ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ: ವಾಣಿ ಕಾಲೇಜಿನ ವಿದ್ಯಾರ್ಥಿಗಳು ಮೈಸೂರು ವಿಭಾಗೀಯ ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ಕರ್ನಾಟಕ ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿಧಿ, ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ವತಿಯಿಂದ ಮೂಡಬಿದ್ರೆ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜು ಕಲ್ಲಬೆಟ್ಟು ಇಲ್ಲಿ ನಡೆದ ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ವಾಣಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದು ಏಕಪಾತ್ರ ಅಭಿನಯದಲ್ಲಿ ದ್ವಿತೀಯ ಪಿಯುಸಿಯ ಋತ್ವಿಕ್ ಶೆಟ್ಟಿ ಮತ್ತು ಪ್ರಥಮ ಪಿಯುಸಿಯ ಸಾತ್ವಿಕ್ ಎಂ ಪ್ರಥಮ ಸ್ಥಾನವನ್ನು ಹಾಗೂ ಕನ್ನಡ ಪ್ರಬಂಧದಲ್ಲಿ ಪ್ರಥಮ ಪಿಯುಸಿಯ ಸುರಕ್ಷಿತ ಪ್ರಥಮ ಸ್ಥಾನವನ್ನು ಪಡೆದು ವಿಭಾಗೀಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.


ದ್ವಿತೀಯ ಪಿಯುಸಿ ವಿಭಾಗದ ಆಶುಭಾಷಣದಲ್ಲಿ ನೆವಿಲ್ ನವೀನ್ ಮೋರಸ್ ದ್ವಿತೀಯ, ಜನಪದ ಗೀತೆಯಲ್ಲಿ ಧನುಷ್ ತೃತೀಯ, ಕನ್ನಡ ಪ್ರಬಂಧದಲ್ಲಿ ಶರಣ್ಯ ತೃತೀಯ ಹಾಗೂ ಪ್ರಥಮ ಪಿಯುಸಿ ವಿಭಾಗದ ಆಶುಭಾಷಣದಲ್ಲಿ ವಿಭಾ. ಕೆ. ಆರ್ ತೃತೀಯ, ಭಾವಗೀತೆಯಲ್ಲಿ ಸಮನ್ವಿತ್ ಕುಮಾರ್ ತೃತೀಯ, ಚರ್ಚಾ ಸ್ಪರ್ಧೆಯಲ್ಲಿ ಸಾಹಿತ್ಯ ಕುಶಾಲ್ ತೃತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ.

Related posts

ಮೂಲಭೂತ ಸೌಲಭ್ಯಗಳಿಂದ ವಂಚಿತರಾಗಿರುವ ಸವಣಾಲುವಿನ ಹಿತ್ತಿಲಪೇಲ ನಿವಾಸಿಗಳು; ಸಂಪರ್ಕ ಕೊಂಡಿಯಾಗಿರುವ ನದಿಯನ್ನೇ ದಾಟದಂತೆ ಬ್ಯಾನರ್ ಹಾಕುವ ಮೂಲಕ ಅಧಿಕಾರಿಗಳ ದಿಗ್ಬಂಧನ

Suddi Udaya

ಆ.2 : ವೇಣೂರು ವಿದ್ಯುತ್ ನಿಲುಗಡೆ

Suddi Udaya

ಅರಸಿನಮಕ್ಕಿ: ಅಂಗಡಿ ಗುಡ್ಡೆ ನಿವಾಸಿ ಶ್ರೀಮತಿ ಬಾಲಕಿ ನಿಧನ

Suddi Udaya

ಬಿಜೆಪಿ ಬಜಿರೆ ಗ್ರಾಮದ ಬೂತ್ ಸಂಖ್ಯೆ 139ರ ಅಧ್ಯಕ್ಷರಾಗಿ ಚಂದ್ರಶೇಖರ, ಕಾರ್ಯದರ್ಶಿಯಾಗಿ ರಮಾನಾಥ ಪೂಜಾರಿ ಆಯ್ಕೆ

Suddi Udaya

ಬೆಳ್ತಂಗಡಿ: ವಿಶೇಷ ಸಮಗ್ರ ಪರಿಷ್ಕರಣೆ–2026 ಅಂಗವಾಗಿ ಮತದಾರರ ಜಾಗೃತಿ ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ತೆಲಂಗಾಣ ರಾಜ್ಯದ ಸಾರಿಗೆ ಸಚಿವ ಪೊಣ್ಣಂ ಪ್ರಭಾಕರ್ ಭೇಟಿ

Suddi Udaya
error: Content is protected !!