ತುಮಕೂರಿನಲ್ಲಿ ‘ಜಿ.ಎನ್.ಆರ್ ಕಲ್ಪತರು ಸಿರಿ ಮಾರ್ಟ್’ ಸಿರಿ ಉತ್ಪನ್ನಗಳ ನೂತನ ಮಾರಾಟ ಮಳಿಗೆ ಶುಭಾರಂಭ

Suddi Udaya

ತುಮಕೂರಿನ ಎಸ್.ಐ.ಟಿ ಮುಖ್ಯ ರಸ್ತೆಯ ಬಳಿ ಇರುವ ಜ್ವಾಲಮಾಲಾ ಕಾಂಪ್ಲೆಕ್ಸ್ ನಲ್ಲಿ ‘ಜಿ.ಎನ್.ಆರ್ ಕಲ್ಪತರು ಸಿರಿ ಮಾರ್ಟ್’ ಸಿರಿ ಉತ್ಪನ್ನಗಳ ನೂತನ ಮಾರಾಟ ಮಳಿಗೆಯು ನ.30 ರಂದು ಶುಭಾರಂಭಗೊಂಡಿತು.

ಸಿರಿ ಉತ್ಪನ್ನಗಳ ನೂತನ ಮಾರಾಟ ಮಳಿಗೆಯನ್ನು ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಕೆ.ಎನ್ ಜನಾರ್ಧನ, ಎಸ್.ಕೆ.ಡಿ.ಆರ್.ಡಿ.ಪಿ ಬೆಂಗಳೂರು ವಲಯದ ಪ್ರಾದೇಶಿಕ ನಿರ್ದೇಶಕರಾದ ಶೀನಪ್ಪ, ಬೆಂಗಳೂರು ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕರು ಹಾಗೂ ವಿಭಾಗೀಯ ಮುಖ್ಯಸ್ಥರಾದ ಡಾ|| ಬಿ.ಎಲ್. ಚಿದಾನಂದ, ಖ್ಯಾತ ಉದ್ಯಮಿಗಳು ಹಾಗೂ ಸಿರಿ ಸಂಸ್ಥೆಯ ಆಡಳಿತ ಮಂಡಳಿ ನಿರ್ದೇಶಕರಾದ ರಾಮಸ್ವಾಮಿ ವಿ. ಯವರು ಉದ್ಘಾಟಿಸಿ, ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಸಿರಿ ಸಂಸ್ಥೆಯ ಮಾರುಕಟ್ಟೆ ವಿಭಾಗದ ಜನರಲ್ ಮ್ಯಾನೇಜರ್ ಸುಧಾಕರ್, ಸಿರಿ ಬ್ರಾಂಡ್ ಮತ್ತು ಮಾರುಕಟ್ಟೆ ವಿಭಾಗದ ಸಲಹೆಗಾರರಾದ ವಿಶ್ವಜ್ಞಚಾರ್, ಇತರ ಗಣ್ಯರು, ಹಿತೈಷಿಗಳು ಹಾಗೂ ಸಿರಿ ಸಿಬ್ಬಂದಿಗಳು ಉಪಸ್ಥಿತರಿದ್ದು ಶುಭ ಕೋರಿದರು.

ಜಿ.ಎನ್.ಆರ್ ಕಲ್ಪತರು ಸಿರಿ ಮಾರ್ಟ್ ಮಾಲಕರಾದ ಜಿ.ಎನ್ ರಾಜು, ಶ್ರೀಮತಿ ಸುಜಾತ ದಂಪತಿ ಮತ್ತು ಮಕ್ಕಳು, ಶ್ರೀಮತಿ ಗಂಗಾಲಕ್ಷ್ಮಮ್ಮ ಮತ್ತು ಗಂಗಾರುದ್ರಯ್ಯ ದಂಪತಿ, ಮಳಿಗೆಯ ಸಿಬ್ಬಂದಿ ವರ್ಗದವರು ಕಾರ್ಯಕ್ರಮಕ್ಕೆ ಬಂದಂತಹ ಅತಿಥಿ ಗಣ್ಯರನ್ನು ಪ್ರೀತಿಪೂರ್ವಕವಾಗಿ ಸ್ವಾಗತಿಸಿ, ಎಲ್ಲರ ಸಹಕಾರ ಕೋರಿದರು.

Leave a Comment

error: Content is protected !!