23.6 C
ಪುತ್ತೂರು, ಬೆಳ್ತಂಗಡಿ
June 16, 2025
ನಿಧನ

ಸಾಲಬಾಧೆ – ಕೃಷಿಯಲ್ಲಿ ನಷ್ಟ: ಮಲವಂತಿಗೆ ಬಾಡಿಗೆ ಮನೆಯಲ್ಲಿರಾಧೀಶ್ ಆತ್ಮಹತ್ಯೆ

ಬೆಳ್ತಂಗಡಿ: ಸಾಲಬಾಧೆ ಹಾಗೂ ಕೃಷಿ ನಷ್ಟದಿಂದ ನೊಂದ ಕಲ್ಮಂಜ ಗ್ರಾಮದ ನಿಡಿಗಲ್ಲು ಆದರ್ಶ ನಗರ
ಮನೆ, ನಿವಾಸಿ ರಾಧೀಶ್ (36) ರವರು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ.
ರಾಧೀಶ್‌ ಪ್ರಸ್ತುತ ಮಲವಂತಿಗೆ ಗ್ರಾಮದ ಅಂತರ ಸೂರ್ಯಗುತ್ತು ರವರ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. 3-4 ವರ್ಷಗಳ ಹಿಂದೆ ಕಲ್ಮಂಜ ಗ್ರಾಮದ ನಿಡಿಗಲ್ಲು ಎಂಬಲ್ಲಿ ಹೊಸ ಮನೆಯನ್ನು ನಿರ್ಮಿಸಿ ಮನೆ ಕಟ್ಟುವ ಸಮಯ ಬ್ಯಾಂಕಿನಿಂದ ಸಾಲವನ್ನು ಮಾಡಕೊಂಡಿದ್ದರು. ಅಲ್ಲದೇ ಲೀಸ್ ಗೆ ಮಾಡಿಕೊಂಡಿದ್ದ ಕೃಷಿ ತೋಟದಲ್ಲಿಯೂ ನಷ್ಟ ಉಂಟಾಗಿದ್ದು ಈ ಎಲ್ಲಾ ಸಮಸ್ಯೆಗಳಿಂದ ಮದ್ಯ ಸೇವಿಸಲು ಪ್ರಾರಂಭಿಸಿದ್ದರು. ಕಳೆದ ಜೂ.7 ರಂದು ಬಾಡಿಗೆ ಮನೆಯಲ್ಲಿ ರಾತ್ರಿ ಸಮಯ ನೇಣು ಬಿಗಿದು ಆತ್ಮ ಹತ್ಯೆ ಮಾಡಿಕೊಳ್ಳಲು ಪ್ರಯತ್ನಸಿದ ಸಮಯ ಬಿದ್ದು ಹಣೆಯ ಭಾಗಕ್ಕೆ ತಾಗಿ ಈ ಬಗ್ಗೆ ತಲೆಯಲ್ಲಿ ನರದ ತೊಂದರೆ ಕಾಣಿಸಿಕೊಂಡು 1 ನ್ಯಾರೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸುತ್ತಿದ್ದು ವಿಶ್ರಾಂತಿಯಲ್ಲಿ ಇದ್ದವರು ಡಿ.4 ರಂದು ರಾತ್ರಿ ಸುಮಾರು 9 ಗಂಟೆಯಿಂದ 9.45 ಗಂಟೆಯ ಮಧ್ಯೆದ ಅವಧಿಯಲ್ಲಿ ಅಂತರ ಬಾಡಿಗೆ ಮನೆಯ ಎದುರಿನ ಶೀಟಿನ ರಾಡಿಗೆ ಕುತ್ತಿಗೆ ನೇಣು ಬಿಗಿದು ಆತ್ಮ ಹತ್ಯೆ ಮಾಡಿಕೊಂಡಿರುವುದಾಗಿ ಮೃತರ ಪತ್ನಿ ರಂಜಿನಿ ಅವರು ನೀಡಿದ ದೂರಿನಂತೆ ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆ ಯುಡಿ ಆರ್ ಸಂಖ್ಯೆ: 57/2023 ಕಲಂ 174 ಸಿ.ಆರ್.ಪಿ.ಸಿ. ಯಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ವೇಣೂರಿನ ನಡ್ತಿಕಲ್ ನಿವಾಸಿ ಕೆ. ಬಿ. ಅಬ್ದುಲ್ ಖಾದರ್ ನಿಧನ

Suddi Udaya

ಧರ್ಮಸ್ಥಳ ದೊಂಡೋಲೆ ನಿವಾಸಿ ಸಂತೋಷ್ ಶೆಟ್ಟಿ ನಿಧನ

Suddi Udaya

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಸ್ಥಾಪಕಾಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿ ಮಾತೃಶ್ರೀ ಶ್ರೀಮತಿ ಅಮಣಿ ಶೆಟ್ಟಿ ನಿಧನ

Suddi Udaya

ಸುಲ್ಕೇರಿಮೊಗ್ರು ಪಾಲ್ತ್ಯರಡ್ಡ ನಿವಾಸಿ ಶೇಖರ ಪೂಜಾರಿ ನಿಧನ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಸಾವು: ವಾರೀಸುದಾರರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಪುಂಜಾಲಕಟ್ಟೆ: ಬೇರ್ಕಳ ಪೆರುವಾರು ಮನೆಯ ಬಾಬು ಶೆಟ್ಟಿ ನಿಧನ

Suddi Udaya
error: Content is protected !!