೇವಸ್ಥಾನದಲ್ಲಿ ನವರಾತ್ರಿ ಪೂಜಾ ಮಹೋತ್ಸವ

Suddi Udaya

ದ.ಕ ಜಿಲ್ಲಾ ಮಟ್ಟದ ಕೆ.ಡಿ.ಪಿ ಸಮಿತಿ ಸದಸ್ಯರಾಗಿ ನ್ಯಾಯವಾದಿ ಸಂತೋಷ್ ಕುಮಾರ್ ಲಾಯಿಲ ನೇಮಕ

Suddi Udaya

ಬೆಳ್ತಂಗಡಿ ಟೀಚರ್ಸ್ ಬ್ಯಾಂಕ್ ನಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಜ.2: ಧರ್ಮಸ್ಥಳ ಶಾಂತಿವನ ಟ್ರಸ್ಟ್ ವತಿಯಿಂದ 31ನೇ ವರ್ಷದ “ಜ್ಞಾನರಥ” ಮತ್ತು “ಜ್ಞಾನಪಥ” ಮೌಲ್ಯಧಾರಿತ ಪುಸ್ತಕಗಳ ರಾಜ್ಯಮಟ್ಟದ ವಿವಿಧ ಸ್ಪರ್ಧೆ ಹಾಗೂ ಪುರಸ್ಕಾರ ಸಮಾರಂಭ

Suddi Udaya

ಬೆಳ್ತಂಗಡಿ: ಪಿಎಲ್‌ಡಿ ಬ್ಯಾಂಕ್ ಹಿರಿಯ ಲೆಕ್ಕಾಧಿಕಾರಿ ಆಶಾಲತಾ ಡಿ. ನಿವೃತ್ತಿ

Suddi Udaya

ಕೊಯ್ಯೂರು: ಶ್ರೀ ಕೃಷ್ಣ ಜನ್ಮಷ್ಟಮಿ ಸಮಿತಿ ಹಾಗೂ ಶ್ರೀ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!