25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಡಿ.17: ಬೆಳ್ತಂಗಡಿ ತಾಲೂಕು18 ನೇ ಕನ್ನಡ ಸಾಹಿತ್ಯ ಸಮ್ಮೇಳನ: ಡಾ. ಡಿ ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಇದರ ವತಿಯಿಂದ ದಶಂಬರ 17 ರಂದು ಬೆಳ್ತಂಗಡಿ ಹಳೆಕೋಟೆ ವಾಣಿ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ನಡೆಯಲಿರುವ ತಾಲೂಕಿನ 18 ನೇ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಧರ್ಮಸ್ಥಳದ ಅವರ ನಿವಾಸದಲ್ಲಿ ಡಿ.4 ರಂದು ಬಿಡುಗಡೆಗೊಳಿಸಿದರು.

ನಾಡು ನುಡಿಯ ಸಂರಕ್ಷಣೆಗೆ ಕನ್ನಡ ಸಾಹಿತ್ಯ ಪರಿಷತ್ತು ನಡೆಸುತ್ತಿರುವ ಕಾರ್ಯಕ್ಕೆ ಶ್ಲಾಘನೆ ವ್ಯಕ್ತಪಡಿಸಿದ ಅವರು ಕಾರ್ಯಕ್ರಮಕ್ಕೆ ಶುಭಕೋರಿದರು.

ಕನ್ನಡ ಸಾಹಿತ್ಯ ಪರಿಷತ್ತು ಬೆಳ್ತಂಗಡಿ ಘಟಕದ ಅಧ್ಯಕ್ಷ ಡಿ‌.ಯದುಪತಿ‌ ಗೌಡ, ಗೌರವ ಕಾರ್ಯದರ್ಶಿ ರಾಮಕೃಷ್ಣ ಭಟ್ ಬೆಳಾಲು, ಸಮ್ಮೇಳನ ಸಂಯೋಜನಾ ಸಮಿತಿ ಅಧ್ಯಕ್ಷ ಜಯಾನಂದ ಗೌಡ ಬೆಳ್ತಂಗಡಿ, ಪ್ರಧಾನ ಕಾರ್ಯದರ್ಶಿ ಮೋಹನ‌ ಗೌಡ, ಕೋಶಾಧಿಕಾರಿ ಮೀನಾಕ್ಷಿ ಮಹಾಬಲ‌ ಗೌಡ, ಉಪಾಧ್ಯಕ್ಷ ವಿಷ್ಣುಪ್ರಕಾಶ, ಕಸಾಪ ಸಂಘ ಸಂಸ್ಥೆಗಳ ಪ್ರತಿನಿಧಿ ಅಶ್ರಫ್ ಆಲಿಕುಂಞಿ ಮುಂಡಾಜೆ, ಮಾಧ್ಯಮ ಪ್ರಚಾರ ಸಮಿತಿ ಸಂಚಾಲಕ ಚೈತ್ರೇಶ್ ಇಳಂತಿಲ ಉಪಸ್ಥಿತರಿದ್ದರು.

ಬಳಿಕ ನಿಯೋಗದಿಂದ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಿ‌‌.ಹರ್ಷೇಂದ್ರ ಕುಮಾರ್ ಅವರಿಗೂ ಆಮಂತ್ರಣ ನೀಡಲಾಯಿತು.

Related posts

ಪೆರಿಂಜೆ: ಪಡ್ಡ್ಯಾರಬೆಟ್ಟ ದೈವಸ್ಥಾನ ಕ್ಷೇತ್ರ ವಾರ್ಷಿಕ ಜಾತ್ರೋತ್ಸವ ಸಂಪನ್ನ, ಸಾಧಕರಿಗೆ ಗೌರವ, ವಿದ್ಯಾರ್ಥಿ ವೇತನ ವಿತರಣೆ

Suddi Udaya

ಬಂದಾರು : ಹಲವು ಮಂದಿ ಕಾಂಗ್ರೆಸ್‌ ಪ್ರಮುಖರು ಬಿಜೆಪಿ ‌ಸೇರ್ಪಡೆ

Suddi Udaya

ಮಚ್ಚಿನ ಗ್ರಾಮದ ಕಾಂಗ್ರೆಸ್ ನ ಸಕ್ರಿಯ ನಾಯಕ ಸಂದೀಪ್ ಮಡಿವಾಳ್ ಬಿಜೆಪಿಗೆ ಸೇರ್ಪಡೆ

Suddi Udaya

ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜಸೇವಾ ಸಂಘಟನೆಯಿಂದ ಆಸರೆ 3ನೇ ಮನೆ ಹಸ್ತಾಂತರ

Suddi Udaya

ಜು.22: ಕಳೆಂಜ ಮತ್ತು ಶಿರ್ಲಾಲು ಗ್ರಾಮ ಪಂಚಾಯತ್ ವ್ಯಾಪ್ತಿಯ ಜನಸ್ಪಂದನಾ ಕಾರ್ಯಕ್ರಮ

Suddi Udaya

ಆರಂಬೋಡಿ ಗ್ರಾ.ಪಂ. ನ ಅಧ್ಯಕ್ಷರಾಗಿ ಪ್ರವೀಣಚಂದ್ರ ಜೈನ್ ಮತ್ತು ಉಪಾಧ್ಯಕ್ಷರಾಗಿ ಶ್ರೀಮತಿ ತೇಜಸ್ವಿನಿ

Suddi Udaya
error: Content is protected !!