23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಕಡಿರ ಬನದಲ್ಲಿ ನಾಲ್ಕು ನಾಗನ ಕಲ್ಲುಗಳು ಹಾಗೂ ಎರಡು ಮಣ್ಣಿನ ಮಡಕೆ, ಒಂದು ತಿಬಿಲೆ ಪತ್ತೆ

ಕೊಕ್ಕಡ : ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ನಡೆದ ಅಷ್ಟಮಂಗಳ ಪ್ರಶ್ನೆಯಲ್ಲಿ ದೇವಸ್ಥಾನದ ಹತ್ತಿರ ಕಡಿರ ಬನ ಎಂಬಲ್ಲಿ ನಾಗನ ಸಾನಿಧ್ಯ ಇದ್ದು, ನಾಗನ ಬಗ್ಗೆ ಕಂಡು ಬರಲಿಲ್ಲ. ದೇವಸ್ಥಾನದಲ್ಲಿ 2 ವರ್ಷಗಳ ಹಿಂದೆ ಪ್ರಶ್ನೆ ಚಿಂತನೆಯಲ್ಲಿ ಕಂಡು ಬಂದಂತೆ ನಾಗತಂಬಿಲ ನೆರವೇರಿಸಲಾಯಿತು. ಆ ಜಾಗ ಸರಕಾರ ಎಂದು ತಿಳಿದು ಬಂದ ಕೂಡಲೇ ಜಿಲ್ಲಾಧಿಕಾರಿಗಳಿಗೆ ಜಾಗವನ್ನು ದೇವಸ್ಥಾನಕ್ಕೆ ಮಾಡಿಕೊಡಬೇಕೆಂದು ಬರೆದುಕೊಳ್ಳಲಾಯಿತು. ಅದರಂತೆ 5ಎಕ್ರೆ ಜಾಗವನ್ನು ಜಿಲ್ಲಾಧಿಕಾರಿಯವರು ಧಾರ್ಮಿಕ ದತ್ತಿ ಇಲಾಖೆಗೆ ಮಂಜೂರುಗೊಳಿಸಿ ದೇವಸ್ಥಾನಕ್ಕೆ ಹಸ್ತಾಂತರಿಸಲಾಯಿತು.

ದೇವಸ್ಥಾನದ ವತಿಯಿಂದ 12 ದಿನಗಳ ಹಿಂದೆ ಅನುಜ್ಞ ಕಲಶ ನೆರವೇರಿಸಿ ಡಿ.2ರಂದು ಜೀರ್ಣೋದ್ದಾರ ಕೆಲಸ ಪ್ರಾರಂಭಿಸಲಾಯಿತು. ಈ ಸಂಧರ್ಭ ತಂಬೂರಿ ನಾಗ, ನಾಗ, ಕಾಡ್ಯಾ ನಾಗ ಎನ್ನುವ ನಾಲ್ಕು ನಾಗನ ಕಲ್ಲುಗಳು ಹಾಗೂ ನಾಗನ ಉಬ್ಬು ಚಿತ್ರಗಳನ್ನು ಹೊಂದಿದ ಗಟ್ಟಿಮುಟ್ಟಾದ 2ಮಣ್ಣಿನ ಮಡಕೆ, 1ತಿಬಿಲೆ ದೊರೆತಿದೆ. ಜಗನ್ನಿವಾಸ ರಾವ್ ರವರು ಇದು ಸುಮಾರು 500ವರ್ಷಗಳ ಹಿಂದಿನ ವಸ್ತುಗಳು ಹಾಗೂ ಇದು ಬಹಳ ಅಪರೂಪ ಎಂದು ವಿವರಿಸಿದ್ದಾರೆ.

Related posts

ನ.23: ಅಳದಂಗಡಿ ಪಾಲಬೆಯಲ್ಲಿ ಶ್ರೀದೇವಿ ಮಹಾತ್ಮೆ ಯಕ್ಷಗಾನ ಪ್ರದರ್ಶನ

Suddi Udaya

ಕ್ಯಾನ್ಸರ್ ಪೀಡಿತರಿಗಾಗಿ ಕೇಶದಾನಗೈದು ಮಾದರಿಯಾದ ಸುಪ್ರಾಶ್ವರಾಜ್ ಜೈನ್ ಶಿರ್ಲಾಲು

Suddi Udaya

ಬಂಗಾಡಿ ವಲಯ ಮಟ್ಟದ ಕಬಡ್ಡಿ ಪಂದ್ಯಾಟ: ಸ್ಟಾರ್ ಲೈನ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ವೇಣೂರು: ವಿದ್ಯಾರ್ಥಿನಿಯರನ್ನು ಚುಡಾಯಿಸುತ್ತಿದ್ದ ಯುವಕನ ಬಂಧನ: ಆರೋಪಿಯನ್ನು ಪೊಲೀಸರಿಗೆ ಒಪ್ಪಿಸಿದ ಹಿಂ.ಜಾ.ವೇ. ಕಾರ್ಯಕರ್ತರು

Suddi Udaya

ರೆಂಕೆದಗುತ್ತು: ವಿಪರೀತ ಮಳೆಯಿಂದ ಮನೆಗೆ ಹಾನಿ: ಸ್ಥಳಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ, ಪರಿಶೀಲನೆ

Suddi Udaya

ಶಿಶಿಲ ಜನಸ್ಪಂದನ ಕಾರ್ಯಕ್ರಮದಲ್ಲಿ ಬಂದ ದೂರು ಅರ್ಜಿಯ ಮೇರೆಗೆ ಸ್ಥಳ ಪರಿಶೀಲಿಸಿದ ಶಾಸಕರು

Suddi Udaya
error: Content is protected !!