25.5 C
ಪುತ್ತೂರು, ಬೆಳ್ತಂಗಡಿ
June 8, 2026
ನಿಧನ

ಸಾಲಬಾಧೆ – ಕೃಷಿಯಲ್ಲಿ ನಷ್ಟ: ಮಲವಂತಿಗೆ ಬಾಡಿಗೆ ಮನೆಯಲ್ಲಿರಾಧೀಶ್ ಆತ್ಮಹತ್ಯೆ

ಬೆಳ್ತಂಗಡಿ: ಸಾಲಬಾಧೆ ಹಾಗೂ ಕೃಷಿ ನಷ್ಟದಿಂದ ನೊಂದ ಕಲ್ಮಂಜ ಗ್ರಾಮದ ನಿಡಿಗಲ್ಲು ಆದರ್ಶ ನಗರ
ಮನೆ, ನಿವಾಸಿ ರಾಧೀಶ್ (36) ರವರು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ.
ರಾಧೀಶ್‌ ಪ್ರಸ್ತುತ ಮಲವಂತಿಗೆ ಗ್ರಾಮದ ಅಂತರ ಸೂರ್ಯಗುತ್ತು ರವರ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. 3-4 ವರ್ಷಗಳ ಹಿಂದೆ ಕಲ್ಮಂಜ ಗ್ರಾಮದ ನಿಡಿಗಲ್ಲು ಎಂಬಲ್ಲಿ ಹೊಸ ಮನೆಯನ್ನು ನಿರ್ಮಿಸಿ ಮನೆ ಕಟ್ಟುವ ಸಮಯ ಬ್ಯಾಂಕಿನಿಂದ ಸಾಲವನ್ನು ಮಾಡಕೊಂಡಿದ್ದರು. ಅಲ್ಲದೇ ಲೀಸ್ ಗೆ ಮಾಡಿಕೊಂಡಿದ್ದ ಕೃಷಿ ತೋಟದಲ್ಲಿಯೂ ನಷ್ಟ ಉಂಟಾಗಿದ್ದು ಈ ಎಲ್ಲಾ ಸಮಸ್ಯೆಗಳಿಂದ ಮದ್ಯ ಸೇವಿಸಲು ಪ್ರಾರಂಭಿಸಿದ್ದರು. ಕಳೆದ ಜೂ.7 ರಂದು ಬಾಡಿಗೆ ಮನೆಯಲ್ಲಿ ರಾತ್ರಿ ಸಮಯ ನೇಣು ಬಿಗಿದು ಆತ್ಮ ಹತ್ಯೆ ಮಾಡಿಕೊಳ್ಳಲು ಪ್ರಯತ್ನಸಿದ ಸಮಯ ಬಿದ್ದು ಹಣೆಯ ಭಾಗಕ್ಕೆ ತಾಗಿ ಈ ಬಗ್ಗೆ ತಲೆಯಲ್ಲಿ ನರದ ತೊಂದರೆ ಕಾಣಿಸಿಕೊಂಡು 1 ನ್ಯಾರೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸುತ್ತಿದ್ದು ವಿಶ್ರಾಂತಿಯಲ್ಲಿ ಇದ್ದವರು ಡಿ.4 ರಂದು ರಾತ್ರಿ ಸುಮಾರು 9 ಗಂಟೆಯಿಂದ 9.45 ಗಂಟೆಯ ಮಧ್ಯೆದ ಅವಧಿಯಲ್ಲಿ ಅಂತರ ಬಾಡಿಗೆ ಮನೆಯ ಎದುರಿನ ಶೀಟಿನ ರಾಡಿಗೆ ಕುತ್ತಿಗೆ ನೇಣು ಬಿಗಿದು ಆತ್ಮ ಹತ್ಯೆ ಮಾಡಿಕೊಂಡಿರುವುದಾಗಿ ಮೃತರ ಪತ್ನಿ ರಂಜಿನಿ ಅವರು ನೀಡಿದ ದೂರಿನಂತೆ ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆ ಯುಡಿ ಆರ್ ಸಂಖ್ಯೆ: 57/2023 ಕಲಂ 174 ಸಿ.ಆರ್.ಪಿ.ಸಿ. ಯಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ಚಾರ್ಮಾಡಿ ಘಾಟಿಯಲ್ಲಿ ಕಾರು ಅಪಘಾತ: ಉಜಿರೆಯ ಸರೋಜಿನಿ ಶೆಟ್ಟಿ ಮೃತ್ಯು

Suddi Udaya

ಪದ್ಮುಂಜ: ಮಲೆಂಗಲ್ಲು ನಿವಾಸಿ ಗೋಪಿ ನಿಧನ

Suddi Udaya

ಆರಂಬೋಡಿ: ಪಾಲ್ಯ ನಿವಾಸಿ ಓಡಿ ಕೊರಗ ನಿಧನ

Suddi Udaya

ಅಲ್ಯುಮಿನಿಯಂ ದೋಂಟಿಗೆ ವಿದ್ಯುತ್ ಸ್ಪರ್ಷ: ಸಿಹಿಯಾಳ ತೆಗೆಯುತ್ತಿದ್ದ ಕೃಷಿಕ ಸಾವು

Suddi Udaya

ಧರ್ಮಸ್ಥಳ: ದೊಂಡೋಲೆ ನಿವಾಸಿ ಗೃಹೋದ್ಯಮಿ ಸಂಧ್ಯಾ ಎಸ್ ಭಟ್ ನಿಧನ

Suddi Udaya

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಸ್ಥಾಪಕಾಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿ ಮಾತೃಶ್ರೀ ಶ್ರೀಮತಿ ಅಮಣಿ ಶೆಟ್ಟಿ ನಿಧನ

Suddi Udaya
error: Content is protected !!