September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಧಾರ್ಮಿಕ

ಧರ್ಮಸ್ಥಳ ಮೇಳದ ತಿರುಗಾಟ ಪ್ರಾರಂಭ

ಧರ್ಮಸ್ಥಳ : ಧರ್ಮಸ್ಥಳದ ಯಕ್ಷಗಾನ ಮಂಡಳಿಯ ಸೇವಾ ಹರಿಕೆ ಬಯಲಾಟ ಪ್ರದರ್ಶಕ್ಕಾಗಿ ಶನಿವಾರ ತಿರುಗಾಟ ಪ್ರಾರಂಭಗೊಂಡಿದೆ.
ಧರ್ಮಸ್ಥಳದಲ್ಲಿ ಶನಿವಾರ ಪೂರ್ವಾಹ್ನ ಗಂಟೆ 8.30ಕ್ಕೆ ಛತ್ರ  ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಬಳಿಕ ಯಕ್ಷಗಾನ ಮೇಳದ ಶ್ರೀ ಗಣಪತಿ ದೇವರ ಮೂರ್ತಿಯನ್ನು ಭವ್ಯ ಮೆರವಣಿಗೆಯಲ್ಲಿ ಮಂಜುಕೃಪಾ ನಿವಾಸಕ್ಕೆ ಕೊಂಡು ಹೋಗಿ ಅಲ್ಲಿ ಗಣಹೋಮ ಮತ್ತು ಮಹಾಪೂಜೆ ನೆರವೇರಿಸಲಾಯಿತು.


ಈ ಸಂದರ್ಭದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು , ಹೇಮಾವತಿ ವಿ. ಹೆಗ್ಗಡೆಯವರು, ಡಿ. ಹರ್ಷೇಂದ್ರ ಕುಮಾರ್, ಸುಪ್ರಿಯಾ ಹರ್ಷೇಂದ್ರ ಕುಮಾರ್ ಹಾಗೂ ಯಕ್ಷಗಾನ ಕಲಾವಿದರು, ಮೇಳದಲ್ಲಿ  ವ್ಯವಸ್ಥಾಪಕರಾದ ಗಿರೀಶ್ ಹೆಗ್ಡೆ ಮತ್ತು ಪುಷ್ಪರಾಜ ಶೆಟ್ಟಿ ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.
2024ರ ಮೇ 23ರ ವರೆಗೆ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಕ್ತಾದಿಗಳಿಂದ ಹರಿಕೆ ಸೇವಾ ಬಯಲಾಟ ಪ್ರದರ್ಶನ ಆಯೋಜಿಸಲಾಗಿದೆ.


ಪ್ರತಿದಿನ ಸಂಜೆ 7 ಗಂಟೆಯಿಂದ 12 ಗಂಟೆವರೆಗೆ ಕಾಲಮಿತಿ ಯಕ್ಷಗಾನ ಪ್ರದರ್ಶನದಲ್ಲಿ ಪೌರಾಣಿಕ ಪ್ರಸಂಗಗಳನ್ನು ಮಾತ್ರ ಸಾದರಪಡಿಸಲಾಗುತ್ತದೆ.

Related posts

ವಾಣಿ ಕಾಲೇಜಿನಲ್ಲಿ ವಿದ್ಯಾರ್ಥಿ ಮಿತ್ರ ಸಿಇಟಿ ಕಾರ್ಯಾಗಾರ

Suddi Udaya

ಗೇರುಕಟ್ಟೆ ಶ್ರೀ ಕೃಷ್ಣ ಭಜನಾ ಮಂದಿರಕ್ಕೆ ಪರಿಷತ್ ರಾಜ್ಯಾಧ್ಯಕ್ಷರು ಮತ್ತು ತಾಲೂಕು ಪದಾಧಿಕಾರಿಗಳು ಭೇಟಿ

Suddi Udaya

ಎಕ್ಸೆಲ್ ಪ.ಪೂ. ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಂದ ಆಹಾರ ತಯಾರಿಕಾ ಘಟಕಕ್ಕೆ ಭೇಟಿ ಕಾರ್ಯಕ್ರಮ

Suddi Udaya

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಂದ ಶ್ರೀ ಕ್ಷೇತ್ರ ಸೌತಡ್ಕಕ್ಕೆ ಹಸಿರು ಕಾಣಿಕೆ ಸಮರ್ಪಣೆ

Suddi Udaya

ಕನ್ಯಾಡಿ: ನೇರೊಳ್ದಪಲ್ಕೆ ಅಂಗನವಾಡಿಗೆ ಗ್ಯಾಸ್ ಸ್ಟೌವ್ ಕೊಡುಗೆ

Suddi Udaya

ಏಕಾಏಕಿ ಚಲಿಸಿದ ಲಾರಿ: ಚಾಲಕ ಬಂದಾರು ನಿವಾಸಿ ಮಹೇಶ್ ಚಕ್ರದಡಿ ಸಿಲುಕಿ ಸ್ಥಳದಲ್ಲೇ ಮೃತ್ಯು

Suddi Udaya
error: Content is protected !!