25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಯಕ್ಷಧ್ರುವ ಪಟ್ಲ ಫೌಂಡೇಶನ್ ಬೆಳ್ತಂಗಡಿ ಘಟಕದ ನೇತೃತ್ವದಲ್ಲಿ ಇಂದು(ಡಿ.2) ಉಜಿರೆ ರಥಬೀದಿಯಲ್ಲಿ “ಯಕ್ಷ ಸಂಭ್ರಮ-2023”

ಬೆಳ್ತಂಗಡಿ: ಯಕ್ಷಧ್ರುವ ಪಟ್ಲ ಫೌಂಡೇಶನ್ ಬೆಳ್ತಂಗಡಿ ಘಟಕ ಇದರ ವತಿಯಿಂದ “ಯಕ್ಷ ಸಂಭ್ರಮ 2023” ಕಾರ್ಯಕ್ರಮವು ವಿವಿಧ ವೇಷಭೂಷಣಗಳ ವೈಭವದ ಮೆರವಣಿಗೆ, ಆಕರ್ಷಕ ಸುಡುಮದ್ದು ಪ್ರದರ್ಶನ, ಸಭಾ ಕಾರ್ಯಕ್ರಮ, ಸಾಧಕರಿಗೆ ಸನ್ಮಾನ, ಯಕ್ಷಸಂಭ್ರಮ ಪ್ರಶಸ್ತಿ ಪ್ರದಾನ, ವಿಶೇಷ ಖಾದ್ಯಗಳ ಭೋಜನ ಮೊದಲಾದ ವೈವಿಧ್ಯಮ ಕಾರ್ಯಕ್ರಮಗಳೊಂದಿಗೆ ಡಿ.2 ರಂದು ಸಂಜೆ 6 ರಿಂದ ಉಜಿರೆಯ ಶ್ರೀ ಜನಾರ್ದನ ಸ್ವಾಮಿ ರಥಬೀದಿಯಲ್ಲಿ ಆದ್ದೂರಿಯಾಗಿ ಜರುಗಲಿದೆ.

ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯಕ್ಷಧ್ರುವ ಪಟ್ಲ ಘಟಕ ಬೆಳ್ತಂಗಡಿ ಇದರ ಗೌರವಾಧ್ಯಕ್ಷರಾದ ಶಶಿಧರ ಶೆಟ್ಟಿ ನವಶಕ್ತಿ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಜಮ್ಮು ಮತ್ತು ಕಾಶ್ಮೀರ ಸರ್ಕಾರ ವಿದ್ಯುತ್ ಇಲಾಖೆ ತತ್ವ ಕಾರ್ಯದರ್ಶಿ ಹಿರಿಯಡ್ಕ ರಾಜೇಶ್ ಪ್ರಸಾದ್, ವಿವೇಕಾನಂದ ವಿದ್ಯಾವರ್ತಕ ಸಂಘ, ಪುತ್ತೂರು ಇದರ ಅಧ್ಯಕ್ಷ ಡಾ. ಪ್ರಭಾಕರ ಭಟ್ ಕಲ್ಲಡ್ಕ, ಮೂಡಬಿದ್ರೆ ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ.ಎಂ ಮೋಹನ ಆಳ್ವ, ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರಾದ ಶರತ್‌ಕೃಷ್ಣ ಪಡ್ವೆಟ್ನಾಯ, ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ, ಉಜಿರೆ ಗ್ರಾ.ಪಂ ಅಧ್ಯಕ್ಷೆ ಶ್ರೀಮತಿ ಉಷಾ ಕಿರಣ್ ಕಾರಂತ್ ಭಾಗವಹಿಸಲಿದ್ದಾರೆ.

ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನ:
ಕಾರ್ಯಕ್ರಮದಲ್ಲಿ ಯಕ್ಷಗಾನ ಕ್ಷೇತ್ರದಲ್ಲಿ ಭಾಗವತರಾಗಿ ಸಾಧನೆಗೈದ ಮೋಹನ್ ಬೈಪಡಿತ್ತಾಯ, ಯಕ್ಷಗಾನ ಕಲಾವಿದ ಪ್ರಜ್ವಲ್ ಕುಮಾರ್ ಗುರುವಾಯನಕೆರೆ, ಕೃಷಿ ಕ್ಷೇತ್ರದ ಸಾಧಕ ಬಿ.ಕೆ ದೇವರಾಜ್ ಅಮೈ ಮಿತ್ತಬಾಗಿಲು ಇವರುಗಳಿಗೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ. ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿರರುವ ಲಕ್ಷ್ಮೀ ಗ್ರೂಪ್ಸ್ ಉಜಿರೆ ಇದರ ಮಾಲಕ ಮೋಹನ್ ಕುಮಾರ್, ಭರತ್ ಕುಮಾರ್ ಉಜಿರೆ, ಹಾಗೂ ಉದ್ಯಮಿಗಳಾದ ಶ್ರೀಮತಿ ಅರ್ಚನಾ ರಾಜೇಶ್ ಪೈ ಉಜಿರೆ ಇವರನ್ನು ಗೌರವಿಸಲಾಗುವುದು.

ಆಕರ್ಷಕ ಮೆರವಣಿಗೆ – 10 ಮಹಿಷಾಸುರ ಸಭಾ ಪ್ರವೇಶ
ಸಂಜೆ ಗಂಟೆ 5 ರಿಂದ ಉಜಿರೆ ಓಶಿಯನ್ ಪರ್ಲ್‌ನಿಂದ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ರಥಬೀದಿಯವರೆಗೆ 24 ಭಜನಾತಂಡಗಳು, ಚೆಂಡೆ, ಬ್ಯಾಂಡ್, ಕೊಂಬು, ಸ್ಯಾಕ್ಸೊಫೋನ್, ಆಕರ್ಷಕ ಸುಡುಮದ್ದು, ವಿವಿಧ ವೇಷ ಭೂಷಣಗಳೊಂದಿಗೆ ವೈಭವದ ಮೆರವಣಿಗೆ ನಡೆಯಲಿದೆ. ರಾತ್ರಿ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿಯವರ ಸಾರಥ್ಯದಲ್ಲಿ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ಕೃಪಾಪೋಷಿತ ಯಕ್ಷಗಾನ ಮಂಡಳಿ ನಾಗವೃಜ ಕ್ಷೇತ್ರ ಪಾವಂಜೆ ಇವರು “ಶ್ರೀ ದೇವಿ ಮಹಾತ್ಮೆ” ಎಂಬ ಪೌರಾಣಿಕ ಯಕ್ಷಗಾನ ಪ್ರದರ್ಶನಗೊಳ್ಳಲಿದೆ. ವಿಶೇಷ ಆಕರ್ಷಣೆಯಾಗಿ ಬಂಗಾರದ ಕಿರೀಟದಲ್ಲಿ ಶ್ರೀ ದೇವಿಯ ಪ್ರತ್ಯಕ್ಷದ ಸನ್ನಿವೇಶ, ಹತ್ತು ಮಹಿಷಾಸುರರ ಬಾಲಲೀಲೆಯ ಆಟಗಳೊಂದಿಗೆ ಸಭಾಪ್ರವೇಶ, ಚಂಡ-ಮುಂಡರ ಅಬ್ಬರದ ಪ್ರವೇಶ, ಹಲವು ವಿಶೇಷ ವೈಭವದ ಸನ್ನಿವೇಶಗಳು, ಆಕರ್ಷಣೀಯ ವಿದ್ಯುತ್ ದೀಪಾ ಸಂಯೋಜನೆ, ವಿಶೇಷ ಹೂವಿನ ಅಲಂಕಾರದ ರಂಗಸ್ಥಳ ಇರಲಿದೆ.

ವಿಶೇಷ ಭೋಜನ ಖಾದ್ಯಗಳ ಸವಿ
ರಾತ್ರಿ 7 ಗಂಟೆಯಿಂದ ವಿಶೇಷ ಖಾದ್ಯಗಳ ಭೋಜನ ವ್ಯವಸ್ಥೆ ಮಾಡಲಾಗಿದೆ. ಹುಳಿ ಉಪ್ಪಿನಕಾಯಿ, ಅವಲಕ್ಕಿ, ಉಪ್ಪಿಟ್ಟು, ಕಡ್ಲೆ, ಗೋಧಿ ಕೇಕ್, ಜಿಲೇಬಿ ರಾಬಡಿ, ಗೊಳಿಬಜೆ, ಅಕ್ಕಿ ಶ್ಯಾವಿಗೆ, ರಸಾಯನ, ಪುಳಿಯೊಗರೆ, ಬಸಳೆ ಪುಂಡಿ, ಸೆಟ್ ದೋಸೆ, ಮೆಣಸಿನ ಗಟ್ಟಿ. ಪಕಾಳಬಾಥ್, ಬೇಳೆ ಹೋಳಿಗೆ, ರಸಾಯನ ಇಡ್ಲಿ ಸಾಂಬಾರು, ಅಂಬಡೆ, ಚಟ್ನಿ, ಮೊಸರು, ಅನ್ನ, ಸಾಂಬಾರ್, ಚಹಾ, ಕಾಫಿ, ಕಷಾಯ, ನೆಲಕಡಲೆ ಸ್ಪೆಷಲ್ ಚರ್‌ಮುರಿ, ಮುಳ್ಳು ಸೌತೆ ಸ್ಪೆಷಲ್ ಸೊಜಿ ವಿಶೇಷ ಖಾದ್ಯಗಳನ್ನು ಸವಿಯುವ ಅವಕಾಶ ಇದೆ ಎಂದು


Related posts

ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ವಾರ್ಷಿಕ ಶಿಬಿರ ಉದ್ಘಾಟನೆ

Suddi Udaya

ಬಳಂಜ: ಅಸೌಖ್ಯದಿಂದ ರಾಮಕೃಷ್ಣ ಕುಲಾಲ್ ನಿಧನ

Suddi Udaya

ಬಿಜೆಪಿ ಹತ್ಯಡ್ಕ ಬೂತ್ ಸಂಖ್ಯೆ 216 ರ ಅಧ್ಯಕ್ಷರಾಗಿ ಪ್ರೇಮಚಂದ್ರ ಎಸ್. , ಕಾರ್ಯದರ್ಶಿಯಾಗಿ ರಾಜೇಶ್ ಗೌಡ ಆಯ್ಕೆ

Suddi Udaya

ಬೆಳ್ತಂಗಡಿ : ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕುಂದುಕೊರತೆ ಸಭೆ

Suddi Udaya

ಮರಳಿನ ತಾಯಿನಾಡು ದ.ಕ. ಜಿಲ್ಲೆಯಲ್ಲಿ ಮರಳು ಇಲ್ಲದೆ ಕಾರ್ಮಿಕರು ಬೀದಿಗೆ : ವಸಂತ ನಡ

Suddi Udaya

ಡಾ|| ಡಿ. ವೀರೇಂದ್ರ ಹೆಗ್ಗಡೆಯವರ ಕಾರ್ಯವೈಖರಿಗೆ ಪ್ರಧಾನಿಯವರಿಂದ ಮೆಚ್ಚುಗೆ

Suddi Udaya
error: Content is protected !!