25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ದ.ಕ ಜಿಲ್ಲಾ ಮಟ್ಟದ ಶ್ರೀ ಮದ್ಭಗವದ್ಗೀತಾ ಸ್ಪರ್ಧೆಗಳ ಉದ್ಘಾಟನೆ

ಬೆಳ್ತಂಗಡಿ: ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ – ಶಿರಸಿ, ಶ್ರೀ ಮದ್ಭಗವದ್ಗೀತಾ ಅಭಿಯಾನ ಸಮಿತಿ – ದ.ಕ , ಸಂಸ್ಕೃತ ಸಂಘ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳು ಉಜಿರೆ – ಧರ್ಮಸ್ಥಳ ಇವರ ಸಂಯುಕ್ತ ಆಶ್ರಯದಲ್ಲಿ ಶ್ರೀ ಭಗವದ್ಗೀತಾ ಅಭಿಯಾನ ಅಂಗವಾಗಿ ದಕ್ಷಿಣ ಕನ್ನಡ ಜಿಲ್ಲಾಮಟ್ಟದ ಶ್ರೀ ಭಗವದ್ಗೀತಾ ಸ್ಪರ್ಧೆಗಳ ಉದ್ಘಾಟನೆ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕನ್ನಡ ಮಾಧ್ಯಮ ಪ್ರೌಢ ಶಾಲೆಯಲ್ಲಿ ನಡೆಯಿತು.

ಉಜಿರೆಯ ಸಾಮಾಜಿಕ , ಧಾರ್ಮಿಕ ಮುಂದಾಳು ಹಾಗೂ ಕನ್ಯಾಡಿಯ ಯಕ್ಷಭಾರತಿ ( ರಿ ) ಇದರ ಅಧ್ಯಕ್ಷ ರಾಘವೇಂದ್ರ ಬೈಪಡಿತ್ತಾಯ ಉದ್ಘಾಟಿಸಿ ಶುಭ ಹಾರೈಸಿದರು.

ದ.ಕ ಜಿಲ್ಲಾ ಶ್ರೀ ಭಗವದ್ಗೀತಾ ಅಭಿಯಾನದ ಸಂಯೋಜಕ ಡಾ. ಮಧುಕೇಶ್ವರ ಶಾಸ್ತ್ರೀ , ಜಿಲ್ಲಾ ಸ್ಪರ್ಧಾ ಸಂಚಾಲಕರಾದ ಡಾ. ಶ್ರೀಧರ ಭಟ್ , ಬೆಳ್ತಂಗಡಿ ತಾಲೂಕು ಸಂಯೋಜಕ ಡಾ.ಪ್ರಸನ್ನಕುಮಾರ ಐತಾಳ್ , ಸಮಿತಿಯ ಸದಸ್ಯರಾದ ಉದಯಸುಬ್ರಹ್ಮಣ್ಯ , ಭಾಗ್ಯಲಕ್ಷ್ಮಿ ಹಾಗೂ ಇತರರು ಉಪಸ್ಥಿತರಿದ್ದರು.

ಕಂಠಪಾಠ , ಭಾಷಣ ಹಾಗೂ ರಸಪ್ರಶ್ನೆ ಸ್ಪರ್ಧೆಗಳಲ್ಲಿ ವಿಜೇತರಾದ ಪ್ರಾಥಮಿಕ , ಪ್ರೌಢ ಹಾಗೂ ಪಿಯುಸಿ ವಿದ್ಯಾರ್ಥಿಗಳ ಸ್ಪರ್ಧೆ ನಡೆಯಲಿದೆ.

ಗೀತಾ ಅಭಿಯಾನದ ಬೆಳ್ತಂಗಡಿ ತಾಲೂಕು ಸಂಯೋಜಕ ಡಾ.ಪ್ರಸನ್ನಕುಮಾರ ಐತಾಳ್ ನಿರೂಪಿಸಿ, ವಂದಿಸಿದರು.

Related posts

ತೆಕ್ಕಾರು ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ಅನ್ನದಾನ ಸೇವೆಯ ಕರಪತ್ರ ಬಿಡುಗಡೆ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ವತಿಯಿಂದ ವೇದಾವತಿ ರವರಿಗೆ ಮಂಜೂರಾತಿ ಪತ್ರ ವಿತರಣೆ

Suddi Udaya

ಬಳಂಜ: ಬ್ರಹ್ಮಶ್ರೀ ಕುಣಿತಾ ಭಜನಾ ಮಂಡಳಿಯಿಂದ ದೀಪಾವಳಿ ಸಂಭ್ರಮಾಚರಣೆ

Suddi Udaya

ಹೊಸಂಗಡಿ: ಬಡಕೋಡಿ ನಿವಾಸಿ ಶ್ರೀಮತಿ ಸುಶೀಲ ನಿಧನ

Suddi Udaya

ಬಾರ್ಯ, ತೆಕ್ಕಾರು ಪುತ್ತಿಲ ಗ್ರಾಮದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿ ಜಾತ್ರೋತ್ಸವ ಸಮಾಲೋಚನಾ ಸಭೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಧನಸಹಾಯ

Suddi Udaya
error: Content is protected !!