23.7 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶುಭಾರಂಭ

ತುಮಕೂರಿನಲ್ಲಿ ‘ಜಿ.ಎನ್.ಆರ್ ಕಲ್ಪತರು ಸಿರಿ ಮಾರ್ಟ್’ ಸಿರಿ ಉತ್ಪನ್ನಗಳ ನೂತನ ಮಾರಾಟ ಮಳಿಗೆ ಶುಭಾರಂಭ

ತುಮಕೂರಿನ ಎಸ್.ಐ.ಟಿ ಮುಖ್ಯ ರಸ್ತೆಯ ಬಳಿ ಇರುವ ಜ್ವಾಲಮಾಲಾ ಕಾಂಪ್ಲೆಕ್ಸ್ ನಲ್ಲಿ ‘ಜಿ.ಎನ್.ಆರ್ ಕಲ್ಪತರು ಸಿರಿ ಮಾರ್ಟ್’ ಸಿರಿ ಉತ್ಪನ್ನಗಳ ನೂತನ ಮಾರಾಟ ಮಳಿಗೆಯು ನ.30 ರಂದು ಶುಭಾರಂಭಗೊಂಡಿತು.

ಸಿರಿ ಉತ್ಪನ್ನಗಳ ನೂತನ ಮಾರಾಟ ಮಳಿಗೆಯನ್ನು ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಕೆ.ಎನ್ ಜನಾರ್ಧನ, ಎಸ್.ಕೆ.ಡಿ.ಆರ್.ಡಿ.ಪಿ ಬೆಂಗಳೂರು ವಲಯದ ಪ್ರಾದೇಶಿಕ ನಿರ್ದೇಶಕರಾದ ಶೀನಪ್ಪ, ಬೆಂಗಳೂರು ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕರು ಹಾಗೂ ವಿಭಾಗೀಯ ಮುಖ್ಯಸ್ಥರಾದ ಡಾ|| ಬಿ.ಎಲ್. ಚಿದಾನಂದ, ಖ್ಯಾತ ಉದ್ಯಮಿಗಳು ಹಾಗೂ ಸಿರಿ ಸಂಸ್ಥೆಯ ಆಡಳಿತ ಮಂಡಳಿ ನಿರ್ದೇಶಕರಾದ ರಾಮಸ್ವಾಮಿ ವಿ. ಯವರು ಉದ್ಘಾಟಿಸಿ, ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಸಿರಿ ಸಂಸ್ಥೆಯ ಮಾರುಕಟ್ಟೆ ವಿಭಾಗದ ಜನರಲ್ ಮ್ಯಾನೇಜರ್ ಸುಧಾಕರ್, ಸಿರಿ ಬ್ರಾಂಡ್ ಮತ್ತು ಮಾರುಕಟ್ಟೆ ವಿಭಾಗದ ಸಲಹೆಗಾರರಾದ ವಿಶ್ವಜ್ಞಚಾರ್, ಇತರ ಗಣ್ಯರು, ಹಿತೈಷಿಗಳು ಹಾಗೂ ಸಿರಿ ಸಿಬ್ಬಂದಿಗಳು ಉಪಸ್ಥಿತರಿದ್ದು ಶುಭ ಕೋರಿದರು.

ಜಿ.ಎನ್.ಆರ್ ಕಲ್ಪತರು ಸಿರಿ ಮಾರ್ಟ್ ಮಾಲಕರಾದ ಜಿ.ಎನ್ ರಾಜು, ಶ್ರೀಮತಿ ಸುಜಾತ ದಂಪತಿ ಮತ್ತು ಮಕ್ಕಳು, ಶ್ರೀಮತಿ ಗಂಗಾಲಕ್ಷ್ಮಮ್ಮ ಮತ್ತು ಗಂಗಾರುದ್ರಯ್ಯ ದಂಪತಿ, ಮಳಿಗೆಯ ಸಿಬ್ಬಂದಿ ವರ್ಗದವರು ಕಾರ್ಯಕ್ರಮಕ್ಕೆ ಬಂದಂತಹ ಅತಿಥಿ ಗಣ್ಯರನ್ನು ಪ್ರೀತಿಪೂರ್ವಕವಾಗಿ ಸ್ವಾಗತಿಸಿ, ಎಲ್ಲರ ಸಹಕಾರ ಕೋರಿದರು.

Related posts

ರಾಜ್ಯಮಟ್ಟದ ಪ್ರತಿಭಾ ಕಾರಂಜಿ ಕವನ ವಾಚನ ಸ್ಪರ್ಧೆ: ಪೆರ್ಲ-ಬೈಪಾಡಿ ಸ.ಪ್ರೌ.ಶಾಲೆಯ ವಿದ್ಯಾರ್ಥಿನಿ ಕು|ನಿತ್ಯಶ್ರೀ ಖಂಡಿಗ 3 ನೇ ಸಮಾಧಾನಕರ ಪ್ರಶಸ್ತಿ

Suddi Udaya

ಉರುವಾಲು: ಶ್ರೀ ಮಹಮ್ಮಾಯಿ ಮರಾಟಿ ಸಮಾಜ ಸೇವಾ ಸಂಘದ ವಾರ್ಷಿಕ ಮಹಾಸಭೆ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನಕ್ಕೆ ಉದ್ಯಮಿ ಶ್ರೀ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

Suddi Udaya

ಕೊಯ್ಯೂರು ಶಾಲೆಗೆ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ವತಿಯಿಂದ ಬಟ್ಟಲು ವಿತರಣೆ

Suddi Udaya

ಉಜಿರೆ ಗ್ರಾ.ಪಂ. ಪಿಡಿಒ ಪ್ರಕಾಶ್ ಶೆಟ್ಟಿ ನೊಚ್ಚ ಆಗುಂಬೆ ಗ್ರಾ.ಪಂ. ಗೆ ವರ್ಗಾವಣೆ

Suddi Udaya

ಸುಲ್ಕೇರಿಮೊಗ್ರು ಹಿ.ಪ್ರಾ. ಶಾಲೆಯ ನೀರಿನ ನಳ್ಳಿಗಳನ್ನು ತುಂಡರಿಸಿದ ಕಿಡಿಗೇಡಿಗಳು

Suddi Udaya
error: Content is protected !!