38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ದ.ಕ ಜಿಲ್ಲಾ ಮಟ್ಟದ ಶ್ರೀ ಮದ್ಭಗವದ್ಗೀತಾ ಸ್ಪರ್ಧೆಗಳ ಉದ್ಘಾಟನೆ

ಬೆಳ್ತಂಗಡಿ: ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ – ಶಿರಸಿ, ಶ್ರೀ ಮದ್ಭಗವದ್ಗೀತಾ ಅಭಿಯಾನ ಸಮಿತಿ – ದ.ಕ , ಸಂಸ್ಕೃತ ಸಂಘ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳು ಉಜಿರೆ – ಧರ್ಮಸ್ಥಳ ಇವರ ಸಂಯುಕ್ತ ಆಶ್ರಯದಲ್ಲಿ ಶ್ರೀ ಭಗವದ್ಗೀತಾ ಅಭಿಯಾನ ಅಂಗವಾಗಿ ದಕ್ಷಿಣ ಕನ್ನಡ ಜಿಲ್ಲಾಮಟ್ಟದ ಶ್ರೀ ಭಗವದ್ಗೀತಾ ಸ್ಪರ್ಧೆಗಳ ಉದ್ಘಾಟನೆ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕನ್ನಡ ಮಾಧ್ಯಮ ಪ್ರೌಢ ಶಾಲೆಯಲ್ಲಿ ನಡೆಯಿತು.

ಉಜಿರೆಯ ಸಾಮಾಜಿಕ , ಧಾರ್ಮಿಕ ಮುಂದಾಳು ಹಾಗೂ ಕನ್ಯಾಡಿಯ ಯಕ್ಷಭಾರತಿ ( ರಿ ) ಇದರ ಅಧ್ಯಕ್ಷ ರಾಘವೇಂದ್ರ ಬೈಪಡಿತ್ತಾಯ ಉದ್ಘಾಟಿಸಿ ಶುಭ ಹಾರೈಸಿದರು.

ದ.ಕ ಜಿಲ್ಲಾ ಶ್ರೀ ಭಗವದ್ಗೀತಾ ಅಭಿಯಾನದ ಸಂಯೋಜಕ ಡಾ. ಮಧುಕೇಶ್ವರ ಶಾಸ್ತ್ರೀ , ಜಿಲ್ಲಾ ಸ್ಪರ್ಧಾ ಸಂಚಾಲಕರಾದ ಡಾ. ಶ್ರೀಧರ ಭಟ್ , ಬೆಳ್ತಂಗಡಿ ತಾಲೂಕು ಸಂಯೋಜಕ ಡಾ.ಪ್ರಸನ್ನಕುಮಾರ ಐತಾಳ್ , ಸಮಿತಿಯ ಸದಸ್ಯರಾದ ಉದಯಸುಬ್ರಹ್ಮಣ್ಯ , ಭಾಗ್ಯಲಕ್ಷ್ಮಿ ಹಾಗೂ ಇತರರು ಉಪಸ್ಥಿತರಿದ್ದರು.

ಕಂಠಪಾಠ , ಭಾಷಣ ಹಾಗೂ ರಸಪ್ರಶ್ನೆ ಸ್ಪರ್ಧೆಗಳಲ್ಲಿ ವಿಜೇತರಾದ ಪ್ರಾಥಮಿಕ , ಪ್ರೌಢ ಹಾಗೂ ಪಿಯುಸಿ ವಿದ್ಯಾರ್ಥಿಗಳ ಸ್ಪರ್ಧೆ ನಡೆಯಲಿದೆ.

ಗೀತಾ ಅಭಿಯಾನದ ಬೆಳ್ತಂಗಡಿ ತಾಲೂಕು ಸಂಯೋಜಕ ಡಾ.ಪ್ರಸನ್ನಕುಮಾರ ಐತಾಳ್ ನಿರೂಪಿಸಿ, ವಂದಿಸಿದರು.

Related posts

ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದ ಪ್ರತಿಷ್ಠಾ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮಡಂತ್ಯಾರು ಗ್ರಾಮ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಸದಸ್ಯರಿಗೆ ಗೌರವಾರ್ಪಣೆ

Suddi Udaya

ಶಿಶಿಲ ಗ್ರಾ.ಪಂ. ನಲ್ಲಿ ಸ್ವಾತಂತ್ರ್ಯೋತ್ಸವ  ಆಚರಣೆ

Suddi Udaya

ಜಿಲ್ಲಾಮಟ್ಟದ ಕನ್ನಡ ಪ್ರಬಂಧ ಸ್ಪರ್ಧೆ: ವೇಣೂರು ಸ. ಪ್ರೌಢ ಶಾಲಾ ವಿದ್ಯಾರ್ಥಿ ಅನ್ವಿತಾ ಎ ಪ್ರಥಮ ಸ್ಥಾನ

Suddi Udaya

ನಾರಾವಿ ಉ.ಪ್ರಾಥಮಿಕ ಶಾಲೆ: ಪುಸ್ತಕ ವಿತರಣೆ

Suddi Udaya

ಮುಂಡಾಜೆ ಪ್ರೌಢಶಾಲೆ ಮುಂಡಾಜೆ ಶಾಲೆಗೆ ಶೇ. 95.28

Suddi Udaya
error: Content is protected !!