24 C
ಪುತ್ತೂರು, ಬೆಳ್ತಂಗಡಿ
June 8, 2026
ಆಯ್ಕೆಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ತಾಲೂಕು ಆದಿದ್ರಾವಿಡ ಸಮಾಜ ಸೇವಾ ಸಂಘದ ಧರ್ಮಸ್ಥಳ ಗ್ರಾಮ ಸಮಿತಿ ರಚನೆ

ಬೆಳ್ತಂಗಡಿ: ಆದಿದ್ರಾವಿಡ ಸಮಾಜ ಸೇವಾ ಸಂಘ (ರಿ) ತಾಲೂಕು ಘಟಕ ಬೆಳ್ತಂಗಡಿ, ಇದರ ಆಶ್ರಯದಲ್ಲಿ, ಧರ್ಮಸ್ಥಳ ಗ್ರಾಮ ಸಮಿತಿಯು ಡಿ. 2 ರಂದು ಅಶೋಕನಗರದ ಸೂರ್ಯ ಸಭಾಭವನದಲ್ಲಿ ಘಟಕದ ಅಧ್ಯಕ್ಷ ದಿನೇಶ್ ಕೆ ಕೊಕ್ಕಡ, ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ತಾಲೂಕು ಘಟಕದ ಪ್ರಧಾನ ಕಾರ್ಯದರ್ಶಿ ಶೇಖರ್ ವಿ ಧರ್ಮಸ್ಥಳ, ತಾಲೂಕು ಘಟಕದ ನಿಕಟಪೂರ್ವ ಅಧ್ಯಕ್ಷ ಶೇಖರ್ ಡಿ ಧರ್ಮಸ್ಥಳ, ಹಾಗೂ ನಿಕಟಪೂರ್ವ ಕಾರ್ಯದರ್ಶಿ ಶರತ್ ಕೊಕ್ಕಡ, ಉಪಸ್ಥಿತರಿದ್ದರು. ತಾಲೂಕು ಘಟಕದ ಅಧ್ಯಕ್ಷ ದಿನೇಶ್ ಕೆ ಕೊಕ್ಕಡ ಮಾತನಾಡಿ, ದಿನಾಂಕ ೨೪.೧೨.೨೦೨೩ ರಂದು ಮಂಗಳೂರಿನ ಪುರಭವನದಲ್ಲಿ ನಡೆಯುವ ಆದಿದ್ರಾವಿಡ ಸಮುದಾಯದ ರಾಜ್ಯ ಸಮಾ ವೇಶದಲ್ಲಿ ಸರಕಾರಕ್ಕೆ ಸಲ್ಲಿಸಲಿರುವ ಹಕ್ಕೊತ್ತಾಯದ ಅಂಶಗಳನ್ನು ಸಭೆಗೆ ವಿವರಿಸಿ, ಸಮಾವೇಶದ ಯಶಸ್ಸಿಗೆ ಎಲ್ಲರೂ ಸಂಘಟಿತರಾಗಿ ಸಹಕರಿಸಲು ಕರೆ ನೀಡಿದರು. ಹಾಗೂ ನೂತನವಾಗಿ ಆಯ್ಕೆಯಾದ ಪದಾಧಿಕಾರಿಗಳು ಗ್ರಾಮದ ಜಾತಿಬಾಂಧವರ ಜೊತೆ ಉತ್ತಮ ಭಾಂದವ್ಯ ಬೆಳೆಸಿಕೊಂಡು ಸಮುದಾಯಕ್ಕೆ ಉಪಯುಕ್ತ ಕಾರ್ಯಕ್ರಮಗಳನ್ನು ಆಯೋಜಿಸುವುದರ ಮೂಲಕ ಮಾದರಿ ಗ್ರಾಮ ಘಟಕವಾಗಿ ರೂಪುಗೊಳ್ಳಲಿ ಎಂದು ನೂತನ ಪದಾಧಿಕಾರಿಗಳಿಗೆ ಶುಭಹಾರೈಸಿದರು.

ಆದಿದ್ರಾವಿಡ ಸಮಾಜ ಸೇವಾ ಸಂಘ (ರಿ) ಬೆಳ್ತಂಗಡಿ, ಗ್ರಾಮ ಸಮಿತಿ ಧರ್ಮಸ್ಥಳದ ನೂತನ ಅಧ್ಯಕ್ಷರಾಗಿ ಶ್ರೀ ಗಣೇಶ್ ಡಿ, ಉಪಾಧ್ಯಕ್ಷರಾಗಿ ಶ್ರೀಮತಿ ಸುಜಾತ, ಕಾರ್ಯದರ್ಶಿಯಾಗಿ ಶ್ರೀಮತಿ ಶಶಿಕಲಾ, ಕೋಶಾಧಿಕಾರಿಯಾಗಿ ಶ್ರೀ ರಾಘವ ಎಸ್, ಇವರುಗಳು ಆಯ್ಕೆಯಾದರು.

ಶ್ರೀಮತಿ ಸುಜಾತ ಅತಿಥಿಗಳನ್ನು ಸ್ವಾಗತಿಸಿ, ಧರ್ಮಸ್ಥಳ ಗ್ರಾಮ ಘಟಕದ ನಿಕಟಪೂರ್ವ ಅಧ್ಯಕ್ಷ ಸುರೇಶ್ ಧನ್ಯವಾದವಿತ್ತರು.

Related posts

ಎಸ್. ಡಿ. ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ಆಟಿದ ಮಿನದನ’

Suddi Udaya

ಕೊಕ್ಕಡದಲ್ಲಿ ವಿಧಾನಪರಿಷತ್ ಉಪಚುನಾವಣೆ ನಿಮಿತ್ತ ಪೂರ್ವಭಾವಿ ಸಭೆ

Suddi Udaya

ಮೇ 31: ವೇಣೂರು ವಿದ್ಯುತ್ ನಿಲುಗಡೆ

Suddi Udaya

ಪಣಕಜೆ ‌ಭಜನಾ ಮಂದಿರದ ಬಳಿ ನಡೆದ ಅಪಘಾತದಲ್ಲಿ ರಸ್ತೆ ಚರಂಡಿಗೆ ಬಿದ್ದ ಸ್ಕೂಟರ್

Suddi Udaya

ನಾಳ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ ರಚನೆ ಹಾಗೂ ಪದಾಧಿಕಾರಿಗಳ ಆಯ್ಕೆ

Suddi Udaya

ಅಳದಂಗಡಿಯಲ್ಲಿ “ಅಶ್ವಿ” ಅಲಂಕಾರ ಮಳಿಗೆ ಶುಭಾರಂಭ

Suddi Udaya
error: Content is protected !!