ಶಿರ್ಲಾಲು ಆಟೋ ಚಾಲಕ ಮಾಲಕ ಸಂಘದ ಮಾಜಿ ಅಧ್ಯಕ್ಷ ಹರೀಶ್ ಪೂಜಾರಿ ನಿಧನ

Suddi Udaya

ಬೆಳ್ತಂಗಡಿ: ಶಿರ್ಲಾಲು ಆಟೋ ಚಾಲಕ ಮಾಲಕ ಸಂಘದ ಮಾಜಿ ಅಧ್ಯಕ್ಷ, ಶಿರ್ಲಾಲು ಬೈಲು ಮನೆಯ ನಿವಾಸಿ ಹರೀಶ್ ಪೂಜಾರಿ ಅಲ್ಪಕಾಲದ ಅಸೌಖ್ಯದಿಂದ ಇಂದು ಬೆಳಗ್ಗಿನ ಜಾವ ಡಿ.2 ರಂದು ನಿಧನರಾದರು.

ಇವರು ಮೃದು ಸ್ವಭಾವದ ವ್ಯಕ್ತಿತ್ವ ಹೊಂದಿದ್ದರು. ಊರಿನಲ್ಲಿ ನಡೆಯುವ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಎಲ್ಲರೊಂದಿಗೂ ಉತ್ತಮ ಸಂಬಂಧ ಹೊಂದಿದ್ದರು.

ಮೃತರು ತಂದೆ, ತಾಯಿ, ಸಹೋದರ, ಸಹೋದರಿ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Leave a Comment

error: Content is protected !!