ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ತುಳು ಭಾಷಣ ಸ್ಪರ್ಧೆ: ಬೆಳಾಲು ಪ್ರೌಢಶಾಲೆಯ ಕು. ಕೀರ್ತನಾ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಬೆಳಾಲು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿನಿ ಕು. ಕೀರ್ತನಾ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ತುಳು ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆ ಆಗಿದ್ದಾಳೆ. ಇತ್ತೀಚೆಗೆ ಮಂಗಳೂರಿನ ಶ್ರೀರಾಮಕೃಷ್ಣ ಪ್ರೌಢಶಾಲೆಯಲ್ಲಿ ಪ್ರತಿಭಾ ಕಾರಂಜಿ ಸ್ಪರ್ಧೆ ಆರೋಜನೆಗೊಂಡಿತ್ತು.

ಇವಳು ಬೆಳಾಲಿನ ಅಶ್ವತ್ಥದಡಿ ಪ್ರಮೋದ್ ಪೂಜಾರಿ ಮತ್ತು ಶೀಲಾವತಿ ದಂಪತಿಯ ಪುತ್ರಿಯಾಗಿದ್ದಾಳೆ. ಶಾಲೆಯ ತುಳು ಭಾಷಾ ಶಿಕ್ಷಕರಾದ ರವಿಚಂದ್ರ ಜೈನ್ ರವರು ತರಬೇತು ನೀಡಿದ್ದರು.

Leave a Comment

error: Content is protected !!