25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಮುಂಡೂರು ಕಟ್ಟಿ ಹಾಕಿದ್ದ ಕರುಗಳ ಮೇಲೆ ಚಿರತೆ ದಾಳಿ: ಎರಡು ಕರುಗಳು ಮೃತ್ಯು

ಮೇಲಂತಬೆಟ್ಟು : ಇಲ್ಲಿಯ ಮುಂಡೂರು ಗ್ರಾಮದ ಕೇರಿಯಾರ್ ಗುರುವಪ್ಪ ಸಾಲ್ಯಾನ್ ಅವರಿಗೆ ಸೇರಿದ ಎರಡು ದನದ ಹೆಣ್ಣು ಕರುಗಳ ಮೇಲೆ ಚಿರತೆ ದಾಳಿ ಮಾಡಿದ್ದು, ಎರಡು ಕರುಗಳು ಸಾವನ್ನಪ್ಪಿದ ಘಟನೆ ಡಿ.3ರಂದು ರಾತ್ರಿ ನಡೆದಿದೆ.


ಗುರುವಪ್ಪ ಸಾಲ್ಯಾನ್ ಅವರು ತಮ್ಮ ಮನೆಯ ಸಮೀಪ ಎರಡು ಕರುಗಳನ್ನು ಹಗ್ಗದಿಂದ ಕಟ್ಟಿ ಹಾಕಿದ್ದರು. ರಾತ್ರಿ ಮನೆಯ ಬಳಿ ಆಗಮಿಸಿದ ಚಿರತೆ ಎರಡು ಕರುಗಳ ಮೇಲೂ ದಾಳಿ ಮಾಡಿ, ಕರುಗಳನ್ನು ಕೊಂದು ನಂತರ ಕರುಗಳನ್ನು ತೋಟಕ್ಕೆ ಎಳೆದೊಯ್ದು ಅಲ್ಲಿ ತಿಂದು ಹಾಕಿರುವುದಾಗಿ ತಿಳಿದು ಬಂದಿದೆ. ಸಾವನ್ನಪ್ಪಿದ ಕರುಗಳ ಮೌಲ್ಯ ರೂ.30 ಸಾವಿರಗಳಾಗಬಹುದೆಂದು ಅಂದಾಜಿಸಲಾಗಿದೆ.


ಘಟನಾ ಸ್ಥಳಕ್ಕೆ ಮುಂಡೂರು ಗ್ರಾ.ಪಂ ಉಪಾಧ್ಯಕ್ಷ ಲೋಕನಾಥ ಶೆಟ್ಟಿ, ಸದಸ್ಯ ಸಂತೋಷ್ ಕುಮಾರ್ ಮುಂಡೂರು, ಕಾರ್ಯದರ್ಶಿ ನಿರ್ಮಲ್‌ಕುಮಾರ್, ಬೆಳ್ತಂಗಡಿ ಪಶುವೈದ್ಯ ಇಲಾಖೆಯ ಸಹಾಯಕ ನಿರ್ದೇಶಕ ಮಂಜುನಾಯ್ಕ, ವೈದ್ಯಾಧಿಕಾರಿ ವಿಶ್ವನಾಥ್, ಅರಣ್ಯ ರಕ್ಷಕ ಮಂಜುನಾಥ್, ವಾಚರ್ ಪೂವಪ್ಪ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಸುಮಾರು ಒಂದೂವರೆ ತಿಂಗಳ ಹಿಂದೆ ಇದೇ ರೀತಿ ರಾತ್ರಿ ಬಂದ ಚಿರತೆ ಹೆಣ್ಣು ಕರುವೊಂದರ ಮೇಲೆ ದಾಳಿ ನಡೆಸಿ ತಿಂದು ಹಾಕಿತ್ತು. ಇದರ ಬಗ್ಗೆಯೂ ಅರಣ್ಯ ಇಲಾಖೆಗೆ ದೂರು ನೀಡಲಾಗಿತ್ತು.

Related posts

ತೋಟತ್ತಾಡಿ ಸೈಂಟ್ ಸಾವಿಯೋ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಗೇರುಕಟ್ಟೆ: ಪರಪ್ಪು ಮಸೀದಿ ಸಮಿತಿಯ ಜೊತೆಕಾರ್ಯದರ್ಶಿ ನಝೀರ್ ಸುಣ್ಣಲಡ್ಡ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಶಾಸಕ ಹರೀಶ್ ಪೂಂಜರವರಿಗೆ ವಾಣಿ ಶಿಕ್ಷಣ ಸಂಸ್ಥೆಯ ನೂತನ ಕಟ್ಟಡ ಮತ್ತು ಸಭಾಭವನ ಉದ್ಘಾಟನೆಯ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

Suddi Udaya

ಅನೀಶ್ ಪೂಜಾರಿ ವೇಣೂರು ನಿರ್ದೇಶನದಲ್ಲಿ ಮೂಡಿ ಬರಲಿದೆ ಹೊಸ ಚಲನಚಿತ್ರ “ಪೈಕಾ”

Suddi Udaya

ಮಿತ್ತಬಾಗಿಲು ಗ್ರಾ.ಪಂ. ನ ವಿಶೇಷ ಗ್ರಾಮಸಭೆ ಹಾಗೂ ಸನ್ಮಾನ ಕಾರ್ಯಕ್ರಮ

Suddi Udaya

ಬೆದ್ರಬೆಟ್ಟು: ಮರಿಯಾoಬಿಕಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!