37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಮುಂಡೂರು ಕಟ್ಟಿ ಹಾಕಿದ್ದ ಕರುಗಳ ಮೇಲೆ ಚಿರತೆ ದಾಳಿ: ಎರಡು ಕರುಗಳು ಮೃತ್ಯು

ಮೇಲಂತಬೆಟ್ಟು : ಇಲ್ಲಿಯ ಮುಂಡೂರು ಗ್ರಾಮದ ಕೇರಿಯಾರ್ ಗುರುವಪ್ಪ ಸಾಲ್ಯಾನ್ ಅವರಿಗೆ ಸೇರಿದ ಎರಡು ದನದ ಹೆಣ್ಣು ಕರುಗಳ ಮೇಲೆ ಚಿರತೆ ದಾಳಿ ಮಾಡಿದ್ದು, ಎರಡು ಕರುಗಳು ಸಾವನ್ನಪ್ಪಿದ ಘಟನೆ ಡಿ.3ರಂದು ರಾತ್ರಿ ನಡೆದಿದೆ.


ಗುರುವಪ್ಪ ಸಾಲ್ಯಾನ್ ಅವರು ತಮ್ಮ ಮನೆಯ ಸಮೀಪ ಎರಡು ಕರುಗಳನ್ನು ಹಗ್ಗದಿಂದ ಕಟ್ಟಿ ಹಾಕಿದ್ದರು. ರಾತ್ರಿ ಮನೆಯ ಬಳಿ ಆಗಮಿಸಿದ ಚಿರತೆ ಎರಡು ಕರುಗಳ ಮೇಲೂ ದಾಳಿ ಮಾಡಿ, ಕರುಗಳನ್ನು ಕೊಂದು ನಂತರ ಕರುಗಳನ್ನು ತೋಟಕ್ಕೆ ಎಳೆದೊಯ್ದು ಅಲ್ಲಿ ತಿಂದು ಹಾಕಿರುವುದಾಗಿ ತಿಳಿದು ಬಂದಿದೆ. ಸಾವನ್ನಪ್ಪಿದ ಕರುಗಳ ಮೌಲ್ಯ ರೂ.30 ಸಾವಿರಗಳಾಗಬಹುದೆಂದು ಅಂದಾಜಿಸಲಾಗಿದೆ.


ಘಟನಾ ಸ್ಥಳಕ್ಕೆ ಮುಂಡೂರು ಗ್ರಾ.ಪಂ ಉಪಾಧ್ಯಕ್ಷ ಲೋಕನಾಥ ಶೆಟ್ಟಿ, ಸದಸ್ಯ ಸಂತೋಷ್ ಕುಮಾರ್ ಮುಂಡೂರು, ಕಾರ್ಯದರ್ಶಿ ನಿರ್ಮಲ್‌ಕುಮಾರ್, ಬೆಳ್ತಂಗಡಿ ಪಶುವೈದ್ಯ ಇಲಾಖೆಯ ಸಹಾಯಕ ನಿರ್ದೇಶಕ ಮಂಜುನಾಯ್ಕ, ವೈದ್ಯಾಧಿಕಾರಿ ವಿಶ್ವನಾಥ್, ಅರಣ್ಯ ರಕ್ಷಕ ಮಂಜುನಾಥ್, ವಾಚರ್ ಪೂವಪ್ಪ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಸುಮಾರು ಒಂದೂವರೆ ತಿಂಗಳ ಹಿಂದೆ ಇದೇ ರೀತಿ ರಾತ್ರಿ ಬಂದ ಚಿರತೆ ಹೆಣ್ಣು ಕರುವೊಂದರ ಮೇಲೆ ದಾಳಿ ನಡೆಸಿ ತಿಂದು ಹಾಕಿತ್ತು. ಇದರ ಬಗ್ಗೆಯೂ ಅರಣ್ಯ ಇಲಾಖೆಗೆ ದೂರು ನೀಡಲಾಗಿತ್ತು.

Related posts

ಕೊಕ್ಕಡ: 9/11 ಆದೇಶ ವಿರೋಧಿಸಿ ಪಂಚಾಯತ್ ಮಟ್ಟದಲ್ಲಿ ಅಥವಾ ಬೆಳ್ತಂಗಡಿ ತಾಲೂಕು ಕೇಂದ್ರದಲ್ಲಿ ಅನುಮೋದನೆ ನೀಡುವಂತೆ ನಿರ್ಣಯ

Suddi Udaya

ಪುಂಜಾಲಕಟ್ಟೆ: ಪ್ರಸೂತಿ ತಜ್ಞೆ, ನಾಟಿ ವೈದ್ಯೆ ಶ್ರೀಮತಿ ಅಪ್ಪಿ ಪೂಜಾರಿ ಉರ್ಕಲೊಟ್ಟು ನಿಧನ

Suddi Udaya

ಜ.2: ಬೆಳ್ತಂಗಡಿ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಡಾ|| ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಸುದ್ದಿ ಉದಯ ವಾರಪತ್ರಿಕೆಯಿಂದ ವಿಶೇಷ ಪುರವಾಣಿ

Suddi Udaya

ಲಾಯಿಲ: ಕುಂಟಿನಿ ಅಲ್ ಬುಖಾರಿ ಜುಮಾ ಮಸೀದಿ ವಾರ್ಷಿಕ ಮಹಾಸಭೆ, ಸಮಿತಿ ರಚನೆ : ಅಧ್ಯಕ್ಷರಾಗಿ ಇಸ್ಮಾಯಿಲ್ ಸನಾ, ಕಾರ್ಯದರ್ಶಿಯಾಗಿ ಸಾಹುಲ್ ಹಮೀದ್ ಪುನರಾಯ್ಕೆ

Suddi Udaya

ಕುಕ್ಕೇಡಿ: ಫಂಡಿಜೆ ಸ.ಹಿ. ಪ್ರಾಥಮಿಕ ಶಾಲೆಯಲ್ಲಿ ಅಜ್ಜ-ಅಜ್ಜಿಯಂದಿರ ದಿನ ಆಚರಣೆ

Suddi Udaya
error: Content is protected !!