July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನದ ವಾರ್ಷಿಕೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ: ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ(ರಿ) ಮೆಲ್ಕಾರು ಬಂಟ್ವಾಳ ಇದರ ದ್ವಿತೀಯ ವಾರ್ಷಿಕೋತ್ಸವವು ಶ್ರೀಮಹಾಗಣಪತಿ ಕ್ಷೇತ್ರ ಸೌತಡ್ಕದ ಶ್ರೀ ಗಣೇಶ ಸಭಾ ಭವನದಲ್ಲಿ ದಶಂಬರ 17 ಭಾನುವಾರ ಪೂರ್ವಾಹ್ನ 10 ಗಂಟೆಯಿಂದ ಜರಗಲಿದೆ.

ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಶ್ರೀ ಗಣಪತಿ ಸನ್ನಿಧಿಯಲ್ಲಿ ಅರ್ಚಕರಾದ ಸತ್ಯಪ್ರಿಯ ಕಲ್ಲೂರಾಯರ ಪ್ರಾರ್ಥನೆಯೊಂದಿಗೆ ಕ್ಷೇತ್ರದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಹರೀಶ್ ರಾವ್.ಎಂ ಬಿಡುಗಡೆಗೊಳಿಸಿದರು.

ವ್ಯವಸ್ಥಾಪನ ಸಮಿತಿಯ ಸದಸ್ಯರಾದ ಪುರಂದರ ಕಡೀರ ,ಪ್ರಶಾಂತ ಪೂವಾಜೆ, ವಿಠಲ ಕುರ್ತಿ, ಅರ್ಚಕರಾದ ಸುಬ್ರಹ್ಮಣ್ಯ ತೊಡ್ತಿಲ್ಲಾಯ, ಕಾರ್ಯನಿರ್ವಹಣಾಧಿಕಾರಿ ಕೆ .ವಿ.ಶ್ರೀನಿವಾಸ ,ಬಾಲಕೃಷ್ಣ ನೈಮಿಷ, ಪ್ರತಿಷ್ಠಾನದ ಉಪಾಧ್ಯಕ್ಷ ಎಂ.ಜಯರಾಮ ಭಂಡಾರಿ ಧರ್ಮಸ್ಥಳ, ಪುತ್ತೂರು ಘಟಕದ ಸಂಚಾಲಕ ಉಮೇಶ ಶೆಣೈ. ಎನ್ ಉಪ್ಪಿನಂಗಡಿ ,ಶ್ರೀಮತಿ ಶ್ರೀದೇವಿ ಭಟ್ ಕಯ್ಯೂರು ಉಪಸ್ಥಿತರಿದ್ದರು.

ಪ್ರತಿಷ್ಠಾನದ ಅಧ್ಯಕ್ಷ ಕಯ್ಯೂರು ನಾರಾಯಣ ಭಟ್ ಸ್ವಾಗತಿಸಿ ಕಾರ್ಯದರ್ಶಿ ದಿವಾಕರ ಆಚಾರ್ಯ ಗೇರುಕಟ್ಟೆ ವಂದಿಸಿದರು.

Related posts

ಬೆಳ್ತಂಗಡಿ: ಕ್ಯಾನ್ಸರ್ ಲಿಂಫೋಮಾ ಖಾಯಿಲೆ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಣಾಹ೯ ಪೋಸ್ಟ್ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣ ದಾಖಲು

Suddi Udaya

ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ

Suddi Udaya

ಪುದುವೆಟ್ಟು ಗ್ರಾ.ಪಂ. ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ: ಯಾರೂ ನಾಮಪತ್ರ ಸಲ್ಲಿಸದ ಹಿನ್ನಲೆ ಪ್ರಭಾರ ಅಧ್ಯಕ್ಷರಾಗಿ ಪೂರ್ಣಾಕ್ಷ ಮುಂದುವರಿಕೆ

Suddi Udaya

ಎಸ್.ಡಿ.ಎಂ ಸ್ನಾತಕೋತ್ತರ ಅಧ್ಯಯನ ಕೇಂದ್ರ : ಆಕಾಶಕಾಯಗಳ ವೀಕ್ಷಣೆ

Suddi Udaya

ಇಂದಬೆಟ್ಟು: ಸಾರ್ವಜನಿಕ ಶ್ರೀ ಗಣೇಶೋತ್ಸವದ ಪ್ರಯುಕ್ತ ಕೆಸರುಗದ್ದೆ ಕ್ರೀಡಾಕೂಟ

Suddi Udaya
error: Content is protected !!