25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಬೆಳಾಲು: ಅನಂತ ಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳಾಲು: ಡಿ.25 ಮತ್ತು 26 ರಂದು ನಡೆಯುವ ಬೆಳಾಲು ಶ್ರೀ ಅನಂತ ಪದ್ಮನಾಭ ದೇವಸ್ಥಾನ ಅನಂತೋಡಿ ಇದರ ವಾರ್ಷಿಕ ಜಾತ್ರೆ ಹಾಗೂ ಪರಿವಾರ ದೈವಗಳ ಸಿರಿಸಿಂಗಾರ ನರ್ತನ ಸೇವೆಯ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಲಾಯಿತು.


ಸಭೆಯ ಅಧ್ಯಕ್ಷತೆಯನ್ನು ಜಾತ್ರಾ ಸಮಿತಿಯ ಪ್ರಧಾನ ಸಂಚಾಲಕ ದೇಜಪ್ಪ ಗೌಡ ಅರಣೆಮಾರು ವಹಿಸಿದರು.

ಸಭೆಯಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರ ಜೀವಂಧರ್ ಕುಮಾರ್ ಜೈನ್, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ, ನೋಟರಿ ವಕೀಲ ಶ್ರೀನಿವಾಸ ಗೌಡ, ಉಪಾಧ್ಯಕ್ಷ ಮಮತ ದಿನೇಶ್ ಪೂಜಾರಿ ಉಪ್ಪಾರ್, ಸಮಿತಿಯ ಹಿರಿಯ ಸದಸ್ಯ ಎನ್. ಜತ್ತಣ್ಣ ಗೌಡ ಏರ್ದೊಟ್ಟು, ಮಹಿಳಾ ಸಮಿತಿ ಗೌರವಾಧ್ಯಕ್ಷ ವಿದ್ಯಾ ಶ್ರೀನಿವಾಸ ಗೌಡ, ಭಜನಾ ಮಂಡಳಿ ಅಧ್ಯಕ್ಷ ನವೀನ್ ಗೌಡ ಕಂಬಳದಡ್ಡ, ಶ್ರೀ ಕ್ಷೇ. ಧ.ಗ್ರಾ. ಯೋಜನೆ ಬೆಳಾಲು ಇದರ ಸೇವಾ ನಿರತೆ ಆಶಾ, ಮಾಯ ಮಹಾದೇವ ದೇವಸ್ಥಾನ ಸಮಿತಿ ಸದಸ್ಯ ಶಿವಕುಮಾರ್ ಬಾರಿತ್ತಾಯ ಪಾರಳೆ, ಹಿರಿಯ ಸದಸ್ಯ ಕುಂಜಿಬೊಟ್ಟು ಉದಿತ್ ಕುಮಾರ್ ಜೈನ್, ಲಿಂಗಪ್ಪ ಪೂಜಾರಿ ಬನಂದೂರು, ದೇಜಪ್ಪ ಗೌಡ ಎಳ್ಳುಗದ್ದೆ ಹಾಗೂ ಬೈಲುವಾರು ಸಮಿತಿ ಸಂಚಾಲಕರು-ಸಹಸಂಚಾಲಕರು, ಜಾತ್ರೆ ಉಪಸಮಿತಿಯ ಸದಸ್ಯರು ಉಪಸ್ಥಿತರಿದ್ದರು.


ಸಮಿತಿ ಕಾರ್ಯದರ್ಶಿ ಸತೀಶ್ ಗೌಡ ಎಳ್ಳುಗದ್ದೆ ಸ್ವಾಗತಿಸಿ, ಶಿವಪ್ರಸಾದ್ ಕೆ ಹಾಗೂ ನಾರಾಯಣ ಗೌಡ ಎಳ್ಳುಗದ್ದೆ ಕಾರ್ಯಕ್ರಮ ನಿರೂಪಿಸಿ, ಉಮೇಶ್ ಜಿ. ಮಂಜೊತ್ತು ವಂದಿಸಿದರು.

Related posts

ಕಲ್ಮಂಜ ಗ್ರಾಮ ಪಂಚಾಯತ್ ವತಿಯಿಂದ ನಿಡಿಗಲ್ ಪರಿಸರದ ಚರಂಡಿಗಳ ಸ್ವಚ್ಛತೆ

Suddi Udaya

ನಿಡ್ಲೆ ಸ.ಪ್ರೌ. ಶಾಲೆ ಇಕೋ ಕ್ಲಬ್ ವತಿಯಿಂದ ವಿದ್ಯಾರ್ಥಿಗಳಿಗೆ ಭೋರುಕಾ ಪವರ್ ಪ್ಲಾಂಟೇಶನ್ ಗೆ ಶೈಕ್ಷಣಿಕ ಪ್ರವಾಸ

Suddi Udaya

ಕಡಿರುದ್ಯಾವರ: ಚಾಲಕನ ನಿಯಂತ್ರಣ ತಪ್ಪಿ ಟಿಪ್ಪರ್ ಪಲ್ಟಿ

Suddi Udaya

ಅಶಕ್ತರ ಪಾಲಿನ ಆಶಾಕಿರಣ ದೀಪಕ್ ಜಿ. ಮಂಗಳೂರು ಪ್ರೆಸ್ ಕ್ಲಬ್ ವಾರ್ಷಿಕ ಪ್ರಶಸ್ತಿಗೆ ಆಯ್ಕೆ

Suddi Udaya

ಉಜಿರೆ: ಮಿತ್ರ ಯುವಕ ಮಂಡಲದಿಂದ ವೈದ್ಯಕೀಯ ನೆರವು ಹಸ್ತಾಂತರ

Suddi Udaya

ಬಳ್ಳಮಂಜ ಶ್ರೀ ವಿದ್ಯಾಸಾಗರ ಸಿಬಿಎಸ್ಇ ಶಾಲೆಗೆ ಶೇ.100 ಫಲಿತಾಂಶ

Suddi Udaya
error: Content is protected !!