25.7 C
ಪುತ್ತೂರು, ಬೆಳ್ತಂಗಡಿ
March 7, 2026
ಧಾರ್ಮಿಕಪ್ರಮುಖ ಸುದ್ದಿ

ಪಿಲಿಚಾಮುಂಡಿಕಲ್ಲಿನಲ್ಲಿ ಭಕ್ತಿ -ಭಾವ ಸಂಭ್ರಮದಿಂದ ಆದ್ದೂರಿಯಾಗಿ ನಡೆದ ದೊಂಪದಬಲಿ ಉತ್ಸವ

ಗುರುವಾಯನಕೆರೆ: ದೊಂಪದಬಲಿ ಉತ್ಸವ ಸಮಿತಿ ಪಿಲಿಚಾಮುಂಡಿಕಲ್ಲು ಇದರ ಆಶ್ರಯದಲ್ಲಿ ವರ್ಷಂಪ್ರತಿ ನಡೆಯುವ ಶ್ರೀ ಪಿಲಿಚಾಮುಂಡಿ ದೈವದ ದೊಂಪದಬಲಿ ಉತ್ಸವವು ಡಿ.2ರಂದು ಪಿಲಿಚಾಮುಂಡಿಕಲ್ಲಿನಲ್ಲಿ ಭಕ್ತಿ -ಭಾವ, ಸಂಭ್ರಮದಿಂದ ವಿಜೃಂಭಣೆಯಿಂದ ನಡೆಯಿತು .

ಸಂಜೆ 5ಗಂಟೆಗೆ ಪಾಡ್ಯಾರುಬೀಡು ಮನೆಯಿಂದ ದೈವದ ಭಂಡಾರವನ್ನು ಭಕ್ತರ ಉಪಸ್ಥಿತಿಯಲ್ಲಿ ವೈಭವದ ಮೆರವಣಿಗೆ ಮೂಲಕ ಪಿಲಿಚಾಮುಂಡಿಕಲ್ಲಿಗೆ ತರಲಾಯಿತು. ನಂತರ ಸಾರ್ವಜನಿಕರಿಗೆ ಅನ್ನಸಂತರ್ಪಣೆ ಕಾರ್ಯಕ್ರಮ ನಡೆಯಿತು . ರಾತ್ರಿ ಶ್ರೀ ಪಿಲಿಚಾಮುಂಡಿ ದೈವದ ದೊಂಪದಬಲಿ ಉತ್ಸವ ಆದ್ದೂರಿಯಾಗಿ ನಡೆಯಿತು.

ಈ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ತಾಲೂಕಿನಾದ್ಯಂತದಿಂದ ಹಾಗೂ ಪರವೂರಗಳಿಂದಲೂ ಭಕ್ತರು ಭಾಗವಹಿಸಿ, ಶ್ರೀ ದೈವದ ಸಿರಿಮುಡಿ ಗಂಧಪ್ರಸಾದವನ್ನು ಸ್ವೀಕರಿಸಿದರು.

ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಪ್ರಭಾಕರ ಬಂಗೇರ, ಅಳದಂಗಡಿ ಅರಮನೆಯ ಶಿವಪ್ರಸಾದ್ ಅಜಿಲ, ಸುಕೇಶ್ ಕುಮಾರ್ ಕಡಂಬು ಸೇರಿದಂತೆ ಗಣ್ಯರು ಭಾಗವಹಿಸಿದ್ದರು.

ದೊಂಪದಬಲಿ ಉತ್ಸವ ಸಮಿತಿಯ ಗೌರವಾಧ್ಯಕ್ಷ ಪ್ರವೀಣ್‌ ಕುಮಾ‌ರ್ ಅಜ್ರಿ ಪಾಡ್ಯಾರುಬೀಡು, ಶ್ರೀನಿವಾಸ ಅಸ್ರಣ್ಣರು ಮೂಡುಮನೆ, ಸಮಿತಿ ಅಧ್ಯಕ್ಷ ಸೋಮಶೇಖರ ದೇವಸ್ಯ ಎ.ರಾಜಶೇಖರ ಶೆಟ್ಟಿ ಚಾವಡಿ ನಾಯಕರು ಅಳದಂಗಡಿ

ಅರಮನೆ, ಪ್ರಧಾನ ಕಾರ್ಯದರ್ಶಿ ಜಿ. ನಾಗೇಶ್ ಮೂಲ್ಯ , ಉಪಾಧ್ಯಕ್ಷ ವಿತೇಶ್ ಬಂಗೇರ, ಕಾರ್ಯದರ್ಶಿ ಶೋಭಿತ್ ಜೈನ್, ಕೋಶಾಧಿಕಾರಿ ನಾರಾಯಣ ಆಚಾರ್ಯ ಬರಾಯ ಹಾಗೂ ಸಮಿತಿಯ ಸರ್ವಸದಸ್ಯರ ಸಹಕಾರದಲ್ಲಿ ನೇಮೋತ್ಸವ ಯಶಸ್ವಿಯಾಗಿ ನಡೆಯಿತು.

Related posts

ಮುಳಿಯ ಜ್ಯುವೆಲ್ಸ್‌ನಲ್ಲಿ ‘ಮುಳಿಯ ಚಿನ್ನೋತ್ಸವ’ ಪ್ರಾರಂಭ

Suddi Udaya

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಿಂದ ದ.ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಗೆ ಗೌರವ

Suddi Udaya

ಉಜಿರೆ: ಶ್ರೀ ಶಾರದಾ ಪೂಜೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬಳಂಜ: ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಅಧ್ಯಕ್ಷರಾಗಿ ಸಂತೋಷ್ ಪಿ.ಕೋಟ್ಯಾನ್ ಪುನರಾಯ್ಕೆ

Suddi Udaya

ಭರತನಾಟ್ಯ ವಿದ್ವತ್ ಪೂರ್ವ ದರ್ಜೆ ಪರೀಕ್ಷೆ: ಪುಂಜಾಲಕಟ್ಟೆಯ ಪಿ. ಬಿ ವೈಷ್ಣವಿ ಡಿಸ್ಟಿಂಕ್ಷನಲ್ಲಿ ತೇರ್ಗಡೆ

Suddi Udaya

ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಯಾತ್ರಾರ್ಥಿಯಾಗಿ ಬಂದಿದ್ದ ಮಹಿಳೆಯ ಬ್ಯಾಗಿನಲ್ಲಿದ್ದ ಪರ್ಸಿನಿಂದ ರೂ 2.16ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ರೂ. 5 ಸಾವಿರ ನಗದು ಕಳವು

Suddi Udaya
error: Content is protected !!