28.6 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿವರದಿ

ಅಳದಂಗಡಿ ಅರಮನೆಗೆ ಶಿಲಾಮಯ ಆನೆಗಳ ಮೆರುಗು: ಪ್ರಸಿದ್ಧ ಬೆಂಗಳೂರು ಉದ್ಯಮಿ ದೇವೇಂದ್ರ ಹೆಗ್ಡೆಯವರಿಂದ ಕೊಡುಗೆ

ಬೆಳ್ತಂಗಡಿ: ಅಳದಂಗಡಿ ಅರಮನೆಗೆ ಶಿಲಾಮಯ ಎರಡು ಆನೆಗಳನ್ನು ಪ್ರಸಿದ್ದ ಕೈಗಾರಿಕೋದ್ಯಮಿ, ಧಾರ್ಮಿಕ ಪರಿಷತ್ ಸದಸ್ಯ ದೇವೆಂದ್ರ ಹೆಗ್ಡೆ ಕೊಕ್ರಾಡಿ ಕೊಡುಗೆಯಾಗಿ ನೀಡಿದರು.

ಅಜಿಲ ಸೀಮೆಯ ಪರಂಪರೆಯನ್ನು ಉಳಿಸಿ ಬೆಳೆಸಿದ ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ ಅಜಿಲರು ಶಿಲಾಮಯ ಆನೆಗಳನ್ನು ಅರಮನೆಯ ರಾಜದ್ವಾರದ ಹತ್ತಿರದಲ್ಲಿ ಅಳವಡಿಸಿದರು.

ಆನೆ ಸುಮಾರು ಮೂರವೆರೆ ಪೀಟ್ ಎತ್ತರವಿದ್ದು 20 ಇಂಚು ಅಗಲ, 38 ಇಂಚು ಉದ್ದವಾಗಿದೆ.ಇದರ ಕೆತ್ತನೆ ಕೆಲಸವನ್ನು ಶಿಲ್ಪಿ ದಿನೇಶ್ ವಿಟ್ಲರವರು ಮಾಡಿದ್ದು ಅಂದಾಜು ವೆಚ್ಚ 2 ಲಕ್ಷದವರೆಗೆ ತಗಲುತ್ತದೆ ಎಂದು ಶಿಲ್ಪಿಯವರು ತಿಳಿಸಿದರು. ಅರಮನೆಯ ವತಿಯಿಂದ ದಾನಿ ದೇವೇಂದ್ರ ಹೆಗ್ಡೆ ಕೊಕ್ರಾಡಿ ಹಾಗೂ ಶಿಲ್ಪಿಯವರನ್ನು ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ‌.ಪದ್ಮಪ್ರಸಾದ್ ಅಜಿಲರು, ಅಳದಂಗಡಿ ಸತ್ಯದೇವತಾ ದೈವಸ್ಥಾನದ ಆಡಳಿತ ಮೊಕ್ತೇಸರ ಶಿವಪ್ರಸಾದ್ ಅಜಿಲ, ಕೈಗಾರಿಕೋದ್ಯಮಿ ದೇವೇಂದ್ರ ಹೆಗ್ಡೆ ಕೊಕ್ರಾಡಿ,ನಿವೃತ ಸೇನಾನಿ ಕ್ಯಾಪ್ಟನ್ ಬ್ರಿಜೇಶ್ ಚೌಟ,ಡಾ.ಪ್ರತಿತ್ ಪಿ ಅಜಿಲ,ಡಾ.ಪ್ರೌಷ್ಠಿಲ್ ಪಿ ಅಜಿಲ,ಜಗದೀಶ್ ಹೆಗ್ಡೆ ನಾವರ ಗುತ್ತು,ಚಾವಡಿ ನಾಯಕರು ರಾಜಶೇಖರ್ ಶೆಟ್ಟಿ, ಸುಪ್ರಿತ್ ಜೈನ್ ಅಳದಂಗಡಿ ಉಪಸ್ಥಿತರಿದ್ದರು.

Related posts

ಸ್ಟಾರ್ ಲೈನ್ ಶಾಲೆ ಮಂಜೊಟ್ಟಿ : ಶಾಲೆಯ ಸಲಹಾ ಸಮಿತಿ ಪ್ರಧಾನ ಸಲಹೆಗಾರರಾಗಿ ಡಾ. ಸಯ್ಯದ್ ಅಮೀನ್ ಅಹಮದ್ ಅಧಿಕಾರ ಸ್ವೀಕಾರ

Suddi Udaya

ಮಾಲಾಡಿ ಅಂಬೇಡ್ಕರ್ ಜನ್ಮ ದಿನಾಚರಣಾ ಸಮಿತಿಯ ವತಿಯಿಂದ ಲಾಯಿಲ ದಯಾ ವಿಶೇಷ ಶಾಲೆಗೆ ಊಟದ ವ್ಯವಸ್ಥೆ

Suddi Udaya

ಬೆಳ್ತಂಗಡಿ ಶ್ರೀ ಲಕ್ಷ್ಮೀ ಪಟಾಕಿ ಅಂಗಡಿಯಲ್ಲಿ ಉತ್ತಮ ರೀತಿಯ ಪಟಾಕಿ ಲಭ್ಯ

Suddi Udaya

ಮತದಾರರ ಜಾಗೃತಿ ಆಂದೋಲನ: ಕಾಲ್ನಡಿಗೆ ಜಾಥಾ ಚುನಾವಣೆ – ನಮ್ಮ ಹೊಣೆ ಬೀದಿ ನಾಟಕ ಪ್ರದರ್ಶನ

Suddi Udaya

ಕರ್ನಾಟಕ ರಾಜ್ಯ ವೇಯ್ಟ್ ಲಿಫ್ಟಿಂಗ್ ಚಾಂಪಿಯನ್‌ಶಿಪ್ ಆಳ್ವಾಸ್ ಕಾಲೇಜಿಗೆ ಸಮಗ್ರ ತಂಡ ಪ್ರಶಸ್ತಿ

Suddi Udaya

ಅರಸಿನಮಕ್ಕಿ ಗ್ರಾ.ಪಂ.ನಿಂದ ಚರಂಡಿ ದುರಸ್ಥಿ ಕಾರ್ಯ

Suddi Udaya
error: Content is protected !!