22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಂದಬೆಟ್ಟು : ಕಜೆ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ಬಾಲಮೇಳ ಕಾರ್ಯಕ್ರಮ

ಇಂದಬೆಟ್ಟು : ಕರ್ನಾಟಕ ಸರಕಾರ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇದರ ಆಶ್ರಯದಲ್ಲಿ ಬಾಲವಿಕಾಸ ಸಮಿತಿ, ಸ್ತ್ರೀ ಶಕ್ತಿ ಸಂಘ, ಗ್ರಾಮಾಭಿವೃದ್ಧಿ ಸ್ವ ಸಹಾಯ ಸಂಘ ಸಹಭಾಗಿತ್ವದಲ್ಲಿ ಇಂದಬೆಟ್ಟು ಗ್ರಾಮದ ಕಜೆ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ಬಾಲಮೇಳ ಕಾರ್ಯಕ್ರಮ ಡಿ.2ರಂದು ಮನ್ವಿತ್‌ರ ಅಧ್ಯಕ್ಷತೆಯಲ್ಲಿ ಜರುಗಿತು. ವೇದಿಕೆಯಲ್ಲಿ ಬಾಲವಿಕಾಸ ಸಮಿತಿ ಅಧ್ಯಕ್ಷ ರಾಜೇಶ್ವರಿ ಉಪಸ್ಥಿತರಿದ್ದು ಶುಭ ಹಾರೈಸಿದರು.

ಸಿಆರ್ ಟಿ ತಾಲೂಕು ಸಂಯೋಜಕ ವಿನೋದ್ ಪ್ರಸಾದ್ ಮಕ್ಕಳ ಹಕ್ಕುಗಳ ಬಗ್ಗೆ ಮಾಹಿತಿ ನೀಡಿದರು. ಆಶಾಕಾರ್ಯಕರ್ತೆ ಚಂದ್ರಕಾಂತಿ ಗರ್ಭಿಣಿ , ಬಾಣಂತಿ, ಶಿಶುವಿನ ಆರೈಕೆ ಬಗ್ಗೆ ಮಾಹಿತಿ ನೀಡಿದರು.


ಸ್ತ್ರೀ ಶಕ್ತಿ, ಸ್ವಸಹಾಯ ಸಂಘದ ಸದಸ್ಯರು ಹಾಗೂ ಪೋಷಕರಿಗೆ ಆಟೋಟ ಸ್ಪರ್ಧೆ ಏರ್ಪಡಿಸಲಾಯಿತು. ಕೀರ್ತಿ ಪ್ರಶಾಂತ್ ಬಹುಮಾನ ನೀಡಿ ಸಹಕರಿಸಿದರು.
ರಾಜೇಶ್ವರಿ ತೆಂಗಿನಕಾಯಿ ಸುಲಿಯುವ ಯಂತ್ರ, ಕವಿತಾ ನೆಹರು ಹಾಗೂ ಗಾಂಧೀಜಿಯವರ ಫೋಟೋ ಇವುಗಳನ್ನು ಅಂಗನವಾಡಿಗೆ ಕೊಡುಗೆಯಾಗಿ ನೀಡಿದರು.
ಲತಾ ಸ್ವಾಗತಿಸಿ, ಅಂಗನವಾಡಿ ಕಾರ್ಯಕರ್ತೆ ಸುಮತಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು. ಸಹಾಯಕಿ ಸುಮತಿ ಸಹಕರಿಸಿದರು.

Related posts

ಕುಂಭಶ್ರೀ ಶಾಲೆಯಲ್ಲಿ ಪಠ್ಯೇತರ ಚಟುವಟಿಕೆ

Suddi Udaya

ತಣ್ಣೀರುಪಂತ ಗ್ರಾ.ಪಂ. ವ್ಯಾಪ್ತಿಯ ಸಂಜೀವಿನಿ ಮಹಿಳಾ ಒಕ್ಕೂಟದ ಸದಸ್ಯರಿಂದ ತೋಡಿನ ಹೂಳೆತ್ತುವ ಕಾರ್ಯಕ್ರಮ

Suddi Udaya

ಹರೀಶ್ ಪೂಂಜ ಗೆಲುವು: ಬೆಳಾಲಿನಲ್ಲಿ ಕಾರ್ಯಕರ್ತರಿಂದ ಸಂಭ್ರಮಾಚರಣೆ

Suddi Udaya

ಪದ್ಮನಾಭ ಮಾಣಿಂಜ ನಿಧನಕ್ಕೆ ಕನ್ಯಾಡಿ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಸಂತಾಪ

Suddi Udaya

ಅದ್ಬುತ ವೇದಿಕೆಯಲ್ಲಿ ಬಳಂಜ ಶಾಲೆಯ ಅಮೃತ ಮಹೋತ್ಸವದ ಉದ್ಘಾಟನೆ,ಸ್ವಾಗತ ದ್ವಾರ ಲೋಕಾರ್ಪಣೆ, ಶಾಸಕರ ನಿಧಿಯಿಂದ ನಿರ್ಮಾಣಗೊಂಡ ಮಕ್ಕಳ ತಂಗುದಾನ ಉದ್ಘಾಟನೆ

Suddi Udaya

ಬಳ್ಳಮಂಜ : ಮಹತೋಭಾರ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಷಷ್ಠಿ ಮಹೋತ್ಸವ: ಕಣ್ಮಣ ಸೆಳೆದ ಬ್ರಹ್ಮರಥೋತ್ಸವ

Suddi Udaya
error: Content is protected !!