22.6 C
ಪುತ್ತೂರು, ಬೆಳ್ತಂಗಡಿ
July 23, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿ

ಧರ್ಮಸ್ಥಳ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಟಿ.ವಿ. ದೇವಸ್ಯ, ಉಪಾಧ್ಯಕ್ಷರಾಗಿ ಸುನಿಲ್ ದೊಂಡೋಲೆ ಅವಿರೋಧ ಆಯ್ಕೆ

ಧರ್ಮಸ್ಥಳ: ಧರ್ಮಸ್ಥಳ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಹಿರಿಯ ಕಾಂಗ್ರೆಸ್ ಮುಖಂಡ ಟಿ.ವಿ. ದೇವಸ್ಯ, ಉಪಾಧ್ಯಕ್ಷರಾಗಿ ಸುನಿಲ್ ದೊಂಡೋಲೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಸಂಘದ ಕಚೇರಿಯಲ್ಲಿ ಡಿ.4 ರಂದು ನಡೆದ ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಟಿ.ವಿ ದೇವಸ್ಯ ಅವರು ಮಾತ್ರ ನಾಮಪತ್ರ ಸಲ್ಲಿಸಿದ್ದು ಉಪಾಧ್ಯಕ್ಷ ಸ್ಥಾನಕ್ಕೆ ಸುನಿಲ್ ದೊಂಡೋಲೆ ಮಾತ್ರ ನಾಮಪತ್ರ ಸಲ್ಲಿಸಿದ್ದರು. ಹಿನ್ನಲೆಯಲ್ಲಿ ಇಬ್ಬರೂ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತರು ಎಲ್ಲ 13 ಸ್ಥಾನಗಳಲ್ಲಿಯೂ ಅವಿರೋಧವಾಗಿ ಆಯ್ಕೆಯಾಗಿದ್ದರು.

ನಿರ್ದೇಶಕರುಗಳಾದ ಕರಿಯಪ್ಪ, ಸಂತೋಷ್ ಕುಮಾರ್, ವಿ.ಜಿ.ಬಾಬು, ಕೆ.ಯು.ಜೋಸೆಫ್, ಟಿ.ಟಿ.ಬೆನ್ನಿ, ಮೋನಪ್ಪ ಪೂಜಾರಿ, ಗೋಪಿ, ವೀರಪ್ಪ ಮಲೆಕುಡಿಯ, ರವೀಂದ್ರ ಗೌಡ, ಲಲಿತಾ ಮತ್ತು ಬೇಬಿ ಕೆ. ಉಪಸ್ಥಿತರಿದ್ದರು.

ಸಹಕಾರ ಸಂಘಗಳ ಉಪ ನಿಬಂಧಕರ ಕಚೇರಿಯ ವಿಲಾಸ್ ಚುನಾವಣಾಧಿಕಾರಿಯಾಗಿದ್ದರು

Related posts

ಅಳದಂಗಡಿ ಶ್ರೀ ಮಹಾಗಣಪತಿ ದೇವರ ಬ್ರಹ್ಮ ಕಲಶೋತ್ಸವ

Suddi Udaya

ಲಯನ್ಸ್ ಫೌಂಡೇಶನ್ ವತಿಯಿಂದ ಬೆಳ್ತಂಗಡಿ ಲಯನ್ಸ್ ಭವನ ನಿರ್ಮಾಣಕ್ಕೆ ಬಿಡುಗಡೆಗೊಂಡ ರೂ. 5 ಲಕ್ಷ ದೇಣಿಗೆ ಹಸ್ತಾಂತರ

Suddi Udaya

ಧರ್ಮಸ್ಥಳ: 22ನೇ ರಾಜ್ಯ ಮಟ್ಟದ ಅಂಚೆ-ಕುಂಚ ಸ್ಪರ್ಧೆಯ ಫಲಿತಾಂಶ

Suddi Udaya

ಕಲ್ಮಂಜ : ಮದ್ಮಲ್‌ ಕಟ್ಟೆಯಲ್ಲಿ ನಿಲ್ಲಿಸಿದ ರೂ.65 ಸಾವಿರ ಮೌಲ್ಯದ ಮೋಟಾರ್‌ ಸೈಕಲ್‌ ಕಳವು

Suddi Udaya

ಎಸ್‌ಡಿಎಂ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಸೈಬರ್ ಅಪರಾಧಗಳ ತಡೆಗಟ್ಟುವಿಕೆ ಕುರಿತು ಮಾಹಿತಿ ಕಾರ್ಯಾಗಾರ

Suddi Udaya

ಪ್ರೇರಣ ಸೌಹಾರ್ದ ಸಹಕಾರಿ ಮತ್ತು ಸ್ವಸಹಾಯ ಸಂಘದ ವತಿಯಿಂದ ಉಚಿತ ಶ್ರವಣ ಯಂತ್ರ ವಿತರಣೆ

Suddi Udaya
error: Content is protected !!