September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಕಡಿರ ಬನದಲ್ಲಿ ನಾಲ್ಕು ನಾಗನ ಕಲ್ಲುಗಳು ಹಾಗೂ ಎರಡು ಮಣ್ಣಿನ ಮಡಕೆ, ಒಂದು ತಿಬಿಲೆ ಪತ್ತೆ

ಕೊಕ್ಕಡ : ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ನಡೆದ ಅಷ್ಟಮಂಗಳ ಪ್ರಶ್ನೆಯಲ್ಲಿ ದೇವಸ್ಥಾನದ ಹತ್ತಿರ ಕಡಿರ ಬನ ಎಂಬಲ್ಲಿ ನಾಗನ ಸಾನಿಧ್ಯ ಇದ್ದು, ನಾಗನ ಬಗ್ಗೆ ಕಂಡು ಬರಲಿಲ್ಲ. ದೇವಸ್ಥಾನದಲ್ಲಿ 2 ವರ್ಷಗಳ ಹಿಂದೆ ಪ್ರಶ್ನೆ ಚಿಂತನೆಯಲ್ಲಿ ಕಂಡು ಬಂದಂತೆ ನಾಗತಂಬಿಲ ನೆರವೇರಿಸಲಾಯಿತು. ಆ ಜಾಗ ಸರಕಾರ ಎಂದು ತಿಳಿದು ಬಂದ ಕೂಡಲೇ ಜಿಲ್ಲಾಧಿಕಾರಿಗಳಿಗೆ ಜಾಗವನ್ನು ದೇವಸ್ಥಾನಕ್ಕೆ ಮಾಡಿಕೊಡಬೇಕೆಂದು ಬರೆದುಕೊಳ್ಳಲಾಯಿತು. ಅದರಂತೆ 5ಎಕ್ರೆ ಜಾಗವನ್ನು ಜಿಲ್ಲಾಧಿಕಾರಿಯವರು ಧಾರ್ಮಿಕ ದತ್ತಿ ಇಲಾಖೆಗೆ ಮಂಜೂರುಗೊಳಿಸಿ ದೇವಸ್ಥಾನಕ್ಕೆ ಹಸ್ತಾಂತರಿಸಲಾಯಿತು.

ದೇವಸ್ಥಾನದ ವತಿಯಿಂದ 12 ದಿನಗಳ ಹಿಂದೆ ಅನುಜ್ಞ ಕಲಶ ನೆರವೇರಿಸಿ ಡಿ.2ರಂದು ಜೀರ್ಣೋದ್ದಾರ ಕೆಲಸ ಪ್ರಾರಂಭಿಸಲಾಯಿತು. ಈ ಸಂಧರ್ಭ ತಂಬೂರಿ ನಾಗ, ನಾಗ, ಕಾಡ್ಯಾ ನಾಗ ಎನ್ನುವ ನಾಲ್ಕು ನಾಗನ ಕಲ್ಲುಗಳು ಹಾಗೂ ನಾಗನ ಉಬ್ಬು ಚಿತ್ರಗಳನ್ನು ಹೊಂದಿದ ಗಟ್ಟಿಮುಟ್ಟಾದ 2ಮಣ್ಣಿನ ಮಡಕೆ, 1ತಿಬಿಲೆ ದೊರೆತಿದೆ. ಜಗನ್ನಿವಾಸ ರಾವ್ ರವರು ಇದು ಸುಮಾರು 500ವರ್ಷಗಳ ಹಿಂದಿನ ವಸ್ತುಗಳು ಹಾಗೂ ಇದು ಬಹಳ ಅಪರೂಪ ಎಂದು ವಿವರಿಸಿದ್ದಾರೆ.

Related posts

ವಲಯ ಮಟ್ಟದ ಖೋ ಖೋ ಪಂದ್ಯಾಟ: ಕರಂಬಾರು ಶಾಲೆ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಎಸ್‌.ಡಿ.ಎಂ ಸ್ನಾತಕೋತ್ತರ ಕೇಂದ್ರದ ಸಮಾಜಕಾರ್ಯ ಮತ್ತು ಸಂಶೋಧನಾ ವಿಭಾಗದಿಂದ ಅಗ್ನಿ ಸುರಕ್ಷತೆ, ಆರೋಗ್ಯ ಸುರಕ್ಷತೆ, ಹಾಗೂ ವಿಪತ್ತು ನಿರ್ವಹಣೆ ಕುರಿತು ಜಾಗೃತಿ ತರಬೇತಿ

Suddi Udaya

ಪಡಂಗಡಿ ಗ್ರಾ.ಪಂ ವ್ಯಾಪ್ತಿಯ ಹಲ್ಲಂದೋಡಿ ಪರಿಸರದಲ್ಲಿ ಸರಕಾರಿ ಭೂಮಿ ಅತಿಕ್ರಮಣ ಆರೋಪ: ನ್ಯಾಯಕ್ಕಾಗಿ ಹಲ್ಲಂದೋಡಿ ಸಂತೋಷ್ ಶೆಟ್ಟಿಯವರಿಂದ ಗ್ರಾಮಕರಣಿಕರ ಕಚೇರಿ ಎದುರು ಧರಣಿ

Suddi Udaya

ಮುಹಮ್ಮದ್ ಹಫೀಝ್ 100ನೇ ದಿನದ ಸ್ಮರಣಾರ್ಥ ಎಸ್.ಬಿ.ಎಸ್ ಕುಂಟಿನಿ ಮದರಸ ವತಿಯಿಂದ ರಕ್ತದಾನ ಶಿಬಿರ

Suddi Udaya

ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ

Suddi Udaya

ಕರ್ನಾಟಕ ದಲಿತ ಚಳುವಳಿಗೆ 50ರ ಸಂಭ್ರಮ: ಎ.28 ಬೆಳ್ತಂಗಡಿಯಲ್ಲಿ 50 ರ ಸಂಭ್ರಮ ಸಮಾವೇಶ- ದಲಿತ ಸಾಂಸ್ಕೃತಿಕ ವೈವಿಧ್ಯ

Suddi Udaya
error: Content is protected !!