22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಕಡಿರ ಬನದಲ್ಲಿ ನಾಲ್ಕು ನಾಗನ ಕಲ್ಲುಗಳು ಹಾಗೂ ಎರಡು ಮಣ್ಣಿನ ಮಡಕೆ, ಒಂದು ತಿಬಿಲೆ ಪತ್ತೆ

ಕೊಕ್ಕಡ : ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ನಡೆದ ಅಷ್ಟಮಂಗಳ ಪ್ರಶ್ನೆಯಲ್ಲಿ ದೇವಸ್ಥಾನದ ಹತ್ತಿರ ಕಡಿರ ಬನ ಎಂಬಲ್ಲಿ ನಾಗನ ಸಾನಿಧ್ಯ ಇದ್ದು, ನಾಗನ ಬಗ್ಗೆ ಕಂಡು ಬರಲಿಲ್ಲ. ದೇವಸ್ಥಾನದಲ್ಲಿ 2 ವರ್ಷಗಳ ಹಿಂದೆ ಪ್ರಶ್ನೆ ಚಿಂತನೆಯಲ್ಲಿ ಕಂಡು ಬಂದಂತೆ ನಾಗತಂಬಿಲ ನೆರವೇರಿಸಲಾಯಿತು. ಆ ಜಾಗ ಸರಕಾರ ಎಂದು ತಿಳಿದು ಬಂದ ಕೂಡಲೇ ಜಿಲ್ಲಾಧಿಕಾರಿಗಳಿಗೆ ಜಾಗವನ್ನು ದೇವಸ್ಥಾನಕ್ಕೆ ಮಾಡಿಕೊಡಬೇಕೆಂದು ಬರೆದುಕೊಳ್ಳಲಾಯಿತು. ಅದರಂತೆ 5ಎಕ್ರೆ ಜಾಗವನ್ನು ಜಿಲ್ಲಾಧಿಕಾರಿಯವರು ಧಾರ್ಮಿಕ ದತ್ತಿ ಇಲಾಖೆಗೆ ಮಂಜೂರುಗೊಳಿಸಿ ದೇವಸ್ಥಾನಕ್ಕೆ ಹಸ್ತಾಂತರಿಸಲಾಯಿತು.

ದೇವಸ್ಥಾನದ ವತಿಯಿಂದ 12 ದಿನಗಳ ಹಿಂದೆ ಅನುಜ್ಞ ಕಲಶ ನೆರವೇರಿಸಿ ಡಿ.2ರಂದು ಜೀರ್ಣೋದ್ದಾರ ಕೆಲಸ ಪ್ರಾರಂಭಿಸಲಾಯಿತು. ಈ ಸಂಧರ್ಭ ತಂಬೂರಿ ನಾಗ, ನಾಗ, ಕಾಡ್ಯಾ ನಾಗ ಎನ್ನುವ ನಾಲ್ಕು ನಾಗನ ಕಲ್ಲುಗಳು ಹಾಗೂ ನಾಗನ ಉಬ್ಬು ಚಿತ್ರಗಳನ್ನು ಹೊಂದಿದ ಗಟ್ಟಿಮುಟ್ಟಾದ 2ಮಣ್ಣಿನ ಮಡಕೆ, 1ತಿಬಿಲೆ ದೊರೆತಿದೆ. ಜಗನ್ನಿವಾಸ ರಾವ್ ರವರು ಇದು ಸುಮಾರು 500ವರ್ಷಗಳ ಹಿಂದಿನ ವಸ್ತುಗಳು ಹಾಗೂ ಇದು ಬಹಳ ಅಪರೂಪ ಎಂದು ವಿವರಿಸಿದ್ದಾರೆ.

Related posts

ಪುಂಜಾಲಕಟ್ಟೆ ಪುಂಡಲೀಕ ಬಾಳಿಗಾ & ಸನ್ಸ್‌ ಜ್ಯವೆಲ್ಲರ್ಸ್ ನಲ್ಲಿ ಅಕ್ಷಯ ತೃತೀಯ ವಿಶೇಷ ಮಾರಾಟ ಸೇವೆ

Suddi Udaya

ಕುಕ್ಕಾವುನಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಎಕ್ಸೆಲ್ ನಲ್ಲಿ ಪ್ರಥಮ ಪಿಯುಸಿ ವಿಜ್ಞಾನ ವಿದ್ಯಾರ್ಥಿಗಳ ಒರಿಯಂಟೇಶನ್

Suddi Udaya

ಸೌತಡ್ಕ ಶ್ರೀ ಮಹಾ ಗಣಪತಿ ಕ್ಷೇತ್ರಕ್ಕೆ ನಟ ರಿಷಬ್ ಶೆಟ್ಟಿ ಭೇಟಿ

Suddi Udaya

ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪದವಿ ವಿಭಾಗದ ವಿದ್ಯಾರ್ಥಿಗಳಿಗೆ “ಬ್ಯಾಂಕಿಂಗ್ ಸೆಕ್ಟರ್ಸ್ ರಿಫಾರ್ಮ್ಸ್ ” ಮಾಹಿತಿ ಕಾರ್ಯಗಾರ

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಗೆ ಅಸ್ಸಾಂ ಮುಖ್ಯಮಂತ್ರಿ ಗೌರವಾರ್ಪಣೆ

Suddi Udaya
error: Content is protected !!