July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಮುಂಡೂರು ಕಟ್ಟಿ ಹಾಕಿದ್ದ ಕರುಗಳ ಮೇಲೆ ಚಿರತೆ ದಾಳಿ: ಎರಡು ಕರುಗಳು ಮೃತ್ಯು

ಮೇಲಂತಬೆಟ್ಟು : ಇಲ್ಲಿಯ ಮುಂಡೂರು ಗ್ರಾಮದ ಕೇರಿಯಾರ್ ಗುರುವಪ್ಪ ಸಾಲ್ಯಾನ್ ಅವರಿಗೆ ಸೇರಿದ ಎರಡು ದನದ ಹೆಣ್ಣು ಕರುಗಳ ಮೇಲೆ ಚಿರತೆ ದಾಳಿ ಮಾಡಿದ್ದು, ಎರಡು ಕರುಗಳು ಸಾವನ್ನಪ್ಪಿದ ಘಟನೆ ಡಿ.3ರಂದು ರಾತ್ರಿ ನಡೆದಿದೆ.


ಗುರುವಪ್ಪ ಸಾಲ್ಯಾನ್ ಅವರು ತಮ್ಮ ಮನೆಯ ಸಮೀಪ ಎರಡು ಕರುಗಳನ್ನು ಹಗ್ಗದಿಂದ ಕಟ್ಟಿ ಹಾಕಿದ್ದರು. ರಾತ್ರಿ ಮನೆಯ ಬಳಿ ಆಗಮಿಸಿದ ಚಿರತೆ ಎರಡು ಕರುಗಳ ಮೇಲೂ ದಾಳಿ ಮಾಡಿ, ಕರುಗಳನ್ನು ಕೊಂದು ನಂತರ ಕರುಗಳನ್ನು ತೋಟಕ್ಕೆ ಎಳೆದೊಯ್ದು ಅಲ್ಲಿ ತಿಂದು ಹಾಕಿರುವುದಾಗಿ ತಿಳಿದು ಬಂದಿದೆ. ಸಾವನ್ನಪ್ಪಿದ ಕರುಗಳ ಮೌಲ್ಯ ರೂ.30 ಸಾವಿರಗಳಾಗಬಹುದೆಂದು ಅಂದಾಜಿಸಲಾಗಿದೆ.


ಘಟನಾ ಸ್ಥಳಕ್ಕೆ ಮುಂಡೂರು ಗ್ರಾ.ಪಂ ಉಪಾಧ್ಯಕ್ಷ ಲೋಕನಾಥ ಶೆಟ್ಟಿ, ಸದಸ್ಯ ಸಂತೋಷ್ ಕುಮಾರ್ ಮುಂಡೂರು, ಕಾರ್ಯದರ್ಶಿ ನಿರ್ಮಲ್‌ಕುಮಾರ್, ಬೆಳ್ತಂಗಡಿ ಪಶುವೈದ್ಯ ಇಲಾಖೆಯ ಸಹಾಯಕ ನಿರ್ದೇಶಕ ಮಂಜುನಾಯ್ಕ, ವೈದ್ಯಾಧಿಕಾರಿ ವಿಶ್ವನಾಥ್, ಅರಣ್ಯ ರಕ್ಷಕ ಮಂಜುನಾಥ್, ವಾಚರ್ ಪೂವಪ್ಪ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಸುಮಾರು ಒಂದೂವರೆ ತಿಂಗಳ ಹಿಂದೆ ಇದೇ ರೀತಿ ರಾತ್ರಿ ಬಂದ ಚಿರತೆ ಹೆಣ್ಣು ಕರುವೊಂದರ ಮೇಲೆ ದಾಳಿ ನಡೆಸಿ ತಿಂದು ಹಾಕಿತ್ತು. ಇದರ ಬಗ್ಗೆಯೂ ಅರಣ್ಯ ಇಲಾಖೆಗೆ ದೂರು ನೀಡಲಾಗಿತ್ತು.

Related posts

ಮಚ್ಚಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ದಾನಿಗಳಿಂದ ಕಬಡ್ಡಿ ಮ್ಯಾಟ್ ಹಸ್ತಾಂತರ

Suddi Udaya

ಭಾರತೀಯ ಸೇನೆಯಲ್ಲಿ 28 ವರ್ಷಗಳ ಸೇವೆ ಸಲ್ಲಿಸಿ ಸೇವಾ ನಿವೃತ್ತಿ ಹೊಂದಿ ಹುಟ್ಟೂರಿಗೆ ಆಗಮಿಸಿದ ಸುಬೇದಾರ್ ಮೇಜರ್ ಶಿವಕುಮಾರ್ ರವರಿಗೆ ಬೆಳ್ತಂಗಡಿಯಲ್ಲಿ ಭವ್ಯ ಸ್ವಾಗತ

Suddi Udaya

ಸಮಾಜಸೇವಕ ಚಾಂಡಿ ರವರಿಗೆ ವಿನ್ಸೆಂಟ್ ಡಿ’ಪೌಲ್ ದಿನದಲ್ಲಿ ಸನ್ಮಾನ

Suddi Udaya

ಎಸ್ ಪಿ ವೈ ಎಸ್ ಎಸ್ ನಿಂದ ಮಾತೃವಂದನ, ಮಾತೃಧ್ಯಾನ, ಮಾತೃ ಭೋಜನ ಕಾರ್ಯಕ್ರಮ

Suddi Udaya

ಉಜಿರೆ: ಎಸ್.ಡಿ.ಎಂ ಇಂಜಿನಿಯರಿಂಗ್ ಕಾಲೇಜಿನ ಮೊದಲ ವರ್ಷದ ಬಿಇ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ

Suddi Udaya

ಧಮ೯ಸ್ಥಳ ಮಹಾದ್ವಾರದ ಬಳಿ ಪಾದಯಾತ್ರಿಗಳಿಗೆ ಸ್ವಾಗತ

Suddi Udaya
error: Content is protected !!