July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಡಿ.7 ಧರ್ಮಸ್ಥಳದಲ್ಲಿ ಪದಾಧಿಕಾರಿಗಳ ಸಹಮಿಲನ ಹಾಗೂ ವ್ಯಸನ ಮುಕ್ತರ ಕುಟುಂಬೋತ್ಸವ

ಧರ್ಮಸ್ಥಳ:ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಧರ್ಮಸ್ಥಳ, ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ ಟ್ರಸ್ಟ್ ಧರ್ಮಸ್ಥಳ ಇದರ ಆಶ್ರಯದಲ್ಲಿ ರಾಜ್ಯಾದ್ಯಂತ ನಡೆಸಲಾದ ಮದ್ಯವರ್ಜನ ಶಿಬಿರಗಳಲ್ಲಿ ಭಾಗವಹಿಸಿ ಸಂತೃಪ್ತ ಜೀವನ ನಡೆಸುತ್ತಿರುವ ಹಾಗೂ ವೇದಿಕೆಯ ಯಶಸ್ಸಿಗಾಗಿ ಯಾವುದೇ ಫಲಾಪೇಕ್ಷೆ ಇಲ್ಲದೆ ಶ್ರಮಿಸುತ್ತಿರುವ ಜನಜಾಗೃತಿ ವೇದಿಕೆ ಪದಾಧಿಕಾರಿಗಳ ಸಹಮಿಲನ ಹಾಗೂ ವ್ಯಸನಮುಕ್ತರ ಕುಟುಂಬೋತ್ಸವ ಡಿ. 7ರಂದು ಪೂರ್ವಾಹ್ನ ಗಂಟೆ 10:3೦ರಿಂದ ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ಜರಗಲಿದೆ.

ಜ್ಞಾನವಿಕಾಸ ಮಹಿಳಾ ಕಾರ್ಯಕ್ರಮದ ಅಧ್ಯಕ್ಷರಾದ ಡಾ.ಹೇಮಾವತಿ ವೀ. ಹೆಗ್ಗಡೆಯವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಅಧ್ಯಕ್ಷತೆ ವಹಿಸಲಿದ್ದಾರೆ. ಕಲ್ಬುರ್ಗಿಯ ಅಫ್ಜಲಪುರ ಶ್ರೀ ಮಳೇಂದ್ರ ಸಂಸ್ಥಾನ ಹಿರೇಮಠದಶ್ರೀ ಷ.ಬ್ರ.ವಿಶ್ವರಾಧ್ಯ ಮಳೇಂದ್ರ ಶಿವಾಚಾರ್ಯರು ಆಶೀರ್ವಚನ ನೀಡುವರು. ಯೋಜನೆಯ ಸಿಇಒ ಡಾ. ಎಲ್. ಎಚ್. ಮಂಜುನಾಥ್ ಪ್ರಶಸ್ತಿ ಪ್ರದಾನ ನೆರವೇರಿಸಲಿದ್ದಾರೆ.ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ ಟ್ರಸ್ಟ್ ನ ಟ್ರಸ್ಟಿ ಶ್ರದ್ಧಾ ಅಮಿತ್ ಸಾಧಕರಿಗೆ ಗೌರವ, ಟ್ರಸ್ಟಿ ವಿ.ರಾಮಸ್ವಾಮಿ ಗುರುತಿನ ಚೀಟಿ,ನಿಕಟ ಪೂರ್ವ ಅಧ್ಯಕ್ಷ ಸತೀಶ್ ಹೊನ್ನವಳ್ಳಿ ಪ್ರಮಾಣ ಪತ್ರ ವಿತರಣೆ ನೆರವೇರಿಸುವರು.ಟ್ರಸ್ಟಿ ಗಳಾದ ಡಾ.ಪಿ.ವಿ.ಭಂಡಾರಿ, ಡಾ. ಶ್ರೀನಿವಾಸ್ ಭಟ್, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ನಿಕಟಪೂರ್ವ ಅಧ್ಯಕ್ಷ ದೇವದಾಸ ಹೆಬ್ಬಾರ್,ಯೋಜನೆಯ ಮುಖ್ಯ ನಿರ್ವಹಣಾಧಿಕಾರಿ ಅನಿಲ್ ಕುಮಾರ್ ಎಸ್.ಎಸ್.ಹಾಗೂ ಜನಜಾಗೃತಿ ವೇದಿಕೆ ಬೆಳ್ತಂಗಡಿ ಇದರ ಸ್ಥಾಪಕಾಧ್ಯಕ್ಷ ಕೆ. ವಸಂತ ಸಾಲ್ಯಾನ್ ಉಪಸ್ಥಿತರಿರುವರೆಂದು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ರಾಜ್ಯಾಧ್ಯಕ್ಷ ರಾಜಣ್ಣ ಮೂ.ಕೊರವಿಹಾಗೂ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಪ್ರಾದೇಶಿಕ ನಿರ್ದೇಶಕ ವಿವೇಕ್ ವಿ.ಪಾಯ್ಸ್ ತಿಳಿಸಿದ್ದಾರೆ.

Related posts

ಸ್ಟಾರ್ ಲೈನ್ ಶಾಲೆಯಲ್ಲಿ ” ನ್ಯಾಷನಲ್ ಮಾಥ್ಸ್ ಡೇ “ಮತ್ತು ವಿಜ್ಞಾನ ವಸ್ತು ಪ್ರದರ್ಶನ

Suddi Udaya

ಶ್ರೀ ಧ. ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪರಿಸರ ಹಾಗೂ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಪ್ರಾಥಮಿಕ ಹಾಗೂ ಪೂರ್ವ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ

Suddi Udaya

ಕಳೆಂಜ ಅಂಗಡಿಯಲ್ಲಿ ಅಕ್ರಮ ಮದ್ಯ ಸಂಗ್ರಹ ಮಾಡಿದ ಆರೋಪ: ಅಂಗಡಿ ಮಾಲಕನ್ನು ದೋಷಯುಕ್ತಗೊಳಿಸಿ ನ್ಯಾಯಾಲಯ ಆದೇಶ

Suddi Udaya

ಪರಸ್ಪರ ಸೇವಾ ಬ್ರಿಗೇಡ್ ಸಂಸ್ಥೆಯಿಂದ ಧನಸಹಾಯ ವಿತರಣೆ

Suddi Udaya

ಪಡ್ಡಂದಡ್ಕ ಮುನವಿರುಲ್ ಇಸ್ಲಾಂ ಮದರಸ ಪ್ರಾರಂಭೋತ್ಸವ

Suddi Udaya

ಬಳಂಜ : ಪರಿಸರ ಗಿಡ ನಾಟಿ ಕಾರ್ಯಕ್ರಮ

Suddi Udaya
error: Content is protected !!