25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆನ್ನುಹುರಿ ಅಪಘಾತಕ್ಕೆ ಒಳಾಗದವರಿಗೆ ರೂ. 5 ಸಾವಿರ ಮಾಸಾಶನ ನೀಡಲು ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾ‌ರ್ ಆಗ್ರಹ

ಬೆಳ್ತಂಗಡಿ: ಬೆನ್ನುಹುರಿ ಅಪಘಾತಕ್ಕೆ ಒಳಾಗದವರಿಗೆ ರೂ. 5 ಸಾವಿರ ಮಾಸಾಶನ ನೀಡುವಂತೆ ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾ‌ರ್ ಆಗ್ರಹಿಸಿದ್ದಾರೆ.

ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ವಿಶೇಷ ಅಧಿವೇಶನದಲ್ಲಿ ಮಾತನಾಡಿದ ಹರೀಶ್ ಕುಮಾ‌ರ್ ಅವರು ಕರ್ನಾಟಕದಲ್ಲಿ 20 ಸಾವಿರಕ್ಕೂ ಅಧಿಕ ಮಂದಿ ಬೆನ್ನುಹುರಿ ಅಪಘಾತಕ್ಕೆ ಒಳಗಾದವರು ಇದ್ದಾರೆ. ಅವರ ಬದುಕು ಬಹಳ ಕಷ್ಟಕರವಾಗಿದೆ. ನಡೆದುಕೊಂಡು ಹೋಗಲು ಸಾಧ್ಯವಿಲ್ಲದೆ ವೀಲ್‌ಚೇ‌ರ್ ಮೂಲಕ ಓಡಾಡಬೇಕು. ಅವರಿಗೆ ಆದಾಯ ಇಲ್ಲ. ಸಹಾಯಕ ಒಬ್ಬರು ಬೇಕು. ಆದ್ದರಿಂದ ಬೆನ್ನುಹುರಿ ಅಪಘಾತಕ್ಕೆ ಒಳಗಾದವರಿಗೆ ಐದು ಸಾವಿರ ರೂಪಾಯಿ ಮಾಸಾಶನ ನೀಡಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು.

ರಾಜ್ಯ ಸಲಹಾ ಸಮಿತಿಯ ಅವಧಿ ಮುಗಿದಿದೆ. ಹೊಸ ಸಮಿತಿಯನ್ನು ರಚಿಸಬೇಕು. ಸಮಿತಿಯಲ್ಲಿ ಆಸಕ್ತಿ ಉಳ್ಳ ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರನ್ನು ಸೇರಿಸಿ ಸಮಿತಿಯನ್ನು ಶೀಘ್ರವೇ ರಚಿಸಬೇಕು.ಮಾನಸಿಕ ಅಸ್ವಸ್ಥರಿಗೆ ಮಾನಸಿಕ ಆರೋಗ್ಯ ಕಾರ್ಯಕ್ರಮದ ಅಡಿಯಲ್ಲಿ ಔಷಧ ಮತ್ತು ಆಪ್ತ ಸಮಾಲೋಚನೆಗೆ ವ್ಯವಸ್ಥೆಯಾಗಬೇಕು. ಬೆನ್ನುಹುರಿಯಾದವರಿಗೆ ಯೂರಿನಲ್ ಬ್ಯಾಗ್‌ನ್ನು ತಿಂಗಳಿಗೊಮ್ಮೆ ಬದಲಾವಣೆ ಮಾಡಲು 1400 ರೂಪಾಯಿ ಭತ್ತೆಯನ್ನು ನೀಡುತ್ತಿದ್ದು ಅವರು ಅದನ್ನು ಬದಲಾಯಿಸಲು ಹಾಗೂ ಹೋಗಿ ಬರಲು ವಾಹನದ ವೆಚ್ಚ ಭರಿಸಿದಾಗ ಈ ಹಣ ಸಾಕಾಗುವುದಿಲ್ಲ. ಅವರ ಜೀವನ ನಿರ್ವಹಣೆಗೆ ಪ್ರತಿ ತಿಂಗಳು 5 ಸಾವಿರ ರೂಪಾಯಿ ಮಾಸಾಶನ ನೀಡಬೇಕು. ರಾಜ್ಯದಲ್ಲಿ ನಾಲ್ಕು ವಿಭಾಗ ಕೇಂದ್ರದಲ್ಲಿ ಚಿಕಿತ್ಸಾ ಕೇಂದ್ರವನ್ನು ತೆರೆಯಬೇಕು. ರಾಜ್ಯದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಮಂದಿ ವಿಕಲಚೇತನ ಮಕ್ಕಳು ಶಾಲೆಗೆ ಹೋಗುತ್ತಿದ್ದು ಅವರಿಗೆ ಬೋಧನಾ ಮತ್ತು ಕಲಿಕಾ ಸಾಮಾಗ್ರಿಗಳನ್ನು ಸರಕಾರ ಉಚಿತವಾಗಿ ನೀಡಬೇಕು.

ಸರಕಾರ ಇದಕ್ಕೆ ಎನ್.ಜಿ.ಓ.ಗಳ ಸಹಾಯ ಪಡೆಯಬಹುದು ಎಂದು ಹರೀಶ್ ಕುಮಾರ್ ಹೇಳಿದರು. ಪ್ರತಿಕ್ರಿಯೆ ನೀಡಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆಯ ಸಚಿವ ದಿನೇಶ್ ಗುಂಡೂರಾವ್ ಅವರು ಬೆನ್ನುಹುರಿ ಅಪಘಾತ ಆದ ವಿಕಲಾಂಗರಿಗೆ ಚಿಕಿತ್ಸೆ ನೀಡಲು ಜಿಲ್ಲಾ ಆಸ್ಪತ್ರೆಗಳಲ್ಲಿ ಘಟಕಗಳಿದೆ. ವಿಕಲಚೇತನ ಸೌಲಭ್ಯ ಒದಗಿಸುವುದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಆಗಬೇಕು ಎಂದು ಹೇಳಿದರು.

Related posts

ಕಳಿಯ: ಬೊಳ್ಳುಕಲ್ಲು ಶ್ರೀ ದುರ್ಗಾ ಭಜನಾ ಮಂಡಳಿ 6ನೇ ವಷ೯ದ ವಾರ್ಷಿಕೋತ್ಸವ

Suddi Udaya

ಬೆಳ್ತಂಗಡಿ: ಯುವ ವಕೀಲರ ವೇದಿಕೆಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಧರ್ಮಸ್ಥಳ: ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ

Suddi Udaya

ಕುತ್ಲೂರು ಸ.ಉ.ಪ್ರಾ. ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿಗೆ ಗೌರವ

Suddi Udaya

ಬೆಳ್ತಂಗಡಿ ಶ್ರೀ ದುರ್ಗಾಪರಮೇಶ್ವರಿ ಬಯಲಾಟ ಸೇವಾ ಸಮಿತಿಯ ಅಧ್ಯಕ್ಷರಾಗಿ ಸುರೇಶ್ ಆಚಾರ್ಯ, ಕಾರ್ಯದರ್ಶಿಯಾಗಿ ಕೃಷ್ಣಕುಮಾರ್

Suddi Udaya

ಸುಲ್ಕೇರಿ ಅ.ಹಿ. ಪ್ರಾ. ಶಾಲೆ, ಶ್ರೀರಾಮ ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿಗಳ ಪ್ರವೇಶೋತ್ಸವ ಕಾರ್ಯಕ್ರಮ

Suddi Udaya
error: Content is protected !!