September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ವಾಯುಮಾಲಿನ್ಯ ನಿಯಂತ್ರಣ ಮಾಸಾಚರಣೆ: ಹೊಗೆ ರಹಿತ ವಾಹನ ನಿರ್ಮಲ ಪರಿಸರದ ಜೀವನ

ಬೆಳ್ತಂಗಡಿ : ಕರ್ನಾಟಕ ಸರಕಾರ, ಸಾರಿಗೆ ಇಲಾಖೆ, ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ಬಂಟ್ವಾಳ, ಇದರ ಅಶ್ರಯದಲ್ಲಿ ವಾಯುಮಾಲಿನ್ಯ ನಿಯಂತ್ರಣ ಮಾಸಿಕ ನವೆಂಬರ್ -2023, ಈ ಕಾರ್ಯಕ್ರಮ (ಹೊಗೆ ರಹಿತ ವಾಹನ ನಿರ್ಮಲ ಪರಿಸರದ ಜೀವನ) ಇತ್ತೀಚೆಗೆ ಬೆಳ್ತಂಗಡಿ ಎ.ಪಿ.ಎಂ.ಸಿ ವಠಾರದಲ್ಲಿ ನಡೆಯಿತು.

ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಎಸ್ ಡಿಎಂ ಕಾಲೇಜಿನ ಉಪನ್ಯಾಸಕ ಸುವೀರ್‌ರವರು ಮಾತನಾಡುತ್ತಾ ಪ್ರಪಂಚದ ಸಕಲ ಜೀವರಾಶಿಗಳಲ್ಲಿ ಅತ್ಯಂತ ಬುದ್ದಿವಂತರಾದ ಮನುಷ್ಯ ಜೀವಿ, ತನ್ನ ಜವಾಬ್ದಾರಿಯನ್ನು ಅರಿತುಕೊಂಡು ಸರಕಾರದ ಕಾನೂನು ಕಾಯ್ದೆಗಳನ್ನು ಪಾಲಿಸಿದ್ದಲ್ಲಿ ಖಂಡಿತವಾಗಿಯೂ ಈ ಪರಿಸರವನ್ನು ಉಳಿಸಿ ಎಲ್ಲರೂ ಒಳ್ಳೆಯ ರೀತಿಯಲ್ಲಿ ಬದುಕಲು ಸಾಧ್ಯ ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಭಾರ ಪ್ರಾದೇಶಿಕ ಸಾರಿಗೆ ಅಧಿಕಾರಿ ಚರಣ್ ಕೆ ಮಾತನಾಡುತ್ತಾ ಪರಿಸರ ಮಾಲಿನ್ಯವನ್ನು ತಡಗಟ್ಟಲು ಜನಸಾಮಾನ್ಯರು ಸರಕಾರದೊಂದಿಗೆ ಒಗ್ಗೂಡಿ ಕೆಲಸ ಮಾಡಬೇಕು ಎಂದರು. ಕಾರ್ಯಕ್ರಮದಲ್ಲಿ ರಾಮಚಂದ್ರ ಸಹಾಯಕ ಟ್ರಾಫಿಕ್ ಇನ್ಸೆಕ್ಟರ್, ಪಳನಿವೇಲು ಕೆ.ಎಂ ಹೆಡ್ ಕಾನ್ಸ್ ಟೇಬಲ್ ಬೆಳ್ತಂಗಡಿ ಪೊಲೀಸ್ ಠಾಣೆ ಇವರು ಉಪಸ್ಥಿತರಿದ್ದರು.

ಸಂತೋಷ ಕುಮಾರ್ ಜೈನ್, ರಮಾನಂದ ಸಾಲಿಯಾನ್, ಶಶಿಧರ, ಉಮೇಶ್ ಸುವರ್ಣ, ನಿರಂಜನ್, ಕಾರ್ಯಕ್ರಮಕ್ಕೆ ಸಹಕರಿಸಿದರು. ಕಾರ್ಯಕ್ರಮದ ಪ್ರಾರಂಭದಲ್ಲಿ ಆಶಾಶಿವಾನಂದ ಪ್ರಾರ್ಥಿಸಿದರು, ವಿನ್ಸೆಂಟ್‌ ರವರು ಸ್ವಾಗತಿಸಿ, ರಾಮದಾಸ್ ಭಂಡಾರ್ಕರ್ ಧನ್ಯವಾದ ನೀಡಿದರು. ಸುಧಾರಮಾನಂದ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಚಾಲಕ-ಮಾಲಕ ವಾಹನಗಳ ಚಾಲಕ ಮಾಲಕರು ಅತಿ ಹೆಚ್ಚು ಸಂಖ್ಯೆಯಲ್ಲಿ ಭಾಗವಹಿಸಿದ್ದರು.

Related posts

ಬೆಳ್ತಂಗಡಿಯಲ್ಲಿ ಮೊಬೈಲ್ ಅಸೋಸಿಯೇಶನ್ ನಿಂದ ಲಕ್ಕಿ ಕೂಪನ್ ಡ್ರಾ

Suddi Udaya

ಮಾ.15: ರಂಜನ್‌ ಜಿ. ಗೌಡ ನೇತೃತ್ವದ ಸೂರ್ಯ-ಚಂದ್ರ ಜೋಡುಕರೆ “ಬಂಗಾಡಿ ಕೊಲ್ಲಿ” ಕಂಬಳ

Suddi Udaya

ಎಸ್.ಐ.ಆರ್ ಮಾಹಿತಿಗಾಗಿ ನೇಮಿಸಲ್ಪಟ್ಟ ಬೂತ್ ಮಟ್ಟದ ಅಧಿಕಾರಿಗಳ ವಿಳಂಬ ನೀತಿಯ ಬಗ್ಗೆ ಬೆಳ್ತಂಗಡಿ ಎಸ್‌ಡಿಪಿಐ ಯಿಂದ ತಹಸೀಲ್ದಾರ್ ದೂರು

Suddi Udaya

ಹೋಟೆಲ್ ಸಮತಾ ಮಾಲಕರಾಗಿದ್ದ ವಿಠಲ್ ಭಟ್ ನಿಧನ

Suddi Udaya

ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ: ಮುಂಡಾಜೆ ಪ್ರಾ.ಶಾಲೆಯ ಮುಖ್ಯ ಶಿಕ್ಷಕಿ ಮಂಜುಳಾ ಹಾಗೂ ಸಹಶಿಕ್ಷಕ ಮೋಹನ ಕೆ. ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಬಳಂಜ ಶಾಲೆಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

Suddi Udaya
error: Content is protected !!