ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರೂ 20,000 ಸಹಾಯ ಧನ ವಿತರಣೆ

Suddi Udaya

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ) ಬೆಳ್ತಂಗಡಿ ತಾಲೂಕಿನ, ಲಾಯಿಲ ವಲಯದ ಕೊಯ್ಯುರು ಕಾರ್ಯಕ್ಷೇತ್ರದ ನಾಗೇಶ್ ರವರಿಗೆ ಅನಾರೋಗ್ಯ ಕಾರಣ ಚಿಕಿತ್ಸೆಗಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಪೂಜ್ಯ ಖಾವಂದರು ವಿಶೇಷವಾಗಿ ಮಂಜೂರು ಮಾಡಿರುವ ರೂ 20000/-ಮೊತ್ತದ ಮಂಜೂರಾತಿ ಪತ್ರ ಹಾಗೂ ಚೆಕ್ಕನ್ನು ತಾಲೂಕು ಯೋಜನಾಧಿಕಾರಿ ಸುರೇಂದ್ರ ರವರು ವಿತರಿಸಿದರು.

ಈ ಸಂದರ್ಭ ಲಾಯಿಲ ವಲಯದ ಮೇಲ್ವಿಚಾರಕರಾದ ಸುಶಾಂತ್ ,ಸೇವಾ-ಪ್ರತಿನಿಧಿಯಾದ ಶ್ರೀಮತಿ ಕುಸುಮ ಉಪಸ್ಥಿತರಿದ್ದರು.

Leave a Comment

error: Content is protected !!