ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿವರದಿ

ಅಳದಂಗಡಿ ಅರಮನೆಗೆ ಶಿಲಾಮಯ ಆನೆಗಳ ಮೆರುಗು: ಪ್ರಸಿದ್ಧ ಬೆಂಗಳೂರು ಉದ್ಯಮಿ ದೇವೇಂದ್ರ ಹೆಗ್ಡೆಯವರಿಂದ ಕೊಡುಗೆ

ಬೆಳ್ತಂಗಡಿ: ಅಳದಂಗಡಿ ಅರಮನೆಗೆ ಶಿಲಾಮಯ ಎರಡು ಆನೆಗಳನ್ನು ಪ್ರಸಿದ್ದ ಕೈಗಾರಿಕೋದ್ಯಮಿ, ಧಾರ್ಮಿಕ ಪರಿಷತ್ ಸದಸ್ಯ ದೇವೆಂದ್ರ ಹೆಗ್ಡೆ ಕೊಕ್ರಾಡಿ ಕೊಡುಗೆಯಾಗಿ ನೀಡಿದರು.

ಅಜಿಲ ಸೀಮೆಯ ಪರಂಪರೆಯನ್ನು ಉಳಿಸಿ ಬೆಳೆಸಿದ ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ ಅಜಿಲರು ಶಿಲಾಮಯ ಆನೆಗಳನ್ನು ಅರಮನೆಯ ರಾಜದ್ವಾರದ ಹತ್ತಿರದಲ್ಲಿ ಅಳವಡಿಸಿದರು.

ಆನೆ ಸುಮಾರು ಮೂರವೆರೆ ಪೀಟ್ ಎತ್ತರವಿದ್ದು 20 ಇಂಚು ಅಗಲ, 38 ಇಂಚು ಉದ್ದವಾಗಿದೆ.ಇದರ ಕೆತ್ತನೆ ಕೆಲಸವನ್ನು ಶಿಲ್ಪಿ ದಿನೇಶ್ ವಿಟ್ಲರವರು ಮಾಡಿದ್ದು ಅಂದಾಜು ವೆಚ್ಚ 2 ಲಕ್ಷದವರೆಗೆ ತಗಲುತ್ತದೆ ಎಂದು ಶಿಲ್ಪಿಯವರು ತಿಳಿಸಿದರು. ಅರಮನೆಯ ವತಿಯಿಂದ ದಾನಿ ದೇವೇಂದ್ರ ಹೆಗ್ಡೆ ಕೊಕ್ರಾಡಿ ಹಾಗೂ ಶಿಲ್ಪಿಯವರನ್ನು ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ‌.ಪದ್ಮಪ್ರಸಾದ್ ಅಜಿಲರು, ಅಳದಂಗಡಿ ಸತ್ಯದೇವತಾ ದೈವಸ್ಥಾನದ ಆಡಳಿತ ಮೊಕ್ತೇಸರ ಶಿವಪ್ರಸಾದ್ ಅಜಿಲ, ಕೈಗಾರಿಕೋದ್ಯಮಿ ದೇವೇಂದ್ರ ಹೆಗ್ಡೆ ಕೊಕ್ರಾಡಿ,ನಿವೃತ ಸೇನಾನಿ ಕ್ಯಾಪ್ಟನ್ ಬ್ರಿಜೇಶ್ ಚೌಟ,ಡಾ.ಪ್ರತಿತ್ ಪಿ ಅಜಿಲ,ಡಾ.ಪ್ರೌಷ್ಠಿಲ್ ಪಿ ಅಜಿಲ,ಜಗದೀಶ್ ಹೆಗ್ಡೆ ನಾವರ ಗುತ್ತು,ಚಾವಡಿ ನಾಯಕರು ರಾಜಶೇಖರ್ ಶೆಟ್ಟಿ, ಸುಪ್ರಿತ್ ಜೈನ್ ಅಳದಂಗಡಿ ಉಪಸ್ಥಿತರಿದ್ದರು.

Related posts

ಮಹಾಕುಂಭಮೇಳದಲ್ಲಿ ಪವಿತ್ರ ಸ್ಥಾನಗೈದ ನಾರಾವಿ, ಉಪ್ಪಿನಂಗಡಿ ಮಾಂಡೋವಿ ಮೋಟರ್ಸ್ ನ ಸೀನಿಯರ್ ರಿಲೇಷನ್ಶಿಪ್ ಮ್ಯಾನೇಜರ್ ಚರಣ್ ಕುಮಾರ್, ಹರ್ಷ ರೈ

Suddi Udaya

ಶಿಶಿಲ: ನಿಷೇಧಿತ ಪ್ರದೇಶದಲ್ಲಿ ರಾತ್ರಿ ಮೀನು ಹಿಡಿಯಲು ಬಂದವರನ್ನು ಪತ್ತೆ ಹಚ್ಚಿದ ಸ್ಥಳೀಯರು

Suddi Udaya

ಬೆಳ್ತಂಗಡಿ ಶ್ರೀ ದುರ್ಗಾಪರಮೇಶ್ವರಿ ಬಯಲಾಟ ಸೇವಾ ಸಮಿತಿಯ ಅಧ್ಯಕ್ಷರಾಗಿ ಸುರೇಶ್ ಆಚಾರ್ಯ, ಕಾರ್ಯದರ್ಶಿಯಾಗಿ ಕೃಷ್ಣಕುಮಾರ್

Suddi Udaya

ಕುತ್ಲೂರು ಗುರುನಾರಾಯಣ ಸೇವಾ ಸಂಘ ದ ಅಧ್ಯಕ್ಷರಾಗಿ ಕೇಶವ ಪೂಜಾರಿ ಆಯ್ಕೆ

Suddi Udaya

ಕನ್ಯಾಡಿ ಸೇವಾಭಾರತಿಯಿಂದ ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್ ಭೇಟಿ

Suddi Udaya

ಪೆರೋಡಿತ್ತಾಯಕಟ್ಟೆ ಶಾಲೆಯ ಎಸ್.ಡಿ.ಎಂ.ಸಿ ಸಮಿತಿ ರಚನೆ

Suddi Udaya
error: Content is protected !!