24.8 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಮುಂಡೂರು ಕಟ್ಟಿ ಹಾಕಿದ್ದ ಕರುಗಳ ಮೇಲೆ ಚಿರತೆ ದಾಳಿ: ಎರಡು ಕರುಗಳು ಮೃತ್ಯು

ಮೇಲಂತಬೆಟ್ಟು : ಇಲ್ಲಿಯ ಮುಂಡೂರು ಗ್ರಾಮದ ಕೇರಿಯಾರ್ ಗುರುವಪ್ಪ ಸಾಲ್ಯಾನ್ ಅವರಿಗೆ ಸೇರಿದ ಎರಡು ದನದ ಹೆಣ್ಣು ಕರುಗಳ ಮೇಲೆ ಚಿರತೆ ದಾಳಿ ಮಾಡಿದ್ದು, ಎರಡು ಕರುಗಳು ಸಾವನ್ನಪ್ಪಿದ ಘಟನೆ ಡಿ.3ರಂದು ರಾತ್ರಿ ನಡೆದಿದೆ.


ಗುರುವಪ್ಪ ಸಾಲ್ಯಾನ್ ಅವರು ತಮ್ಮ ಮನೆಯ ಸಮೀಪ ಎರಡು ಕರುಗಳನ್ನು ಹಗ್ಗದಿಂದ ಕಟ್ಟಿ ಹಾಕಿದ್ದರು. ರಾತ್ರಿ ಮನೆಯ ಬಳಿ ಆಗಮಿಸಿದ ಚಿರತೆ ಎರಡು ಕರುಗಳ ಮೇಲೂ ದಾಳಿ ಮಾಡಿ, ಕರುಗಳನ್ನು ಕೊಂದು ನಂತರ ಕರುಗಳನ್ನು ತೋಟಕ್ಕೆ ಎಳೆದೊಯ್ದು ಅಲ್ಲಿ ತಿಂದು ಹಾಕಿರುವುದಾಗಿ ತಿಳಿದು ಬಂದಿದೆ. ಸಾವನ್ನಪ್ಪಿದ ಕರುಗಳ ಮೌಲ್ಯ ರೂ.30 ಸಾವಿರಗಳಾಗಬಹುದೆಂದು ಅಂದಾಜಿಸಲಾಗಿದೆ.


ಘಟನಾ ಸ್ಥಳಕ್ಕೆ ಮುಂಡೂರು ಗ್ರಾ.ಪಂ ಉಪಾಧ್ಯಕ್ಷ ಲೋಕನಾಥ ಶೆಟ್ಟಿ, ಸದಸ್ಯ ಸಂತೋಷ್ ಕುಮಾರ್ ಮುಂಡೂರು, ಕಾರ್ಯದರ್ಶಿ ನಿರ್ಮಲ್‌ಕುಮಾರ್, ಬೆಳ್ತಂಗಡಿ ಪಶುವೈದ್ಯ ಇಲಾಖೆಯ ಸಹಾಯಕ ನಿರ್ದೇಶಕ ಮಂಜುನಾಯ್ಕ, ವೈದ್ಯಾಧಿಕಾರಿ ವಿಶ್ವನಾಥ್, ಅರಣ್ಯ ರಕ್ಷಕ ಮಂಜುನಾಥ್, ವಾಚರ್ ಪೂವಪ್ಪ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಸುಮಾರು ಒಂದೂವರೆ ತಿಂಗಳ ಹಿಂದೆ ಇದೇ ರೀತಿ ರಾತ್ರಿ ಬಂದ ಚಿರತೆ ಹೆಣ್ಣು ಕರುವೊಂದರ ಮೇಲೆ ದಾಳಿ ನಡೆಸಿ ತಿಂದು ಹಾಕಿತ್ತು. ಇದರ ಬಗ್ಗೆಯೂ ಅರಣ್ಯ ಇಲಾಖೆಗೆ ದೂರು ನೀಡಲಾಗಿತ್ತು.

Related posts

ಹಾವುಗಳ ಸಂರಕ್ಷಕರಾದ ಸ್ನೇಕ್ ಅಶೋಕ್ ನಾಗರ ಹಾವು ಹಿಡಿಯುವ ವೇಳೆ ಹಾವು ಕಚ್ಚಿ ಮಂಗಳೂರು ಆಸ್ಪತ್ರೆಗೆ ದಾಖಲು

Suddi Udaya

ರಿಕ್ಷಾ ಚಾಲಕರ ಅಪತ್ಕಾಲದ ನೆರವಿನ ಯೋಜನೆ ಕ್ಷೇಮ ನಿಧಿ ಉಜಿರೆಯ ಉದ್ಯಮಿ, ಲಕ್ಷ್ಮಿ ಗ್ರೂಪ್ ನ ಮಾಲಕರಾದ ಮೋಹನ್ ಕುಮಾರ್ ಅವರಿಂದ 50 ಸಾವಿರ ದೇಣಿಗೆ ಹಸ್ತಾಂತರ

Suddi Udaya

ಮಚ್ಚಿನ ಅಂಗನವಾಡಿ ಕೇಂದ್ರದಲ್ಲಿ ಪರಿಸರ ದಿನಾಚರಣೆ

Suddi Udaya

ಶಿಶಿಲ ಶ್ರೀ ದುರ್ಗಾಪರಮೇಶ್ವರಿ ಯುವಕ ಮಂಡಲದ ಬೆಳ್ಳಿ ಹಬ್ಬದ ಸವಿನೆನಪಿಗಾಗಿ ಶುದ್ಧ ಕುಡಿಯುವ ನೀರಿನ ಘಟಕದ ಲೋಕಾರ್ಪಣೆ

Suddi Udaya

ಉಜಿರೆ: ಕಿಂಗ್ & ಕ್ವಿನ್ ಯುನಿಸೆಕ್ಸ್ ಸೆಲೂನ್ ನಲ್ಲಿ ವಿಶೇಷ ಆಫರ್ ಗಳು; ಗ್ರಾಹಕರಿಗೆ 30% ರಿಯಾಯಿತಿ, ಫೆ.28 ರವರೆಗೆ ಮಾತ್ರ

Suddi Udaya

ಧರ್ಮಸ್ಥಳ ಶ್ರೀ ಧ.ಮಂ. ಭಜನಾ ಪರಿಷತ್ ಇದರ ಅಧ್ಯಕ್ಷರಾಗಿ ಆಯ್ಕೆಯಾದ ಚಂದ್ರಶೇಖರ್ ಸಾಲ್ಯಾನ್ ಕೊಯ್ಯೂರು ರವರಿಗೆ ತಾಲೂಕು ಭಜನಾ ಪರಿಷತ್ ವತಿಯಿಂದ ಅಭಿನಂದನೆ

Suddi Udaya
error: Content is protected !!