April 2, 2025
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆಯ ರುಡ್‌ಸೆಟ್ ಸಂಸ್ಥೆಯಲ್ಲಿ ನಡೆಯುವ ಉಚಿತ ತರಬೇತಿಗಳಿಗೆ ಅರ್ಜಿ ಆಹ್ವಾನ

ಉಜಿರೆ: ಉಜಿರೆಯ ರುಡ್‌ಸೆಟ್ ಸಂಸ್ಥೆಯಲ್ಲಿ ಮುಂದಿನ ದಿನಗಳಲ್ಲಿ ನಡೆಯಲಿರುವ ತರಬೇತಿ ಕಾರ್ಯಕ್ರಮಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.


ಕೃತಕ ಆಭರಣಗಳ ತಯಾರಿಕೆ ಡಿ.18 ರಿಂದ ಡಿ.30 ರವರೆಗೆ (13 ದಿನಗಳು), ಮೋಟಾರ್ ರಿವೈಂಡಿಂಗ್ ಜ.4 ರಿಂದ ಫೆ.2ರವರೆಗೆ (30 ದಿನಗಳು), ಜೇನು ಸಾಕಾಣಿಕೆ ಜ.8 ರಿಂದ ಜ.17 ರವರೆಗೆ (10 ದಿನಗಳು), ಎಸಿ ಮತ್ತು ಫ್ರಿಡ್ಜ್ ರಿಪೇರಿ ಜ.19 ರಿಂದ ಫೆ.17ರವರೆಗೆ (30 ದಿನಗಳು), ಗ್ರಾಮೀಣ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಫೆ.5 ರಿಂದ ಫೆ.17 ರವರೆಗೆ (13 ದಿನಗಳು)  ತರಬೇತಿಗಳು ನಡೆಯಲಿದೆ.


ಜೊತೆಗೆ ಮುಂದಿನ ದಿನಗಳಲ್ಲಿ ಕೃಷಿ ಉದ್ಯಮಿ, ಮೊಬೈಲ್ ಫೋನ್ ರಿಪೇರಿ, ಮೆನ್ಸ್ ಪಾರ್ಲರ್, ಮೋದಲಾದ ತರಬೇತಿಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ಎಲ್ಲಾ ತರಬೇತಿಗಳು ಊಟ ಮತ್ತು ವಸತಿಯೊಂದಿಗೆ ಸಂಪೂರ್ಣವಾಗಿ ಉಚಿತವಾಗಿರುತ್ತದೆ. ಆಸಕ್ತ ಅಭ್ಯರ್ಥಿಗಳು 18 ರಿಂದ 45 ವರ್ಷಗಳ ವಯೋಮಿತಿಯ ಕನ್ನಡ ಓದು ಬರಹ ಬಲ್ಲ ಯುವಕ/ಯುವತಿಯರು ರುಡ್ ಸೆಟ್ ಸಂಸ್ಥೆಯ email - [email protected] ಗೆ ಸಲ್ಲಿಸಬಹುದು, ವಾಟ್ಸಪ್ ಮೂಲಕ ಅರ್ಜಿ ಸಲ್ಲಿಸುವವರು ಮೊಬೈಲ್ ನಂ. 9364561982 ಗೆ ಸಲ್ಲಿಸಬಹುದು. ನೇರವಾಗಿ ಕೂಡ ಅರ್ಜಿಯನ್ನು ಸಲ್ಲಿಸಬಹುದು ಅಥವಾ ಬಿಳಿ ಹಾಳೆಯಲ್ಲಿ ಅರ್ಜಿಯನ್ನು ಬರೆದು  ನಿರ್ದೇಶಕರು ರುಡ್‌ಸೆಟ್ ಸಂಸ್ಥೆ, ಸಿದ್ದವನ ಉಜಿರೆ 574240, ಇವರಿಗೆ ಕಳೂಹಿಸಬಹುದು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08256-236404, ಅಥವಾ 9591044014, 9902594791 ಗೆ ಸಂಪರ್ಕಿಸಬಹುದು. ಜೊತೆಗೆ https://forms.gle/Z2xPLE1FigamcMBd9 ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಇದೆ. 

Related posts

ಮೈಸೂರಿನ ಎಸ್.ಡಿ.ಎಂ.ಐ.ಎಂ.ಡಿ.ಯ ಪಿ.ಜಿ.ಡಿ.ಎಂ. ಕೋರ್ಸಿಗೆ ಎರಡನೆ ಬಾರಿ ಇ.ಎಫ್.ಎಂ.ಡಿ. ಮಾನ್ಯತೆ ನವೀಕರಣ: ಡಾ| ಡಿ. ಹೆಗ್ಗಡೆಯವರಿಂದ ಜಾಗತಿಕ ಮಾನ್ಯತೆ ನವೀಕರಣ ಪ್ರಮಾಣಪತ್ರ ಸ್ವೀಕಾರ

Suddi Udaya

ಪತಿಯೊಂದಿಗೆ ಕೋಪಗೊಂಡು ಆತ್ಮಹತ್ಯೆಗೆ ಯತ್ನ: ನದಿ ಹಾರಲು ಯತ್ನಿಸಿದ ಮಹಿಳೆಯ ಜೀವ ಕಾಪಾಡಿದ ಸಾಕು ನಾಯಿ

Suddi Udaya

ಮುಂಡಾಜೆ :ಯುವ ಸಾಹಿತಿ ಆಪ್ತಿ ಪಟವರ್ಧನ್ ರವರು ಬರೆದ ಜರ್ನಿ ಅಂಡರ್‌ದ ಸ್ಕೈ ಪುಸ್ತಕ ಬಿಡುಗಡೆ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಎನ್ ಪದ್ಮನಾಭ ಮಾಣಿಂಜ, ಯುವವಾಹಿನಿ ಬೆಳ್ತಂಗಡಿ ಘಟಕದಿಂದ ನುಡಿ ನಮನ

Suddi Udaya

ಬೆಳ್ತಂಗಡಿ ಖಿಲರ್ ಜುಮ್ಮಾ ಮಸೀದಿಯಲ್ಲಿ ಮಿಲಾದ್ ಸಾಂಸ್ಕೃತಿಕ ಕಾರ್ಯಕ್ರಮಗಳ ಸಮಾರೋಪ

Suddi Udaya

ಬೆನಕ ಆಸ್ಪತ್ರೆಯಿಂದ ಡಾ| ಕೇಶವ ರವರಿಗೆ ಗೌರವಾರ್ಪಣೆ

Suddi Udaya
error: Content is protected !!