24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಡಿ.7 ಧರ್ಮಸ್ಥಳದಲ್ಲಿ ಪದಾಧಿಕಾರಿಗಳ ಸಹಮಿಲನ ಹಾಗೂ ವ್ಯಸನ ಮುಕ್ತರ ಕುಟುಂಬೋತ್ಸವ

ಧರ್ಮಸ್ಥಳ:ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಧರ್ಮಸ್ಥಳ, ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ ಟ್ರಸ್ಟ್ ಧರ್ಮಸ್ಥಳ ಇದರ ಆಶ್ರಯದಲ್ಲಿ ರಾಜ್ಯಾದ್ಯಂತ ನಡೆಸಲಾದ ಮದ್ಯವರ್ಜನ ಶಿಬಿರಗಳಲ್ಲಿ ಭಾಗವಹಿಸಿ ಸಂತೃಪ್ತ ಜೀವನ ನಡೆಸುತ್ತಿರುವ ಹಾಗೂ ವೇದಿಕೆಯ ಯಶಸ್ಸಿಗಾಗಿ ಯಾವುದೇ ಫಲಾಪೇಕ್ಷೆ ಇಲ್ಲದೆ ಶ್ರಮಿಸುತ್ತಿರುವ ಜನಜಾಗೃತಿ ವೇದಿಕೆ ಪದಾಧಿಕಾರಿಗಳ ಸಹಮಿಲನ ಹಾಗೂ ವ್ಯಸನಮುಕ್ತರ ಕುಟುಂಬೋತ್ಸವ ಡಿ. 7ರಂದು ಪೂರ್ವಾಹ್ನ ಗಂಟೆ 10:3೦ರಿಂದ ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ಜರಗಲಿದೆ.

ಜ್ಞಾನವಿಕಾಸ ಮಹಿಳಾ ಕಾರ್ಯಕ್ರಮದ ಅಧ್ಯಕ್ಷರಾದ ಡಾ.ಹೇಮಾವತಿ ವೀ. ಹೆಗ್ಗಡೆಯವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಅಧ್ಯಕ್ಷತೆ ವಹಿಸಲಿದ್ದಾರೆ. ಕಲ್ಬುರ್ಗಿಯ ಅಫ್ಜಲಪುರ ಶ್ರೀ ಮಳೇಂದ್ರ ಸಂಸ್ಥಾನ ಹಿರೇಮಠದಶ್ರೀ ಷ.ಬ್ರ.ವಿಶ್ವರಾಧ್ಯ ಮಳೇಂದ್ರ ಶಿವಾಚಾರ್ಯರು ಆಶೀರ್ವಚನ ನೀಡುವರು. ಯೋಜನೆಯ ಸಿಇಒ ಡಾ. ಎಲ್. ಎಚ್. ಮಂಜುನಾಥ್ ಪ್ರಶಸ್ತಿ ಪ್ರದಾನ ನೆರವೇರಿಸಲಿದ್ದಾರೆ.ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ ಟ್ರಸ್ಟ್ ನ ಟ್ರಸ್ಟಿ ಶ್ರದ್ಧಾ ಅಮಿತ್ ಸಾಧಕರಿಗೆ ಗೌರವ, ಟ್ರಸ್ಟಿ ವಿ.ರಾಮಸ್ವಾಮಿ ಗುರುತಿನ ಚೀಟಿ,ನಿಕಟ ಪೂರ್ವ ಅಧ್ಯಕ್ಷ ಸತೀಶ್ ಹೊನ್ನವಳ್ಳಿ ಪ್ರಮಾಣ ಪತ್ರ ವಿತರಣೆ ನೆರವೇರಿಸುವರು.ಟ್ರಸ್ಟಿ ಗಳಾದ ಡಾ.ಪಿ.ವಿ.ಭಂಡಾರಿ, ಡಾ. ಶ್ರೀನಿವಾಸ್ ಭಟ್, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ನಿಕಟಪೂರ್ವ ಅಧ್ಯಕ್ಷ ದೇವದಾಸ ಹೆಬ್ಬಾರ್,ಯೋಜನೆಯ ಮುಖ್ಯ ನಿರ್ವಹಣಾಧಿಕಾರಿ ಅನಿಲ್ ಕುಮಾರ್ ಎಸ್.ಎಸ್.ಹಾಗೂ ಜನಜಾಗೃತಿ ವೇದಿಕೆ ಬೆಳ್ತಂಗಡಿ ಇದರ ಸ್ಥಾಪಕಾಧ್ಯಕ್ಷ ಕೆ. ವಸಂತ ಸಾಲ್ಯಾನ್ ಉಪಸ್ಥಿತರಿರುವರೆಂದು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ರಾಜ್ಯಾಧ್ಯಕ್ಷ ರಾಜಣ್ಣ ಮೂ.ಕೊರವಿಹಾಗೂ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಪ್ರಾದೇಶಿಕ ನಿರ್ದೇಶಕ ವಿವೇಕ್ ವಿ.ಪಾಯ್ಸ್ ತಿಳಿಸಿದ್ದಾರೆ.

Related posts

ಧರ್ಮಸ್ಥಳ-ನಾರಾವಿ ನಡುವಿನ ಸರಕಾರಿ ಬಸ್ ತಡೆ ಹಿಡಿದಿರುವ ರಾಜ್ಯ ಸರ್ಕಾರದ ನಡೆ ಖಂಡಿಸಿ ಇಂದು ಸಂಜೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನಿಂದ ಬೃಹತ್ ಪ್ರತಿಭಟನೆ

Suddi Udaya

ಔಷಧ ದಾನಕ್ಕಾಗಿ ಕ್ಷೇತ್ರದಿಂದ ವಾರ್ಷಿಕವಾಗಿ ರೂ.2ರಿಂದ 3 ಕೋಟಿ ರೂ. ಅನುದಾನ: ಡಾ.ಹೆಗ್ಗಡೆ

Suddi Udaya

ವಲಯ ಮಟ್ಟದ ಕ್ರೀಡಾಕೂಟ: ಎಸ್.ಡಿ.ಎಂ. ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ: ಮುಂಡತ್ತೋಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೆಟ್ರಿಕ್ ಮೇಳ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ವತಿಯಿಂದ ಜಿಲ್ಲಾ ಮಟ್ಟದ ಬೆನ್ನಿದ ನಿರೆಲ್ದ ಬಿರ್ದ್ ಇದರ ಛಾಯಾಚಿತ್ರ ಹಾಗೂ ವೀಡಿಯೋ ಸ್ಪರ್ಧೆ: ಬೆಳ್ತಂಗಡಿ ವಲಯ ಪ್ರಥಮ ಸ್ಥಾನ

Suddi Udaya

ಕಳಿಯ: ಮನೆಗೆ ನುಗ್ಗಿದ್ದ ಕಳ್ಳರು : ಸುಮಾರು ರೂ.46450 ಮೌಲ್ಯದ ಸೊತ್ತುಗಳು ಕಳವು

Suddi Udaya
error: Content is protected !!