23.7 C
ಪುತ್ತೂರು, ಬೆಳ್ತಂಗಡಿ
April 24, 2026
ನಿಧನ

ಸಾಲಬಾಧೆ – ಕೃಷಿಯಲ್ಲಿ ನಷ್ಟ: ಮಲವಂತಿಗೆ ಬಾಡಿಗೆ ಮನೆಯಲ್ಲಿರಾಧೀಶ್ ಆತ್ಮಹತ್ಯೆ

ಬೆಳ್ತಂಗಡಿ: ಸಾಲಬಾಧೆ ಹಾಗೂ ಕೃಷಿ ನಷ್ಟದಿಂದ ನೊಂದ ಕಲ್ಮಂಜ ಗ್ರಾಮದ ನಿಡಿಗಲ್ಲು ಆದರ್ಶ ನಗರ
ಮನೆ, ನಿವಾಸಿ ರಾಧೀಶ್ (36) ರವರು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ.
ರಾಧೀಶ್‌ ಪ್ರಸ್ತುತ ಮಲವಂತಿಗೆ ಗ್ರಾಮದ ಅಂತರ ಸೂರ್ಯಗುತ್ತು ರವರ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. 3-4 ವರ್ಷಗಳ ಹಿಂದೆ ಕಲ್ಮಂಜ ಗ್ರಾಮದ ನಿಡಿಗಲ್ಲು ಎಂಬಲ್ಲಿ ಹೊಸ ಮನೆಯನ್ನು ನಿರ್ಮಿಸಿ ಮನೆ ಕಟ್ಟುವ ಸಮಯ ಬ್ಯಾಂಕಿನಿಂದ ಸಾಲವನ್ನು ಮಾಡಕೊಂಡಿದ್ದರು. ಅಲ್ಲದೇ ಲೀಸ್ ಗೆ ಮಾಡಿಕೊಂಡಿದ್ದ ಕೃಷಿ ತೋಟದಲ್ಲಿಯೂ ನಷ್ಟ ಉಂಟಾಗಿದ್ದು ಈ ಎಲ್ಲಾ ಸಮಸ್ಯೆಗಳಿಂದ ಮದ್ಯ ಸೇವಿಸಲು ಪ್ರಾರಂಭಿಸಿದ್ದರು. ಕಳೆದ ಜೂ.7 ರಂದು ಬಾಡಿಗೆ ಮನೆಯಲ್ಲಿ ರಾತ್ರಿ ಸಮಯ ನೇಣು ಬಿಗಿದು ಆತ್ಮ ಹತ್ಯೆ ಮಾಡಿಕೊಳ್ಳಲು ಪ್ರಯತ್ನಸಿದ ಸಮಯ ಬಿದ್ದು ಹಣೆಯ ಭಾಗಕ್ಕೆ ತಾಗಿ ಈ ಬಗ್ಗೆ ತಲೆಯಲ್ಲಿ ನರದ ತೊಂದರೆ ಕಾಣಿಸಿಕೊಂಡು 1 ನ್ಯಾರೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸುತ್ತಿದ್ದು ವಿಶ್ರಾಂತಿಯಲ್ಲಿ ಇದ್ದವರು ಡಿ.4 ರಂದು ರಾತ್ರಿ ಸುಮಾರು 9 ಗಂಟೆಯಿಂದ 9.45 ಗಂಟೆಯ ಮಧ್ಯೆದ ಅವಧಿಯಲ್ಲಿ ಅಂತರ ಬಾಡಿಗೆ ಮನೆಯ ಎದುರಿನ ಶೀಟಿನ ರಾಡಿಗೆ ಕುತ್ತಿಗೆ ನೇಣು ಬಿಗಿದು ಆತ್ಮ ಹತ್ಯೆ ಮಾಡಿಕೊಂಡಿರುವುದಾಗಿ ಮೃತರ ಪತ್ನಿ ರಂಜಿನಿ ಅವರು ನೀಡಿದ ದೂರಿನಂತೆ ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆ ಯುಡಿ ಆರ್ ಸಂಖ್ಯೆ: 57/2023 ಕಲಂ 174 ಸಿ.ಆರ್.ಪಿ.ಸಿ. ಯಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ಉಜಿರೆ: ಕೋಡಿಬೈಲು ನಿವಾಸಿ ಪ್ರಭಾಕರ ಪಡುವೆಟ್ನಾಯ ನಿಧನ 

Suddi Udaya

ಕೊಕ್ಕಡ: ಕಲ್ಲಡ್ಕ ನಿವಾಸಿ ಬಾಬು ಮಲೆಕುಡಿಯ ನಿಧನ

Suddi Udaya

ಬಳಂಜ ಸುವರ್ಣ ನಿಲಯದ ವೆಂಕಮ್ಮ ನಿಧನ.

Suddi Udaya

ಮಚ್ಚಿನ: ಬಳ್ಳ ಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಾಲಯದ ಹಿರಿಯ ಅರ್ಚಕ ನಾರಾಯಣ ಪುತ್ರಾಯ ನಿಧನ

Suddi Udaya

ಅಳದಂಗಡಿ: ಪ್ರಸಿದ್ದ ನಾದಸ್ವರ ವಾದಕ ಗಣೇಶ್ ಪೂಜಾರಿ ಕಾಡಂಗೆ ಅನಾರೋಗ್ಯದಿಂದ ನಿಧನ

Suddi Udaya

ಗೇರುಕಟ್ಟೆ: ಪ್ರಗತಿಪರ ಕೃಷಿಕ ಕಲ್ಕುರ್ಣಿ ಪೆರ್ನು ಗೌಡ ನಿಧನ

Suddi Udaya
error: Content is protected !!