July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಡಿ.17: ಬೆಳ್ತಂಗಡಿ ತಾಲೂಕು18 ನೇ ಕನ್ನಡ ಸಾಹಿತ್ಯ ಸಮ್ಮೇಳನ: ಡಾ. ಡಿ ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಇದರ ವತಿಯಿಂದ ದಶಂಬರ 17 ರಂದು ಬೆಳ್ತಂಗಡಿ ಹಳೆಕೋಟೆ ವಾಣಿ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ನಡೆಯಲಿರುವ ತಾಲೂಕಿನ 18 ನೇ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಧರ್ಮಸ್ಥಳದ ಅವರ ನಿವಾಸದಲ್ಲಿ ಡಿ.4 ರಂದು ಬಿಡುಗಡೆಗೊಳಿಸಿದರು.

ನಾಡು ನುಡಿಯ ಸಂರಕ್ಷಣೆಗೆ ಕನ್ನಡ ಸಾಹಿತ್ಯ ಪರಿಷತ್ತು ನಡೆಸುತ್ತಿರುವ ಕಾರ್ಯಕ್ಕೆ ಶ್ಲಾಘನೆ ವ್ಯಕ್ತಪಡಿಸಿದ ಅವರು ಕಾರ್ಯಕ್ರಮಕ್ಕೆ ಶುಭಕೋರಿದರು.

ಕನ್ನಡ ಸಾಹಿತ್ಯ ಪರಿಷತ್ತು ಬೆಳ್ತಂಗಡಿ ಘಟಕದ ಅಧ್ಯಕ್ಷ ಡಿ‌.ಯದುಪತಿ‌ ಗೌಡ, ಗೌರವ ಕಾರ್ಯದರ್ಶಿ ರಾಮಕೃಷ್ಣ ಭಟ್ ಬೆಳಾಲು, ಸಮ್ಮೇಳನ ಸಂಯೋಜನಾ ಸಮಿತಿ ಅಧ್ಯಕ್ಷ ಜಯಾನಂದ ಗೌಡ ಬೆಳ್ತಂಗಡಿ, ಪ್ರಧಾನ ಕಾರ್ಯದರ್ಶಿ ಮೋಹನ‌ ಗೌಡ, ಕೋಶಾಧಿಕಾರಿ ಮೀನಾಕ್ಷಿ ಮಹಾಬಲ‌ ಗೌಡ, ಉಪಾಧ್ಯಕ್ಷ ವಿಷ್ಣುಪ್ರಕಾಶ, ಕಸಾಪ ಸಂಘ ಸಂಸ್ಥೆಗಳ ಪ್ರತಿನಿಧಿ ಅಶ್ರಫ್ ಆಲಿಕುಂಞಿ ಮುಂಡಾಜೆ, ಮಾಧ್ಯಮ ಪ್ರಚಾರ ಸಮಿತಿ ಸಂಚಾಲಕ ಚೈತ್ರೇಶ್ ಇಳಂತಿಲ ಉಪಸ್ಥಿತರಿದ್ದರು.

ಬಳಿಕ ನಿಯೋಗದಿಂದ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಿ‌‌.ಹರ್ಷೇಂದ್ರ ಕುಮಾರ್ ಅವರಿಗೂ ಆಮಂತ್ರಣ ನೀಡಲಾಯಿತು.

Related posts

ಆಕರ್ಷ ಗೆ ಪಿ. ಎಚ್. ಡಿ ಪ್ರದಾನ

Suddi Udaya

ಧರ್ಮಸ್ಥಳ: ಶಾಂತಿವನ ಮಣ್ಣ ಸಂಕ ಅರಣ್ಯ ಪ್ರದೇಶದ ಗುಡ್ಡಕ್ಕೆ ಬೆಂಕಿ

Suddi Udaya

‘ಸ್ಟ್ಯಾಟ್‌ಟೆಕ್- 2023’ ಅಂತರ್ ಕಾಲೇಜು ಮಟ್ಟದ ಸ್ಪರ್ಧೆಯ ಸಮಾರೋಪ

Suddi Udaya

ಜೋಡುಸ್ಥಾನ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ಯುಗಂಧರ್, ಕಾರ್ಯದರ್ಶಿ ಚೇತನ್

Suddi Udaya

ಪಾಲಡ್ಕ ಹಾಲು ಉತ್ಪಾದಕರ ಸಹಕಾರ ಸಂಘ: ಅಧ್ಯಕ್ಷರಾಗಿ ಧರ್ಣಪ್ಪ ಕುಲಾಲ್, ಉಪಾಧ್ಯಕ್ಷರಾಗಿ ಹರೀಶ್ ಗೌಡ ಆಯ್ಕೆ

Suddi Udaya

ಶಿವರಾತ್ರಿ ಪ್ರಯುಕ್ತ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸುವ ಪಾದಯಾತ್ರಿಗಳಿಗೆ ಸಿಯೋನ್ ಆಶ್ರಮದಿಂದ ಉಚಿತ ಮಜ್ಜಿಗೆ ವಿತರಣೆ

Suddi Udaya
error: Content is protected !!