September 6, 2026
ತಾಲೂಕು ಸುದ್ದಿಪ್ರಮುಖ ಸುದ್ದಿ

ಗುರುವಾಯನಕೆರೆಯಲ್ಲಿ ಸಂಭ್ರಮದ ಬಂಟೋತ್ಸವ

ಬೆಳ್ತಂಗಡಿ: ಬಂಟರಯಾನೆ ನಾಡವರ ಸಂಘ ಬೆಳ್ತಂಗಡಿ, ಬಂಟರ ಭವನ, ಗುರುವಾಯನಕೆರೆ, ಮತ್ತು ತಾಲೂಕು ಮಹಿಳಾ ವಿಭಾಗ ಹಾಗೂ ತಾಲೂಕು ಯುವ ಬಂಟರ ವಿಭಾಗ ಇವುಗಳ ಸಂಯುಕ್ತ ಆಶ್ರಯದಲ್ಲಿ ಬಂಟೋತ್ಸವ- 2023 ಕಾರ್ಯಕ್ರಮವು ಡಿ.3 ರಂದು ಬಂಟರ ಭವನ ಗುರುವಾಯನಕೆರೆಯಲ್ಲಿ ಆದ್ದೂರಿಯಾಗಿ ನಡೆಯಿತು
ಕಾರ್ಯಕ್ರಮ ಉದ್ಘಾಟನೆಯನ್ನು ಹೇರಾಂಭ ಇಂಡಸ್ಟ್ರೀಸ್ ಮುಂಬಯಿ ಇದರ ಸಿ.ಎಂ.ಡಿ ಸದಾಶಿವ ಶೆಟ್ಟಿ ಕನ್ಯಾನ ನೆರವೇರಿಸಿದರು . ಬಂಟರ ಯಾನೆ ನಾಡವರ ಸಂಘ ಬೆಳ್ತಂಗಡಿ ಇದರ ಅಧ್ಯಕ್ಷ ಜಯರಾಮ ಶೆಟ್ಟಿ ಮುಂಡಾಡಿಗುತ್ತು ಅಧ್ಯಕ್ಷತೆ ವಹಿಸಿದರು.

ಮುಖ್ಯ ಅತಿಥಿಗಳಾಗಿ ಬಂಟರ ಸಂಘ ಹುಬ್ಬಳ್ಳಿ, ಧಾರವಾಡ ಅಧ್ಯಕ್ಷ ಸುಗ್ಗಿ ಸುಧಾಕರ ಶೆಟ್ಟಿ, ಪಂಜುರ್ಲಿ ಗ್ರೂಪ್ ಆಫ್‌ ಹೋಟೆಲ್ಸ್‌ ಹುಬ್ಬಳ್ಳಿ ಉದ್ಯಮಿ ರಾಜೇಂದ್ರ ವಿ.ಶೆಟ್ಟಿ, ಬಂಟರ ಸಂಘ ಪಿಂಪ್ರಿ-ಚಿಂಕ್ವಾಡ್ ಅಧ್ಯಕ್ಷ ರಾಕೇಶ್‌ ರೈ ಬೆಳ್ಳಾರೆ ಭಾಗವಹಿಸಿದ್ದರು.
ಪ್ರಶಾಂತ್ ಶೆಟ್ಟಿ, ಉದ್ಯಮಿಗಳೆ ಕನಕ ಹಾಸ್ಪಿಟಾಲಿಟಿ, ಕುರ್ಕಾಲು ಹರೀಶ್ ಶೆಟ್ಟಿ, ಉದ್ಯಮಿಗಳು, ಪುಣೆ, ಅಧ್ಯಕ್ಷರು, ತುಳುಕೂಟ ಪಿಂಪ್ರಿ- ಚಿಂಕ್ವಾಡ್, ಉಜಿರೆ ದಿನೇಶ್ ಶೆಟ್ಟಿ, ಉದ್ಯಮಿಗಳು ಪುಣೆ.ಉಪಾಧ್ಯಕ್ಷರು, ತುಳುಕೂಟ ಪಿಂಪ್ರಿ- ಚಿಂಕ್ವಾಡ್ ಉಪಸ್ಥಿತರಿದ್ದರು.
ವೇದಿಕೆಯಲ್ಲಿ ಸಂಜೀವ ಶೆಟ್ಟಿ ಕುಂಟಿನಿ ಕಾರ್ಯದರ್ಶಿ, ಕೆ.ಎನ್. ಆನಂದ ಶೆಟ್ಟಿ ಕೋಶಾಧಿಕಾರಿ
ಕೆ. ವಿಠಲ ಶೆಟ್ಟಿ ಕೊಲ್ಲೊಟ್ಟು ಉಪಾಧ್ಯಕ್ಷರು, ಸುರೇಶ್ ಶೆಟ್ಟಿ ಲ್ಯಾಲ ಜತೆ ಕಾರ್ಯದರ್ಶಿ , ಸುಜಯ್ ಶೆಟ್ಟಿ ಬಾರ್ದಾಜೆ ಅಧ್ಯಕ್ಷರು, ಯುವ ವಿಭಾಗ, ಶ್ರೀಮತಿ ಶೋಭಾ ವಿ. ಶೆಟ್ಟಿ
ಅಧ್ಯಕ್ಷರು, ಮಹಿಳಾ ವಿಭಾಗ ಉಪಸ್ಥಿತರಿದ್ದರು. ಬಂಟ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರನ್ನು ಸನ್ಮಾನಿಸಲಾಯಿತು.
ಭಾಸ್ಕರ ಕಾಯಾ೯ನ ಇವರ ಪ್ರಾಥ೯ನೆ ಬಿಳಿಕ ಬಂಟರ ಸಂಘದ ಮಾಜಿ ಅಧ್ಯಕ್ಷ ಎ. ಜಯರಾಮ್ ಶೆಟ್ಟಿ ಸ್ವಾಗತಿಸಿದರು. ನಿತೇಶ್ ಶೆಟ್ಟಿ ಎಕ್ಕಾರು ಕಾಯ೯ಕ್ರಮ ನಿರೂಪಿಸಿದರು.

Related posts

ವಲಯ ಮಟ್ಟದ ಕೌಶಲ್ಯ ಸ್ಪರ್ಧೆ: ಆದರ್ಶ್ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿಗೆ ಸತತ ಮೂರನೇ ಬಾರಿಗೆ ಶೇ. 100 ಫಲಿತಾಂಶ

Suddi Udaya

ವಲಯ ಸಮ್ಮೇಳನದಲ್ಲಿ ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಛೇoಬರಿಗೆ ಸಮಗ್ರ ಪ್ರಶಸ್ತಿ

Suddi Udaya

ಪುಂಜಾಲಕಟ್ಟೆಯಲ್ಲಿ ಲಾರಿ ಪಲ್ಟಿ: ಓರ್ವ ಸಾವು

Suddi Udaya

ತುಂಬೆತ್ತಡ್ಕ ರಾಣೆಯಾರ್ ಸಮಾಜ ಸೇವಾ ಸಂಘದ ವತಿಯಿಂದ ಶ್ರಮದಾನ

Suddi Udaya

ಪ್ರತಿಷ್ಠಿತ ಗಾಂಧಿಗ್ರಾಮ ಪ್ರಶಸ್ತಿಗೆ ಕಾಶಿಪಟ್ಣ ಗ್ರಾಮ ಪಂಚಾಯತ್ ಆಯ್ಕೆ

Suddi Udaya
error: Content is protected !!