September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಾರ್ಮಾಡಿ ಘಾಟಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ : ಭಯ ಭೀತರಾದ ವಾಹನ ಸವಾರರು

ಚಾರ್ಮಾಡಿ : ಚಾರ್ಮಾಡಿ ಘಾಟಿಯ ಮೂರನೇ ತಿರುವಿನಲ್ಲಿ ಒಂಟಿ ಸಲಗ ಪ್ರತ್ಯಕ್ಷವಾಗಿದ್ದು ವಾಹನ ಸವಾರರು ಭಯಭೀತರಾದರು.

ಭಾನುವಾರ ಸಂಜೆ ಚಾರ್ಮಾಡಿ ಘಾಟಿಯ ಎಂಟನೇ ತಿರುವಿನಲ್ಲಿ ಒಂಟಿ ಸಲಗವೊಂದು ರಸ್ತೆಗೆ ಬಂದಿದ್ದರಿಂದ ವಾಹನಗಳು ಸಾಲು ಗಟ್ಟಿ ನಿಂತಿದ್ದವು. ಒಂಟಿ ಸಲಗವು ಬೃಹದಾಕಾರವಾಗಿದ್ದು ಒಂದು ಗಂಟೆಗೂ ಅಧಿಕ ಕಾಲ ರಸ್ತೆಯಲ್ಲೇ ಇದ್ದು ನಂತರ ತಿರುವಿನಲ್ಲಿ ಅರಣ್ಯಕ್ಕೆ ಸಾಗಿದ್ದು ವಾಹನ ಸವಾರರು ಕಾಡಾನೆಯ ವೀಡಿಯೋವನ್ನು ಮೊಬೈಲ್ ನಲ್ಲಿ ಚಿತ್ರೀಕರಿಸಿದ್ದಾರೆ.

ಆದರೆ ವಾಹನ ಸವಾರರಿಗೆ ಯಾವುದೇ ತೊಂದರೆ ಉಂಟು ಮಾಡಿಲ್ಲ.ಈ ಕಾಡಾನೆ ಪ್ರತಿ ಈ ಸಮಯದಲ್ಲಿ ಹೆಚ್ಚಾಗಿ ಚಾರ್ಮಾಡಿಯಲ್ಲಿ ಬೀಡು ಬಿಟ್ಟಿದ್ದು ಚಾರ್ಮಾಡಿ ಘಾಟಿಯಲ್ಲಿ ವಾಹನ ಸವಾರರು, ದ್ವಿಚಕ್ರ ಸವಾರರು ಒಂಟಿ ಸಲಗದ ಭೀತಿಯಲ್ಲೇ ಸಾಗಬೇಕಿದೆ. ಅರಣ್ಯ ಇಲಾಖೆಯ ಅಧಿಕಾರಿಗಳು ಈ ಕಾಡಾನೆಯನ್ನು ಅರಣ್ಯಕ್ಕೆ ಓಡಿಸಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

Related posts

ವೇಣೂರು ಎಸ್.ಡಿ.ಎಮ್. ಐಟಿಐ ಮತ್ತು ಟೊಯೋಟಾ ಒಡಂಬಡಿಕೆ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಿಂದ ವೈದ್ಯಕೀಯ ಚಿಕಿತ್ಸಾ ನೆರವು

Suddi Udaya

ಉಜಿರೆ ಎಸ್.ಡಿ.ಎಮ್ ಸಮೂಹ ಶಿಕ್ಷಣ ಸಂಸ್ಥೆಗಳಿಂದ ಶಾಲಾ ವಿದ್ಯಾರ್ಥಿಗಳಿಗೆ ‘ಮ್ಯೂಸಿಯಂ ಆನ್ ವೀಲ್’ ಕಾರ್ಯಾಗಾರ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ವೈದ್ಯರ ದಿನಾಚರಣೆ

Suddi Udaya

ಡಾ. ಗೀತಾ ಬಿ. ಶೆಟ್ಟಿಯವರಿಗೆ ಅಭಿನಂದನಾ ಹಾಗೂ ಸನ್ಮಾನ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಮೂಳೆ ಸಾಂದ್ರತೆ ತಪಾಸಣಾ ಶಿಬಿರ

Suddi Udaya
error: Content is protected !!