24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನದ ವಾರ್ಷಿಕೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ: ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ(ರಿ) ಮೆಲ್ಕಾರು ಬಂಟ್ವಾಳ ಇದರ ದ್ವಿತೀಯ ವಾರ್ಷಿಕೋತ್ಸವವು ಶ್ರೀಮಹಾಗಣಪತಿ ಕ್ಷೇತ್ರ ಸೌತಡ್ಕದ ಶ್ರೀ ಗಣೇಶ ಸಭಾ ಭವನದಲ್ಲಿ ದಶಂಬರ 17 ಭಾನುವಾರ ಪೂರ್ವಾಹ್ನ 10 ಗಂಟೆಯಿಂದ ಜರಗಲಿದೆ.

ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಶ್ರೀ ಗಣಪತಿ ಸನ್ನಿಧಿಯಲ್ಲಿ ಅರ್ಚಕರಾದ ಸತ್ಯಪ್ರಿಯ ಕಲ್ಲೂರಾಯರ ಪ್ರಾರ್ಥನೆಯೊಂದಿಗೆ ಕ್ಷೇತ್ರದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಹರೀಶ್ ರಾವ್.ಎಂ ಬಿಡುಗಡೆಗೊಳಿಸಿದರು.

ವ್ಯವಸ್ಥಾಪನ ಸಮಿತಿಯ ಸದಸ್ಯರಾದ ಪುರಂದರ ಕಡೀರ ,ಪ್ರಶಾಂತ ಪೂವಾಜೆ, ವಿಠಲ ಕುರ್ತಿ, ಅರ್ಚಕರಾದ ಸುಬ್ರಹ್ಮಣ್ಯ ತೊಡ್ತಿಲ್ಲಾಯ, ಕಾರ್ಯನಿರ್ವಹಣಾಧಿಕಾರಿ ಕೆ .ವಿ.ಶ್ರೀನಿವಾಸ ,ಬಾಲಕೃಷ್ಣ ನೈಮಿಷ, ಪ್ರತಿಷ್ಠಾನದ ಉಪಾಧ್ಯಕ್ಷ ಎಂ.ಜಯರಾಮ ಭಂಡಾರಿ ಧರ್ಮಸ್ಥಳ, ಪುತ್ತೂರು ಘಟಕದ ಸಂಚಾಲಕ ಉಮೇಶ ಶೆಣೈ. ಎನ್ ಉಪ್ಪಿನಂಗಡಿ ,ಶ್ರೀಮತಿ ಶ್ರೀದೇವಿ ಭಟ್ ಕಯ್ಯೂರು ಉಪಸ್ಥಿತರಿದ್ದರು.

ಪ್ರತಿಷ್ಠಾನದ ಅಧ್ಯಕ್ಷ ಕಯ್ಯೂರು ನಾರಾಯಣ ಭಟ್ ಸ್ವಾಗತಿಸಿ ಕಾರ್ಯದರ್ಶಿ ದಿವಾಕರ ಆಚಾರ್ಯ ಗೇರುಕಟ್ಟೆ ವಂದಿಸಿದರು.

Related posts

ಕಳೆದ 18 ವರ್ಷಗಳಿಂದ ಪಡಂಗಡಿ ಪ್ರಾ.ಕೃ.ಪ.ಸ. ಸಂಘದಲ್ಲಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಸೇವೆ ಸಲ್ಲಿಸುತ್ತಿರುವ ಶ್ರೀಮತಿ ಸುಕೇಶಿನಿ ಎ ಅವರಿಗೆ ಕಾಯಕ ದೀಕ್ಷಾಮಣಿ ಪ್ರಶಸ್ತಿ ಪ್ರದಾನ

Suddi Udaya

ಗೋವಿಂದೂರು ಮಿತ್ರ ಬಳಗದ ಸದಸ್ಯರಿಂದ ಪಾರೆಂಕಿ ಅಭಿಲಾಷ್ ರವರಿಗೆ ಆರ್ಥಿಕ ನೆರವು

Suddi Udaya

ಬೆಳ್ತಂಗಡಿ ತಾ.ಪಂ. ನಲ್ಲಿ ಜಗಜ್ಯೋತಿ ಬಸವಣ್ಣನವರ ಭಾವಚಿತ್ರ ಅನಾವರಣ

Suddi Udaya

ಮದ್ದಡ್ಕ ಮೊದಲೆಯಲ್ಲಿ ರಸ್ತೆ ಸಂಪರ್ಕ ಕಡಿತ ನಾಗರಿಕರ ಆಕ್ರೋಶ

Suddi Udaya

ಮಂಗಳೂರು, ಜೆಡಿಎಸ್ ಮಹಿಳಾ ಘಟಕದ ಮಾಜಿ ಜಿಲ್ಲಾಧ್ಯಕ್ಷೆಯಾಗಿದ್ದ ಅಳದಂಗಡಿಯ ಸುಮತಿ ಹೆಗ್ಡೆ ಎಸ್.ಡಿ.ಪಿ.ಐ ಗೆ ಸೇರ್ಪಡೆ

Suddi Udaya

ಡಾ|| ಡಿ. ವೀರೇಂದ್ರ ಹೆಗ್ಗಡೆಯವರ ಕಾರ್ಯವೈಖರಿಗೆ ಪ್ರಧಾನಿಯವರಿಂದ ಮೆಚ್ಚುಗೆ

Suddi Udaya
error: Content is protected !!