April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಶಾಸಕರುಗಳ ಹಕ್ಕುಗಳಿಗೆ ಚ್ಯುತಿಯನ್ನು ಮಾಡಿದ ಅರಣ್ಯಾಧಿಕಾರಿಗಳ ವಿರುದ್ಧ ಬೆಳಗಾವಿ ಅಧಿವೇಶನದಲ್ಲಿ ಶಾಸಕರಿಂದ ಹಕ್ಕು ಚ್ಯುತಿ ಮಂಡನೆ

ಬೆಳ್ತಂಗಡಿ: ಶಾಸಕರುಗಳ ಹಕ್ಕುಗಳಿಗೆ ಚ್ಯುತಿಯನ್ನು ಮಾಡಿದ ಡಿ.ಎಫ್.ಓ ಮತ್ತು ಆರ್.ಎಫ್.ಓ., ಎ.ಸಿ.ಎಫ್. ಇವರುಗಳ ವಿರುದ್ಧ ಹಕ್ಕು ಚ್ಯುತಿ ಮಂಡನೆ ಮಾಡುವಂತೆ ಶಾಸಕ ಹರೀಶ್ ಪೂಂಜ ಡಿ.5ರಂದು ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನ ಸಭಾ ಅಧಿವೇಶನದಲ್ಲಿ ಸಭಾಧ್ಯಕ್ಷರಿಗೆ ಮನವಿ ಮಾಡಿದ್ದಾರೆ.

ಹಕ್ಕುಚ್ಯುತಿ ಮಂಡನೆಯಲ್ಲಿ ಏನಿದೆ : 2023 ಅ.4ರಂದು ಕಳೆಂಜ ಗ್ರಾಮದ ದೇವಣ್ಣಗೌಡರು ತಮ್ಮ ಹಳೆಯ ಮನೆಯ ಬದಲಾಗಿ ನೂತನ ಮನೆ ನಿರ್ಮಾಣಕ್ಕೆ ಪಂಚಾಂಗ ಹಾಕಿದ್ದರು. ಇದನ್ನು ಅರಣ್ಯ ಇಲಾಖೆ ಜಾಗ ಎಂದು ಅಧಿಕಾರಿಗಳು ಕಿತ್ತು ಎಸೆದಿದ್ದರು. ಈ ವಿಷಯವನ್ನು ದೇವಣ್ಣ ಗೌಡರು ಶಾಸಕರಿಗೆ ತಿಳಿಸಿದ್ದರಿಂದ ಶಾಸಕ ಹರೀಶ್ ಪೂಂಜ ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ ಆ ಸ್ಥಳವು ದಿಶಾಂಕ್ ನಲ್ಲಿ ಆರಣ್ಯದಿಂದ ಹೊರಗೆ ಇರುವುದು ಕಂಡು ಬಂದು ಹಾಗೂ ಅರಣ್ಯದ ಯಾವುದು ಗಡಿ ಗುರುತುಗಳು ಸುತ್ತಮುತ್ತ ಕಂಡು ಬರದ ಹಿನ್ನಲೆಯಲ್ಲಿ ಅವರಿಗೆ ತಕ್ಷಣ ತಾತ್ಕಾಲಿಕ ಮನೆ ನಿರ್ಮಿಸಲಾಯಿತು. ನಂತರ ಸಚಿವರು ಎ.ಸಿ.ಎಫ್. ಮತ್ತು ಆರ್.ಎಫ್.ಓ. ಗಳಿಗೆ ದೂರವಾಣಿ ಮೂಲಕ ಮೌಖಿತ ಆದೇಶ ನೀಡಿ ಸರ್ವೆ ನಂ. ೩೦೯ ಸ್ಥಳವನ್ನು ಜಂಟಿ ತನಿಖೆ ನಡೆಸಿದ ನಂತರವೇ ಕ್ರಮ ಕೈಗೊಳ್ಳಲು ಆದೇಶಿಸಿದರು. ಆದರೆ ಅ.೯ರಂದು ಮತ್ತೆ ದೇವಣ್ಣಗೌಡರಿಗೆ ನಿರ್ಮಿಸಿದ ತಾತ್ಕಾಲಿಕ ಮನೆಯನ್ನು ತೆರವುಗಳಿಸಲು ಸಚಿವರ ಮೌಖಿಕ ಆದೇಶವನ್ನು ಉಲ್ಲಂಘಿಸಿ ಕೆ.ಎಸ್.ಆರ್.ಪಿ. ತುಕಡಿಗಳೊಂದಿಗೆ ಡಿ.ಎಫ್.ಓ.. ಆರ್.ಎಫ್.ಓ.. ಎ.ಸಿ.ಎಫ್. ರವರು ಸ್ಥಳಕ್ಕೆ ಆಗಮಿಸಿದ್ದರು.

ಈ ಸಂದರ್ಭದಲ್ಲಿ ಶಾಸಕರುಗಳಾದ ರಾಜೇಶ್ ನಾಯ್ಕ , ಭಾಗೀರಥಿ ಮುರಳ್ಯ, ಉಮಾನಾಥ್ ಕೋಟ್ಯಾನ್, ಡಾ. ವೈ ಭರತ್ ಶೆಟ್ಟಿ, ಎಂಎಲ್‌ಸಿ ಪ್ರತಾಪ್ ಸಿಂಹ ನಾಯಕ್ ಆಗಮಿಸಿ, ಸ್ಥಳದಲ್ಲಿದ್ದ ಅರಣ್ಯ ಅಧಿಕಾರಿಗಳಿಗೆ ಜಂಟಿ ಸರ್ವೆ ನಡೆಸಿ ಮನೆ ತೆರವುಗೊಳಿಸಲು ಸೂಚಿಸಲಾಯಿತು ಎಂದು ತಿಳಿಸಲಾಗಿದೆ. ಆದರೆ ಅರಣ್ಯ ಇಲಾಖೆ ಅಧಿಕಾರಿಗಳು ಇದನ್ನು ದಿಕ್ಕರಿಸಿ ಶಾಸಕರುಗಳ ಹಕ್ಕಿಗೆ ಚ್ಯುತಿ ಆಗುವಂತೆ ಸಾರ್ವಜನಿಕವಾಗಿ ಅರಣ್ಯ ಇಲಾಖೆಯ ಡಿ.ಎಫ್.ಓ. ಮತ್ತು ಆರ್.ಎಫ್.ಓ. ನಡೆದುಕೊಂಡಿರುತ್ತಾರೆ ಹಾಗೂ ಆದೇಶವನ್ನು ದಿಕ್ಕರಿಸಿ ಸ್ಥಳದಲ್ಲಿಯೇ ಸುಮಾರು ೯ ಗಂಟೆಗಳ ಕಾಲ ಜನಪ್ರತಿನಿಧಿಗಳಾದ ನಮ್ಮನ್ನು ಯಾವುದೇ ಮಾಹಿತಿ ನೀಡದೇ ಮನೆ ತೆರವಿಗೆ ಬಲತ್ಕಾರದ ಪ್ರಯೋಗಗಳನ್ನು ಮಾಡಿದ್ದಾರೆ.ನಂತರ ಡಿ.ಎಫ್.ಓ. ರವರು ಆ ಕ್ಷೇತ್ರ ಶಾಸಕನಾದ ನನ್ನ ಬಳಿಯೆ ಮುಚ್ಚಳಿಕೆ ಪತ್ರ ಬರೆದು ಕೊಡುವಂತೆ ತಿಳಿಸಿ, ಶಾಸಕನಾದ ನನ್ನ ಬಳಿಯೆ ಮುಚ್ಚಳಿಕೆಯನ್ನು ಬರೆಸಿಕೊಂಡು ನಂತರವೇ ಸ್ಥಳದಿಂದ ನಿರ್ಗಮಿಸಿದರು. ಶಾಸಕರುಗಳಾದ ನಮ್ಮ ಅಧಿಕಾರ ವ್ಯಾಪ್ತಿಗೆ ಮಾಡಿದಂತಹ ಹಕ್ಕು ಚ್ಯುತಿಯಾಗಿರುತ್ತದೆ. ಸಾರ್ವಜನಿಕವಾಗಿ ಅಸಭ್ಯವರ್ತನೆ ಮಾಡಿದ ಡಿ.ಎಫ್.ಓ ಮತ್ತು ಆರ್.ಎಫ್.ಓ., ಎ.ಸಿ.ಎಫ್. ಇವರುಗಳ ವಿರುದ್ಧ ಹಕ್ಕು ಚ್ಯುತಿ ಮಂಡನೆ ಮಾಡಬೇಕಾಗಿರುತ್ತದೆ ಎಂದು ತಿಳಿಸಲಾಗಿದೆ. ಅರಣ್ಯ ಪ್ರದೇಶ ಒತ್ತುವರಿಯಾದಗ ಕರ್ನಾಟಕ ಅರಣ್ಯ ಕಾಯ್ದೆ ೧೯೬೩ ರ ೬೪ಎ ಸೆಕ್ಷನ್‌ನಂತೆ ಒತ್ತುವರಿ ಮಾಡಿಕೊಂಡ ವ್ಯಕ್ತಿಗೆ ನೋಟಿಸ್ ನೀಡಿ ದಾಖಲೆಗಳನ್ನು ಪಡೆದು ನಡವಳಿಗಳನ್ನು ದಾಖಲಿಸಿದ ನಂತರ ತೆರವು ಕಾರ್ಯ ಮಾಡಲು ಅವಕಾಶವಿದ್ದು, ಎಲ್ಲಾ ಕಾನೂನು ವಿಧಾನಗಳನ್ನು ನಡೆಸದೆ ಕಾನೂನು ಕಾರ್ಯ ವಿಧಾನಗಳನ್ನು ಮಾಡದೇ ಇರುವ ಬಗ್ಗೆ ಜನಪ್ರತಿನಿಧಿಯಾದ ನಾವು ಅವರ ಗಮನಕ್ಕೆ ತಂದರೂ ತೆರವುಗೊಳಿಸಲು ಮುಂದಾಗಿದ್ದಾರೆ, ಸ್ಥಳದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಅರಣ್ಯದ ಗಡಿಗುರುತು ತೋರಿಸಲು ತಿಳಿಸಿದಾಗ ಜನಪ್ರತಿನಿಧಿಗಳಿಗೆ ಯಾವುದೇ ಗಡಿಗುರುತು ತೋರಿಸದೇ ಒತ್ತಾಯಪೂರ್ವಕವಾಗಿ ಮನೆ ತೆರವಿಗೆ ಮುಂದಾಗಿದ್ದಾರೆ,ವಿಧಾನ ಪರಿಷತ್ ಸದಸ್ಯರ ಮೇಲೆಯೇ ಎ.ಸಿ.ಎಫ್. ಅವರು ಕೈ ಮಿಲಾಯಿಸಲು ಮುಂದಾಗಿರುವುದು ಜನಪ್ರತಿಗಳ ಕರ್ತವ್ಯಕ್ಕೆ ಚ್ಯುತಿಯಾದಂತೆ. ಜಂಟಿ ಸರ್ವೆ ನಡೆಸಿ ತೆರವುಗೊಳಿಸಲು ಸೂಚಿಸಿದರೂ ಕೂಡ ದುರಹಂಕಾರದಿಂದ ಡಿ.ಎಫ್.ಓ., ಆರ್.ಎಫ್.ಓ. ರವರು ಮನೆ ತೆರವಿಗೆ ಮುನ್ನುಗುತ್ತಿದ್ದರು. ಈಎಲ್ಲಾ ಅಂಶಗಳಿಂದ ಶಾಸಕನಾದ ನನ್ನ ಮತ್ತು ಇತರ ಶಾಸಕರ ಕರ್ತವ್ಯಕ್ಕೆ ಚ್ಯುತಿ ಉಂಟಾಗಿದ್ದು ಶಾಸಕರಗಳ ಹಕ್ಕು ಚ್ಯುತಿಯನ್ನು ಮಾಡಿದ ಡಿ.ಎಫ್.ಓ ಅಂತೋನಿ ಮರಿಯಪ್ಪ ಆರ್.ಎಫ್.ಓ. ಜಯಪ್ರಕಾಶ್ ಎ.ಸಿ.ಎಫ್. ಸುಬ್ಬಯ್ಯ ನಾಯಕ್ ಮೇಲೆ ಶಿಸ್ತು ಕ್ರಮ ಕೈಗೊಳ್ಳ ಬೇಕಾಗಿ ವಿನಂತಿಸಿದ್ದಾರೆ. ಸಾರ್ವಜನಿಕರಿಗೆ ತೊಂದರೆ ಮಾಡುತ್ತಿದ್ದ ಹಾಗೂ ಕಾನೂನು ನಿಯಮಗಳನ್ನು ಪಾಲಿಸಿದೆ ದಬ್ಬಾಳಿಕೆ ನಡೆಸುತ್ತಿದ್ದ ಅರಣ್ಯ ಅಧಿಕಾರಿಗಳನ್ನು ಸಾರ್ವಜನಿಕರಿಗೆ ನ್ಯಾಯ ಕೊಡಿಸಲು ಅರಣ್ಯ ಅಧಿಕಾರಿಗಳಿಗೆ ಸೂಚಿಸಿದ ಕ್ರಮವನ್ನು ಕರ್ತವ್ಯಕ್ಕೆ ಅಡ್ಡಿ ಎಂದು ಸುಳ್ಳು ಪ್ರಕರಣ ದಾಖಲಿಸಿ ಜನಪ್ರತಿನಿಧಿಯ ಹಕ್ಕಿಗೆ ಚ್ಯುತಿ ಮಾಡಿರುವುದು. ಅಕ್ಷೇಪಾರ್ಹವಾಗಿರುತ್ತದೆ. ಸದರಿ ಅಧಿಕಾರಿಗಳನ್ನು ವಿರುದ್ಧ ಹಕ್ಕು ಚ್ಯುತಿ ಮಂಡನೆ ಮಾಡಿ ಶಾಸಕರುಗಳಿಗೆ ಉಂಟಾದ ತೊಂದರೆ ಮತ್ತು ಚ್ಯುತಿಯನ್ನು ಗಂಭೀರವಾಗಿ ಪರಿಗಣಿಸಿ ಕ್ರಮಕೈಗೊಳ್ಳುವಂತೆ ಮನವಿಯಲ್ಲಿ ತಿಳಿಸಲಾಗಿದೆ.

Related posts

ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ, ಯುವ ಬಿಲ್ಲವ ವೇದಿಕೆ, ಮಹಿಳಾ ಬಿಲ್ಲವ ವೇದಿಕೆ ಕುವೆಟ್ಟು, ಓಡಿಲ್ನಾಳ ಗ್ರಾಮ ಸಮಿತಿ ಆಶ್ರಯದಲ್ಲಿ ‘ಆಟಿಡೊಂಜಿ ಕೂಟ’

Suddi Udaya

ಮುಂಡಾಜೆ: ಚಾಮುಂಡಿನಗರ ಸ.ಕಿ.ಪ್ರಾ. ಶಾಲೆಯ ಹಿರಿಯ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ: ಹಳೆಕೋಟೆ ಡಿಸ್ಕೌಂಟ್ ಸೇಲ್ ಬಟ್ಟೆ ಮತ್ತು ಚಪ್ಪಲಿ ಅಂಗಡಿಯವರಿಂದ ವಯನಾಡ್ ನೆರೆ ಸಂತ್ರಸ್ತರಿಗೆ ದಿ‌ನಬಳಕೆ ವಸ್ತುಗಳ ಸಹಾಯಹಸ್ತ

Suddi Udaya

ಉಜಿರೆ: ಅನುಗ್ರಹದಲ್ಲಿ ಯು.ಕೆ.ಜಿ ಮಕ್ಕಳ ಪದವಿ ಪ್ರದಾನ ಸಮಾರಂಭ

Suddi Udaya

ಕು| ಸೌಜನ್ಯ ಕೊಲೆ ಪ್ರಕರಣ ಮರು ತನಿಖೆಗೆ ಆಗ್ರಹಿಸಿ: ಮಚ್ಚಿನ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಗ್ರಾಮ ಸಮಿತಿಯಿಂದ ಸಿಎಂ ಸಿದ್ದರಾಮಯ್ಯ ರಿಗೆ ಮನವಿ

Suddi Udaya

ಇಂದಬೆಟ್ಟು: ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಬಂಗಾಡಿ ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ವಿಶೇಷ ತರಬೇತಿ ಕಾರ್ಯಾಗಾರ

Suddi Udaya
error: Content is protected !!