24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆನ್ನುಹುರಿ ಅಪಘಾತಕ್ಕೆ ಒಳಾಗದವರಿಗೆ ರೂ. 5 ಸಾವಿರ ಮಾಸಾಶನ ನೀಡಲು ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾ‌ರ್ ಆಗ್ರಹ

ಬೆಳ್ತಂಗಡಿ: ಬೆನ್ನುಹುರಿ ಅಪಘಾತಕ್ಕೆ ಒಳಾಗದವರಿಗೆ ರೂ. 5 ಸಾವಿರ ಮಾಸಾಶನ ನೀಡುವಂತೆ ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾ‌ರ್ ಆಗ್ರಹಿಸಿದ್ದಾರೆ.

ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ವಿಶೇಷ ಅಧಿವೇಶನದಲ್ಲಿ ಮಾತನಾಡಿದ ಹರೀಶ್ ಕುಮಾ‌ರ್ ಅವರು ಕರ್ನಾಟಕದಲ್ಲಿ 20 ಸಾವಿರಕ್ಕೂ ಅಧಿಕ ಮಂದಿ ಬೆನ್ನುಹುರಿ ಅಪಘಾತಕ್ಕೆ ಒಳಗಾದವರು ಇದ್ದಾರೆ. ಅವರ ಬದುಕು ಬಹಳ ಕಷ್ಟಕರವಾಗಿದೆ. ನಡೆದುಕೊಂಡು ಹೋಗಲು ಸಾಧ್ಯವಿಲ್ಲದೆ ವೀಲ್‌ಚೇ‌ರ್ ಮೂಲಕ ಓಡಾಡಬೇಕು. ಅವರಿಗೆ ಆದಾಯ ಇಲ್ಲ. ಸಹಾಯಕ ಒಬ್ಬರು ಬೇಕು. ಆದ್ದರಿಂದ ಬೆನ್ನುಹುರಿ ಅಪಘಾತಕ್ಕೆ ಒಳಗಾದವರಿಗೆ ಐದು ಸಾವಿರ ರೂಪಾಯಿ ಮಾಸಾಶನ ನೀಡಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು.

ರಾಜ್ಯ ಸಲಹಾ ಸಮಿತಿಯ ಅವಧಿ ಮುಗಿದಿದೆ. ಹೊಸ ಸಮಿತಿಯನ್ನು ರಚಿಸಬೇಕು. ಸಮಿತಿಯಲ್ಲಿ ಆಸಕ್ತಿ ಉಳ್ಳ ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರನ್ನು ಸೇರಿಸಿ ಸಮಿತಿಯನ್ನು ಶೀಘ್ರವೇ ರಚಿಸಬೇಕು.ಮಾನಸಿಕ ಅಸ್ವಸ್ಥರಿಗೆ ಮಾನಸಿಕ ಆರೋಗ್ಯ ಕಾರ್ಯಕ್ರಮದ ಅಡಿಯಲ್ಲಿ ಔಷಧ ಮತ್ತು ಆಪ್ತ ಸಮಾಲೋಚನೆಗೆ ವ್ಯವಸ್ಥೆಯಾಗಬೇಕು. ಬೆನ್ನುಹುರಿಯಾದವರಿಗೆ ಯೂರಿನಲ್ ಬ್ಯಾಗ್‌ನ್ನು ತಿಂಗಳಿಗೊಮ್ಮೆ ಬದಲಾವಣೆ ಮಾಡಲು 1400 ರೂಪಾಯಿ ಭತ್ತೆಯನ್ನು ನೀಡುತ್ತಿದ್ದು ಅವರು ಅದನ್ನು ಬದಲಾಯಿಸಲು ಹಾಗೂ ಹೋಗಿ ಬರಲು ವಾಹನದ ವೆಚ್ಚ ಭರಿಸಿದಾಗ ಈ ಹಣ ಸಾಕಾಗುವುದಿಲ್ಲ. ಅವರ ಜೀವನ ನಿರ್ವಹಣೆಗೆ ಪ್ರತಿ ತಿಂಗಳು 5 ಸಾವಿರ ರೂಪಾಯಿ ಮಾಸಾಶನ ನೀಡಬೇಕು. ರಾಜ್ಯದಲ್ಲಿ ನಾಲ್ಕು ವಿಭಾಗ ಕೇಂದ್ರದಲ್ಲಿ ಚಿಕಿತ್ಸಾ ಕೇಂದ್ರವನ್ನು ತೆರೆಯಬೇಕು. ರಾಜ್ಯದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಮಂದಿ ವಿಕಲಚೇತನ ಮಕ್ಕಳು ಶಾಲೆಗೆ ಹೋಗುತ್ತಿದ್ದು ಅವರಿಗೆ ಬೋಧನಾ ಮತ್ತು ಕಲಿಕಾ ಸಾಮಾಗ್ರಿಗಳನ್ನು ಸರಕಾರ ಉಚಿತವಾಗಿ ನೀಡಬೇಕು.

ಸರಕಾರ ಇದಕ್ಕೆ ಎನ್.ಜಿ.ಓ.ಗಳ ಸಹಾಯ ಪಡೆಯಬಹುದು ಎಂದು ಹರೀಶ್ ಕುಮಾರ್ ಹೇಳಿದರು. ಪ್ರತಿಕ್ರಿಯೆ ನೀಡಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆಯ ಸಚಿವ ದಿನೇಶ್ ಗುಂಡೂರಾವ್ ಅವರು ಬೆನ್ನುಹುರಿ ಅಪಘಾತ ಆದ ವಿಕಲಾಂಗರಿಗೆ ಚಿಕಿತ್ಸೆ ನೀಡಲು ಜಿಲ್ಲಾ ಆಸ್ಪತ್ರೆಗಳಲ್ಲಿ ಘಟಕಗಳಿದೆ. ವಿಕಲಚೇತನ ಸೌಲಭ್ಯ ಒದಗಿಸುವುದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಆಗಬೇಕು ಎಂದು ಹೇಳಿದರು.

Related posts

ಅಜ್ಮೀರ್ ಖಾಜಾ ಸಂಸ್ಮರಣೆ; ಸರ್ವಧರ್ಮೀಯ ಐದು ಕುಟುಂಬಗಳಿಗೆ ಆಹಾರದ ಕಿಟ್ ವಿತರಣೆ

Suddi Udaya

ಬೆಳ್ತಂಗಡಿ ಮಾತೃಶ್ರೀ ಸಿಲ್ಕ್ ನಲ್ಲಿ ಅಮೋಘ ದರಕಡಿತ ಮಾರಾಟ, ಗ್ರಾಹಕರಿಂದ ಉತ್ತಮ ಪ್ರತಿಕ್ರಿಯೆ

Suddi Udaya

ಕೊಕ್ಕಡ: ಸ್ವಚ್ಛತೆಯೇ ಸೇವೆ, ಶ್ರಮದಾನ, ಸಾಧಕರಿಗೆ ಸನ್ಮಾನ

Suddi Udaya

ಕಣಿಯೂರು ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಯತೀಶ್ ಶೆಟ್ಟಿ ಪಣೆಕ್ಕರ ಆಯ್ಕೆ

Suddi Udaya

ಗುರುವಾಯನಕೆರೆ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಗೆ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ

Suddi Udaya

ಕಾಂಗ್ರೆಸ್ ಪಕ್ಷದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಬಿ ಕೆ ಹರಿಪ್ರಸಾದ್ ರವರಿಗೆ ಶ್ರೀ ಕ್ಷೇತ್ರ ಗೆಜ್ಜೆಗಿರಿ ಸಮಿತಿಯಿಂದ ಅಭಿನಂದನೆ

Suddi Udaya
error: Content is protected !!