23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಂದಬೆಟ್ಟು : ಕಜೆ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ಬಾಲಮೇಳ ಕಾರ್ಯಕ್ರಮ

ಇಂದಬೆಟ್ಟು : ಕರ್ನಾಟಕ ಸರಕಾರ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇದರ ಆಶ್ರಯದಲ್ಲಿ ಬಾಲವಿಕಾಸ ಸಮಿತಿ, ಸ್ತ್ರೀ ಶಕ್ತಿ ಸಂಘ, ಗ್ರಾಮಾಭಿವೃದ್ಧಿ ಸ್ವ ಸಹಾಯ ಸಂಘ ಸಹಭಾಗಿತ್ವದಲ್ಲಿ ಇಂದಬೆಟ್ಟು ಗ್ರಾಮದ ಕಜೆ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ಬಾಲಮೇಳ ಕಾರ್ಯಕ್ರಮ ಡಿ.2ರಂದು ಮನ್ವಿತ್‌ರ ಅಧ್ಯಕ್ಷತೆಯಲ್ಲಿ ಜರುಗಿತು. ವೇದಿಕೆಯಲ್ಲಿ ಬಾಲವಿಕಾಸ ಸಮಿತಿ ಅಧ್ಯಕ್ಷ ರಾಜೇಶ್ವರಿ ಉಪಸ್ಥಿತರಿದ್ದು ಶುಭ ಹಾರೈಸಿದರು.

ಸಿಆರ್ ಟಿ ತಾಲೂಕು ಸಂಯೋಜಕ ವಿನೋದ್ ಪ್ರಸಾದ್ ಮಕ್ಕಳ ಹಕ್ಕುಗಳ ಬಗ್ಗೆ ಮಾಹಿತಿ ನೀಡಿದರು. ಆಶಾಕಾರ್ಯಕರ್ತೆ ಚಂದ್ರಕಾಂತಿ ಗರ್ಭಿಣಿ , ಬಾಣಂತಿ, ಶಿಶುವಿನ ಆರೈಕೆ ಬಗ್ಗೆ ಮಾಹಿತಿ ನೀಡಿದರು.


ಸ್ತ್ರೀ ಶಕ್ತಿ, ಸ್ವಸಹಾಯ ಸಂಘದ ಸದಸ್ಯರು ಹಾಗೂ ಪೋಷಕರಿಗೆ ಆಟೋಟ ಸ್ಪರ್ಧೆ ಏರ್ಪಡಿಸಲಾಯಿತು. ಕೀರ್ತಿ ಪ್ರಶಾಂತ್ ಬಹುಮಾನ ನೀಡಿ ಸಹಕರಿಸಿದರು.
ರಾಜೇಶ್ವರಿ ತೆಂಗಿನಕಾಯಿ ಸುಲಿಯುವ ಯಂತ್ರ, ಕವಿತಾ ನೆಹರು ಹಾಗೂ ಗಾಂಧೀಜಿಯವರ ಫೋಟೋ ಇವುಗಳನ್ನು ಅಂಗನವಾಡಿಗೆ ಕೊಡುಗೆಯಾಗಿ ನೀಡಿದರು.
ಲತಾ ಸ್ವಾಗತಿಸಿ, ಅಂಗನವಾಡಿ ಕಾರ್ಯಕರ್ತೆ ಸುಮತಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು. ಸಹಾಯಕಿ ಸುಮತಿ ಸಹಕರಿಸಿದರು.

Related posts

ವ್ಯವಹಾರ ಆಡಳಿತ ನಿರ್ವಹಣೆ ಯಲ್ಲಿ ಕೃತಕ ಬುದ್ಧಿಮತ್ತೆ ಮತ್ತು ವೈಜ್ಞಾನಿಕ ಆವಿಷ್ಕಾರಗಳು ಅವಕಾಶಗಳನ್ನೂ ಸೃಷ್ಟಿಸುತ್ತದೆ ” ಎನ್ನುವ ವಿಚಾರದ ಕುರಿತು ಉಪನ್ಯಾಸ ಕಾರ್ಯಕ್ರಮ

Suddi Udaya

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿಯ ವಾರ್ಷಿಕ ಮಹಾಸಭೆ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅ.ಹಿ. ಪ್ರಾ. ಶಾಲೆಗೆ ಗಡಿಯಾರ ಕೊಡುಗೆ

Suddi Udaya

ವಾಟ್ಸಾಪ್ನಲ್ಲಿ ಸ್ಟೇಟಸ್ ಹಾಕಿದ ವಿಚಾರದಲ್ಲಿ ಜಾತಿ ನಿಂದನೆ ಆರೋಪ: ನ್ಯಾಯಾಂಗ ಬಂಧನದಲ್ಲಿದ್ದ ಇಬ್ಬರಿಗೆ ಜಾಮೀನು

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನಲ್ಲಿ ವಿಜೃಂಭಣೆಯ ಎಕ್ಸೆಲ್ ಪರ್ಬ, ಪ್ರತಿಭಾ ಪುರಸ್ಕಾರ

Suddi Udaya

ಮುಂಡೂರು ಶ್ರೀ ನಾಗಂಬಿಕಾ ದೇವಸ್ಥಾನದಲ್ಲಿ ಸಂಭ್ರಮದ ನವರಾತ್ರಿ ಪೂಜಾ ಮಹೋತ್ಸವ

Suddi Udaya
error: Content is protected !!