ಕುತ್ಲೂರು ಗ್ರಾಮ ಅರಣ್ಯ ಸಮಿತಿಯ ವಾರ್ಷಿಕ ಮಹಾಸಭೆ

Suddi Udaya

ಕುತ್ಲೂರು : ಕರ್ನಾಟಕ ಅರಣ್ಯ ಇಲಾಖೆ, ಕುಂದಾಪುರ ವಿಭಾಗ ಮೂಡಬಿದ್ರೆ ಉಪವಿಭಾಗ, ಕುತ್ಲೂರು ಗ್ರಾಮ ಅರಣ್ಯ ಸಮಿತಿ ಇದರ 2022-23ನೇ ಸಾಲಿನ ವಾರ್ಷಿಕ ಮಹಾಸಭೆಯು ಡಿ.4 ರಂದು ಮಂಜುಶ್ರೀ ಸಭಾಭವನ ಕುತ್ಲೂರಿನಲ್ಲಿ ಸಮಿತಿಯ ಅಧ್ಯಕ್ಷ ಶ್ರೀಧರ ಪೂಜಾರಿಯವರ ಅಧ್ಯಕ್ಷತೆಯಲ್ಲಿ ಜರಗಿತು.


ವೇದಿಕೆಯಲ್ಲಿ ಕಾರ್ಯಕ್ರಮಗಳ ತಾಲೂಕು ವ್ಯವಸ್ಥಾಪಕಿ ಶ್ರೀಮತಿ ಪ್ರತಿಮಾ ಮಾತನಾಡಿ ಸಂಜೀವಿನಿ ಮುಖಾಂತರ ಸ್ವಸಹಾಯ ಸಂಘಗಳಿಗೆ ಬರುವ ಅನುದಾನಗಳ ಸಂಕ್ಷಿಪ್ತ ಮಾಹಿತಿಯನ್ನುನೀಡಿದರು.

ಗ್ರಾಮ ಅರಣ್ಯ ಸಮಿತಿಯ ಸದಸ್ಯ ಕಾರ್ಯದರ್ಶಿ ಕುಶಾಲಪ್ಪ ಗೌಡ, ನಾರಾವಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಆಶಲತಾ, ಪಂಚಾಯತ್ ಸದಸ್ಯ ಸಂತೋಷ, ಕುತ್ಲೂರು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷೆ ಶ್ರೀಮತಿ ರಾಜಶ್ರೀ, ಹಾಗೂ ಅಂಡಿಂಜೆ ಗ್ರಾಮ ಅರಣ್ಯ ಸಮಿತಿಯ ಅಧ್ಯಕ್ಷರು ಉಪಸ್ಥಿತರಿದ್ದರು.

ಸಭೆಯಲ್ಲಿ ಮಂಗಗಳ ಹಾಗೂ ಕಾಡುಹಂದಿಯ ಹಾವಳಿಯ ಬಗ್ಗೆ ಚರ್ಚಿಸಲಾಯಿತು.

ಗ್ರಾಮ ಅರಣ್ಯ ಸಮಿತಿ ಸದಸ್ಯ ಕೇಶವ ಕಾರ್ಯಕ್ರಮ ನಿರೂಪಿಸಿ, ರೋಹನ್ ಸ್ವಾಗತಿಸಿ, ಆನಂದ ಸಾಲ್ಯಾನ್ ವಂದನಾರ್ಪಣೆಗೈದರು.

Leave a Comment

error: Content is protected !!