23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಕಡಿರ ಬನದಲ್ಲಿ ನಾಲ್ಕು ನಾಗನ ಕಲ್ಲುಗಳು ಹಾಗೂ ಎರಡು ಮಣ್ಣಿನ ಮಡಕೆ, ಒಂದು ತಿಬಿಲೆ ಪತ್ತೆ

ಕೊಕ್ಕಡ : ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ನಡೆದ ಅಷ್ಟಮಂಗಳ ಪ್ರಶ್ನೆಯಲ್ಲಿ ದೇವಸ್ಥಾನದ ಹತ್ತಿರ ಕಡಿರ ಬನ ಎಂಬಲ್ಲಿ ನಾಗನ ಸಾನಿಧ್ಯ ಇದ್ದು, ನಾಗನ ಬಗ್ಗೆ ಕಂಡು ಬರಲಿಲ್ಲ. ದೇವಸ್ಥಾನದಲ್ಲಿ 2 ವರ್ಷಗಳ ಹಿಂದೆ ಪ್ರಶ್ನೆ ಚಿಂತನೆಯಲ್ಲಿ ಕಂಡು ಬಂದಂತೆ ನಾಗತಂಬಿಲ ನೆರವೇರಿಸಲಾಯಿತು. ಆ ಜಾಗ ಸರಕಾರ ಎಂದು ತಿಳಿದು ಬಂದ ಕೂಡಲೇ ಜಿಲ್ಲಾಧಿಕಾರಿಗಳಿಗೆ ಜಾಗವನ್ನು ದೇವಸ್ಥಾನಕ್ಕೆ ಮಾಡಿಕೊಡಬೇಕೆಂದು ಬರೆದುಕೊಳ್ಳಲಾಯಿತು. ಅದರಂತೆ 5ಎಕ್ರೆ ಜಾಗವನ್ನು ಜಿಲ್ಲಾಧಿಕಾರಿಯವರು ಧಾರ್ಮಿಕ ದತ್ತಿ ಇಲಾಖೆಗೆ ಮಂಜೂರುಗೊಳಿಸಿ ದೇವಸ್ಥಾನಕ್ಕೆ ಹಸ್ತಾಂತರಿಸಲಾಯಿತು.

ದೇವಸ್ಥಾನದ ವತಿಯಿಂದ 12 ದಿನಗಳ ಹಿಂದೆ ಅನುಜ್ಞ ಕಲಶ ನೆರವೇರಿಸಿ ಡಿ.2ರಂದು ಜೀರ್ಣೋದ್ದಾರ ಕೆಲಸ ಪ್ರಾರಂಭಿಸಲಾಯಿತು. ಈ ಸಂಧರ್ಭ ತಂಬೂರಿ ನಾಗ, ನಾಗ, ಕಾಡ್ಯಾ ನಾಗ ಎನ್ನುವ ನಾಲ್ಕು ನಾಗನ ಕಲ್ಲುಗಳು ಹಾಗೂ ನಾಗನ ಉಬ್ಬು ಚಿತ್ರಗಳನ್ನು ಹೊಂದಿದ ಗಟ್ಟಿಮುಟ್ಟಾದ 2ಮಣ್ಣಿನ ಮಡಕೆ, 1ತಿಬಿಲೆ ದೊರೆತಿದೆ. ಜಗನ್ನಿವಾಸ ರಾವ್ ರವರು ಇದು ಸುಮಾರು 500ವರ್ಷಗಳ ಹಿಂದಿನ ವಸ್ತುಗಳು ಹಾಗೂ ಇದು ಬಹಳ ಅಪರೂಪ ಎಂದು ವಿವರಿಸಿದ್ದಾರೆ.

Related posts

ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ

Suddi Udaya

ಬೆಳ್ತಂಗಡಿ ಛೇಂಬರ್ ಆಫ್ ಕಾಮರ್ಸ್ ಇದರ ಮಾಸಿಕ ಸಭೆ

Suddi Udaya

ಗುರುವಾಯನಕೆರೆ ಯಡೂ೯ರು ರಾತ್ರಿ ಮನೆಯೊಳಗಡೆ ಬಿದ್ದು ರಕ್ತಸ್ರಾವವಾಗಿ ಮುರಳಿಧರ ಭಟ್ ಮೃತ್ಯು

Suddi Udaya

ಕನ್ಯಾಡಿ ಶ್ರೀ ರಾಮ ಕ್ಷೇತ್ರಕ್ಕೆ ಬಿಜೆಪಿ ರಾಜ್ಯ ಸಂಘಟನಾ ಕಾರ್ಯದರ್ಶಿ ರಾಜೇಶ್ ಜಿ.ವಿ ಭೇಟಿ

Suddi Udaya

ಪಡಂಗಡಿ ಗ್ರಾ.ಪಂ. ನಲ್ಲಿ ಕ್ರಿಯಾ ಯೋಜನೆ ತಯಾರಿ ಬಗ್ಗೆ ವಿಶೇಷ ಗ್ರಾಮ ಸಭೆ

Suddi Udaya

ರಾಷ್ಟ್ರೀಯ ಕರಾಟೆ ಪಂದ್ಯಾಟ: ಬೆಳ್ತಂಗಡಿಯ ಶೊರಿನ್ ರಿಯೊ ಕರಾಟೆ ಅಶೋಷಿಯೇಶನ್ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

Suddi Udaya
error: Content is protected !!