26.2 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಳಿಯ ಜುವೆಲ್ಸ್ ನಲ್ಲಿ “ಕನ್ನಡ ಬದುಕು ಬಂಗಾರ” ಕಾರ್ಯಕ್ರಮ

ಬೆಳ್ತಂಗಡಿ : ಮುಳಿಯ ಜುವೆಲ್ಸ್ ನಲ್ಲಿ “ಕನ್ನಡ ಬದುಕು ಬಂಗಾರ” ಕಾವ್ಯ, ಗಾನ, ಕುಂಚ, ನೃತ್ಯ, ಸಾಂಸ್ಕೃತಿಕ ವೈಭವವು ಡಿ.2ರಂದು ನಡೆಯಿತು.

ಕಾರ್ಯಕ್ರಮದ ಅತಿಥಿಗಳಾಗಿ ಪುಂಜಾಲಕಟ್ಟೆ ಪ.ಪೂ ಕಾಲೇಜಿನ ಪ್ರಾಂಶುಪಾಲರಾದ ಡಾ. ಟಿ.ಕೆ ಶರತ್ ಕುಮಾರ್ ಹಾಗೂ ಉಜಿರೆ ಶ್ರೀ .ಧ.ಮಂ.ಪ.ಪೂ ಕಾಲೇಜಿನ ಕನ್ನಡ ಉಪನ್ಯಾಸಕರು ಮಹಾವೀರ ಜೈನ್ ಇಚ್ಚಂಪಾಡಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ಬೆಳಾಲು ಎಸ್ ಡಿ ಎಮ್ ಹೈಸ್ಕೂಲ್ ನ ಮುಖ್ಯ ಶಿಕ್ಷಕ ರಾಮಕೃಷ್ಣ ಭಟ್ ಚೊಕ್ಕಾಡಿ, ಮುಂಡೂರು ಶಾಲೆ ಮುಖ್ಯ ಶಿಕ್ಷಕ ಕಲ್ಲೇಶಪ್ಪ ಕೆ ಬಿ, ಬಂದಾರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಕ ಪ್ರಶಾಂತ್ ಹಾಗೂ ಕಂಬಳ ಕ್ಷೇತ್ರದಲ್ಲಿ ಸಾಧನೆಗೈದ ಬಂಗಾಡಿ ನಾರಾಯಣ ಮಲೆಕುಡಿಯ ಇವರನ್ನು ಸನ್ಮಾನಿಸಲಾಯಿತು.


ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಮಾರ್ಕೆಟಿಂಗ್ ಕನ್ಸಲ್ವೆಂಟ್ ವೇಣು ಶರ್ಮ ಉಪಸ್ಥಿತರಿದ್ದರು.

ಬೆಳ್ತಂಗಡಿ ಮುಳಿಯ ಶಾಖಾ ವ್ಯವಸ್ಥಾಪಕ ಅಶೋಕ್‌ ಬಂಗೇರ ಸ್ವಾಗತಿಸಿ, ಉಪ ವ್ಯವಸ್ಥಾಪಕ ಲೋಹಿತ್ ಕುಮಾರ್ ವಂದಿಸಿ, ಡೈಜಿವರ್ಲ್ಡ್ ನ ಲೋಹಿತ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು.

Related posts

ಎತ್ತರದ ಸ್ಥಾನಲ್ಲಿ ಕೂರುವಂತೆ ಮಾಡುತ್ತೇನೆ
ಶಾಸಕ ಹರೀಶ್ ಪೂಂಜರಿಗೆ ದೈವದ ಅಭಯ

Suddi Udaya

ಚಂದ್ರಯಾನ-3 ಯಶಸ್ವಿಯಾದ ಹಿನ್ನಲೆ: ವಿ.ಹಿಂ.ಪ. ಮತ್ತು ಭಜರಂಗದಳ ಕಾರ್ಯಕರ್ತರಿಂದ ಗುರುವಾಯನಕೆರೆಯಲ್ಲಿ ಸಂಭ್ರಮಾಚರಣೆ

Suddi Udaya

ಬೆಳ್ತಂಗಡಿ: ನಿವೃತ್ತಿಗೊಂಡ ಪ್ರಥಮ ದರ್ಜೆ ಸಹಾಯಕ ನಾರಾಯಣ್ ನಾಯ್ಕ್ ಪಿ. ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಕನ್ಯಾಡಿ-2 ಸ.ಉ.ಹಿ. ಪ್ರಾಥಮಿಕ ಶಾಲೆಯಲ್ಲಿ “ರಾಷ್ಟ್ರೀಯ ಬಾಹ್ಯಾಕಾಶ ದಿನ”

Suddi Udaya

ಚಿತ್ಪಾವನ ಬ್ರಾಹ್ಮಣರ ಬಳಗ ಉಜಿರೆ-ಬೆಳ್ತಂಗಡಿ ಇದರ 13ನೇ ವರ್ಷದ ವಾರ್ಷಿಕೋತ್ಸವ ಪ್ರಯುಕ್ತ ಕಳೆಂಜ ನಂದಗೋಕುಲ ಗೋಶಾಲೆಗೆ ರೂ.10 ಸಾವಿರ ದೇಣಿಗೆ

Suddi Udaya

ಉಜಿರೆ: ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಮಾಶಾಸನ ಮಂಜೂರಾತಿ ಪತ್ರ ವಿತರಣೆ

Suddi Udaya
error: Content is protected !!