22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಳಿಯ ಜ್ಯುವೆಲ್ಸ್‌ ನಲ್ಲಿ ಸಂಸ್ಥಾಪಕರ ದಿನಾಚರಣೆ: ಸಾಮಾಜಿಕ ಕಳಕಳಿಯ ಸ್ವರ್ಣ ಪರಂಪರೆಯಲ್ಲಿ 78 ವರ್ಷ

ಬೆಳ್ತಂಗಡಿ: ನಾಡಿನ ಹೆಸರಾಂತ ಆಭರಣ ಮಳಿಗೆ ಮುಳಿಯ ಜ್ಯುವೆಲ್ಸ್‌ನಲ್ಲಿ ಇಂದು ಸಂಸ್ಥಾಪಕರ ದಿನ ಆಚರಿಸಲಾಯಿತು. ಪುತ್ತೂರು, ಬೆಳ್ತಂಗಡಿ, ಗೋಣಿಕೊಪ್ಪಲ್, ಮಡಿಕೇರಿ ಮತ್ತು ಬೆಂಗಳೂರಿನಲ್ಲಿ ಮಳಿಗೆಗಳನ್ನು ಹೊಂದಿರುವ ಮುಳಿಯ ಜ್ಯುವೆಲ್ಸ್‌ ಸಂಸ್ಥೆ ಕಳೆದ 78 ವರ್ಷಗಳಿಂದ ನಿರಂತರ ಗ್ರಾಹಕರ ಸೇವೆ ಮತ್ತು ಸಂತೃಪ್ತಿಯಲ್ಲಿ ಮನೆಮಾತಾಗಿದೆ.

ಸಂಸ್ಥಾಪಕರ ದಿನಾಚರಣೆ ಅಂಗವಾಗಿ ಡಿಸೆಂಬರ್ 7, 8 ಮತ್ತು 9ರಂದು ಗ್ರಾಹಕರು ಮುಳಿಯ ಜ್ಯುವೆಲ್ಸ್‌ನಲ್ಲಿ ಖರೀದಿಸುವ ಪ್ರತಿ ಗ್ರಾಂ ಚಿನ್ನದಲ್ಲಿ 50 ರೂ.ಗಳನ್ನು ಸಾಮಾಜಿಕ ಉದ್ದೇಶಗಳಿಗೆ ವಿನಿಯೋಗಿಸಲಾಗುವುದು. ಗ್ರಾಹಕರು ಹೇಗೆ ಮುಖ್ಯವೋ ಹಾಗೆಯೇ ಸಂಸ್ಥಾಪಕರು ಕೂಡ ಮುಖ್ಯ. ಅವರ ಆಶಯಕ್ಕೆ ಅನುಗುಣವಾಗಿ ಸಂಸ್ಥೆಯನ್ನು ಸಮಾಜಮುಖಿಯಾಗಿ ಮುನ್ನಡೆಸುವುದು ನಮ್ಮ ಧ್ಯೇಯ. ನಮ್ಮ ಲಾಭಾಂಶದಲ್ಲಿ ಒಂದು ಅಂಶವನ್ನು ಸಮಾಜಮುಖಿ ಕಾರ್ಯಗಳಿಗೆ ವಿನಿಯೋಗಿಸುತ್ತೇವೆ.

ಆ ಮೂಲಕ ಅವರ ಸೇವಾ ಮನೋಭಾವವನ್ನು ಮುಂದುವ್ರರಿಸಲು ನಾವು ಬಧ್ಡರಾಗಿದ್ದೇವೆ ಎಂದು ಮುಳಿಯ ಜ್ಯುವೆಲ್ಸ್ ಸಂಸ್ಥೆಯ ಸಿಎಂಡಿ ಕೇಶವ ಪ್ರಸಾದ್ ಮುಳಿಯ ಅವರು ತಿಳಿಸಿದ್ದಾರೆ.ದಿವಂಗತ ಮುಳಿಯ ಕೇಶವ ಭಟ್ಟರು ಸ್ಥಾಪಿಸಿದ ಮುಳಿಯ ಜ್ಯುವೆಲ್ಸ್‌ ಸಂಸ್ಥೆ ಸಾಮಾಜಿಕ ಕಳಕಳಿಯ ಸ್ವರ್ಣ ಪರಂಪರೆಯಲ್ಲಿ ಇಂದು ಬೃಹತ್ತಾಗಿ ಬೆಳೆದಿದೆ.

Related posts

ಸೆ.27: ನಯನಾಡು ಸ.ಪ್ರೌ. ಶಾಲೆಯಲ್ಲಿ ಜಿಲ್ಲಾ ಮಟ್ಟದ ಪ್ರೌಢಶಾಲಾ ಬಾಲಕ-ಬಾಲಕಿಯರ ಖೋ ಖೋ ಪಂದ್ಯಾಟ

Suddi Udaya

ಬೆಳ್ತಂಗಡಿ ಮುಳಿಯ ಜುವೆಲ್ಸ್ ನಲ್ಲಿ ‘ಚಿನ್ನದಂತ ಅಪ್ಪ ನನ್ನ ಅಪ್ಪ’ ವಿಶೇಷ ಅನುಬಂಧ ಕಾರ್ಯಕ್ರಮದ ಬಹುಮಾನ ವಿತರಣೆ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ನೂತನ ಅನ್ನಛತ್ರ ಉದ್ಘಾಟನೆ

Suddi Udaya

ಇಂದಬೆಟ್ಟು ಗ್ರಾ.ಪಂ. ಅಧ್ಯಕ್ಷ ಆನಂದ ಅಡಿಲು ರವರಿಗೆ ಸನ್ಮಾನ ಮತ್ತು ಪಿಡಿಒ ಸವಿತಾ ರವರಿಗೆ ಬೀಳ್ಕೊಡುಗೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿ ಕ್ಯಾ| ಬ್ರಿಜೇಶ್ ಚೌಟ ಭೇಟಿ

Suddi Udaya

ಬೆಳ್ತಂಗಡಿ ಕ್ಷೇತ್ರದ ವಿವಿಧೆಡೆ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರ ಮತ ಯಾಚನೆ

Suddi Udaya
error: Content is protected !!