July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುತ್ಲೂರು ಉನ್ನತೀಕರಿಸಿದ ಸರಕಾರಿ ಶಾಲೆಯ ತೋಟ ಲೋಕಾರ್ಪಣೆ: ಶಿಕ್ಷಣ ಸಂಸ್ಥೆಗಳ ಅಭಿವೃದ್ಧಿಗೆ ಸಾಮೂಹಿಕ ಪ್ರಯತ್ನ ಅಗತ್ಯ-ಹರೇಕಳ ಹಾಜಬ್ಬ

ಕುತ್ಲೂರು : ಕುತ್ಲೂರು ಸರಕಾರಿ ಶಾಲೆ ಯ ಅಭಿವೃದ್ಧಿ ನೋಡಿ ಅತ್ಯಂತ ಹೆಚ್ಚು ಖುಷಿ ಪಟ್ಟಿರುವುದಾಗಿ ಪದ್ಮಶ್ರೀ ವಿಜೇತ ಹರೇಕಳ ಹಾಜಬ್ಬ ತಿಳಿಸಿದ್ದಾರೆ.

ಅವರು ಇಂದು ಬೆಳ್ತಂಗಡಿ ತಾಲೂಕಿನ ಕುತ್ಲೂರು ಉನ್ನತೀಕರಿಸಿದ ಸರಕಾರಿ ಶಾಲೆಯ ತೋಟವನ್ನು ಲೋಕಾರ್ಪಣೆ ಗೊಳಿಸಿ ಮಾತನಾಡುತ್ತಿದ್ದರು. ಊರಿನ ಜನ ಶಿಕ್ಷಣದ ಬಗ್ಗೆ ಆಸಕ್ತಿ ತೋರಿಸಿದಾಗ ಸಾಮೂಹಿಕ ಪ್ರಯತ್ನ ದಿಂದ ಶಿಕ್ಷಣ ಸಂಸ್ಥೆ ಅಭಿವೃದ್ಧಿ ಹೊಂದಲು ಸಾಧ್ಯ.ನಾನು ಕಿತ್ತಳೆ ಹಣ್ಣು ಮಾರಾಟ ಮಾಡುತ್ತಿದ್ದ ವ್ಯಕ್ತಿ. ನನ್ನ ಊರಿಗೆ ಸರಕಾರಿ ಶಾಲೆ ಆಗಬೇಕೆಂಬ ಇಚ್ಛೆಯಿಂದ ಜನಪ್ರತಿನಿಧಿಗಳು, ಮಾಧ್ಯಮಗಳು ಸೇರಿದಂತೆ ಶಿಕ್ಷಣದ ಆಸಕ್ತಿ ಹೊಂದಿರುವ ಜನರ ಸಹಕಾರ ದಿಂದ ನನ್ನ ಆಸೆ ಈಡೇರಿದೆ.ಅದೇ ರೀತಿ ಕುತ್ಲೂರಿನಲ್ಲಿಯೂ ಎಲ್ಲ ಜನರ ಸಹಕಾರದಿಂದ ಶಾಲಾ ತೋಟ,ಸಂಸ್ಥೆ ಬೆಳೆದು ಬಂದಿರುವುದು ನೋಡಿದಾಗ ಅತ್ಯಂತ ಹೆಚ್ಚು ಸಂತೋಷವಾಯಿತು ಎಂದು ಹಾಜಬ್ಬ ವಿವರಿಸಿದರು.

ಸಮಾರಂಭದ ಅಧ್ಯಕ್ಷತೆಯನ್ನು ರಾಜ ವರ್ಮ ಜೈನ್ ನಾರಾವಿ ಅಧ್ಯಕ್ಷ ತೆ ವಹಿಸಿದ್ದರು.ಧರ್ಮ ಸ್ಥಳ ಧರ್ಮೋತ್ಥಾನ ಟ್ರಸ್ಟ್ ನ ಕಾರ್ಯದರ್ಶಿ ವೀರು ಶೆಟ್ಟಿ ಧಮ೯ಸ್ದಳ , ದ.ಕ ಜಿಲ್ಲಾ ಪಂಚಾಯತ್ ನ ಮಾಜಿ ಉಪಾಧ್ಯಕ್ಷ ಧರಣೇಂದ್ರ ಕುಮಾರ್, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಹಾಯಕ ಯೋಜನಾಧಿಕಾರಿ ಆನಂದ ಸುವರ್ಣ, ಜೀವಂಧರ ಕುಮಾರ್, ಸತೀಶ್ ಪಡಿವಾಳ್, ಕೃಷ್ಣ ಪ್ಪ ಪೂಜಾರಿ ,ಕ್ಷೇತ್ರ ಶಿಕ್ಷಣಾಧಿಕಾರಿ‌ ತಾರಕೇಸರಿ,ಮುಖ್ಯೋಪಾಧ್ಯಾಯರಾದ ರೂಪ ಕುಮಾರಿ,ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಕೋಶಾಧಿ ಕಾರಿ ಪುಷ್ಪ ರಾಜ್ ಬಿ.ಎನ್,ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ ,ಪತ್ರಕರ್ತ ಧನಕೀರ್ತಿ ಅರಿಗ, ಎಸ್ ಡಿಎಂಸಿ ಉಪಾಧ್ಯಕ್ಷ ಜ್ಯೋತಿ ಸುವರ್ಣ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ನಿಮಿತ್ ಜೈನ್, ಉಪಸ್ಥಿತರಿದ್ದರು.

ಎಸ್ ಡಿಎಂ ಸಿ ಅಧ್ಯಕ್ಷ ರಾಮಚಂದ್ರ ಭಟ್ ಸ್ವಾಗತಿಸಿದರು.ಸತೀಶ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿ ಅನಿತಾ ವಂದಿಸಿದರು.ಇದೇ ಸಂದರ್ಭದಲ್ಲಿ ಶಾಲಾ ವಾರ್ಷಿಕೊತ್ಸವ ಸಮಾರಂಭದಲ್ಲಿ ಸ್ವಧಾ೯ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

Related posts

ಬೆಳಗಾವಿ ಅಧಿವೇಶನ: ಕಾಡಾನೆಗಳ ನಿರಂತರ ಹಾವಳಿಯಿಂದಾಗಿ ಬೆಳೆ ನಾಶ: ಶಾಶ್ವತ ಪರಿಹಾರ ಒದಗಿಸಿ-ವಿ.ಪ.ಸದಸ್ಯ ಪ್ರತಾಪಸಿಂಹ ನಾಯಕ್ ಆಗ್ರಹ

Suddi Udaya

ಬೆಳ್ತಂಗಡಿ :ಬೈಕ್- ಕಾರು ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ನಾವರ ಗ್ರಾಮದ ಯುವಕ ಸಾವು

Suddi Udaya

ಧರ್ಮಸ್ಥಳ: ಜನಜಾಗೃತಿ ವೇದಿಕೆ ಪದಾಧಿಕಾರಿಗಳ ಸಹಮಿಲನ ಮತ್ತು ವ್ಯಸನಮುಕ್ತರ ಕುಟುಂಬೋತ್ಸವ ಕಾರ್ಯಕ್ರಮ

Suddi Udaya

ಚಾರ್ಮಾಡಿ: ಚಾಲಕನ ನಿಯಂತ್ರಣ ತಪ್ಪಿ ವಾಹನಗಳು ಪಲ್ಟಿ: ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

Suddi Udaya

ರತ್ನಮಾನಸ ವಿದ್ಯಾರ್ಥಿನಿಲಯದಲ್ಲಿ ಶಿವರಾತ್ರಿ ಆಚರಣೆ

Suddi Udaya

ಧರ್ಮಸ್ಥಳದಲ್ಲಿ ಶಿವರಾತ್ರಿ ವೈಭವ : ಪಾದಯಾತ್ರಿಗಳಿಗೆ ಸನ್ಮಾನ

Suddi Udaya
error: Content is protected !!