September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ತೆoಕಕಾರಂದೂರು ತಾರೆದೊಟ್ಟು ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

ತೆoಕಕಾರಂದೂರು: ತಾರೆದೊಟ್ಟು ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ ಕಾರ್ಯಕ್ರಮವನ್ನು ಸಂಭ್ರಮಾಚರಣೆಯಿಂದ ಆಚರಿಸಲಾಯಿತು. ಸಲಹಾ ಸಮಿತಿ ಅಧ್ಯಕ್ಷ ಶಿವಪ್ರಸಾದ್ ಕಾರ್ಯಕ್ರಮ ಉದ್ಘಾಟಿಸಿ, ಅಧ್ಯಕ್ಷತೆ ವಹಿಸಿದ್ದರು.

ವೇದಿಕೆಯಲ್ಲಿ ವಿಶ್ವನಾಥ ಹೊಳ್ಳ ಬಳಂಜ, ಎಂ.ಸಿ. ನಾರಾಯಣ ಗೌಡ, ನಾರಾಯಣ ರಾವ್ ಕಾಪಿನಡ್ಕ, ಅಬ್ದುಲ್ ಖಾದರ್ ಕರಂಬಾರು, ಗ್ರಾಮ ಪಂಚಾಯತ್ ಸದಸ್ಯೆ ಪದ್ಮಾವತಿ, ಚಂದ್ರ ಪೂಜಾರಿ ಗೌ. ಅಧ್ಯಕ್ಷರು ಸ. ಸಮಿತಿ, ಕೊರಗಪ್ಪ ನಾಯ್ಕ ಗಿಳಿಕಾಪು, ಸುಂದರ ಲಿಂಗಾಯತ, ಗುಲಾಬಿ ಎಂ.ಎನ್, ಉಪಸ್ಥಿತರಿದ್ದರು.

ಮುಖ್ಯ ಅತಿಥಿ ಕಿಶೋರ್ ಹೆಗ್ಡೆ ಮಾತನಾಡಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಎಂ.ಸಿ. ನಾರಾಯಣ ಗೌಡ, ಶ್ರೀಯುತ ವಿಶ್ವನಾಥ ಹೊಳ್ಳ ಬಳಂಜ, ನಾರಾಯಣ ರಾವ್ ಕಾಪಿನಡ್ಕ, ಕೊರಗಪ್ಪ ನಾಯ್ಕ ಗಿಳಿಕಾಪು ಇವರುಗಳು ಅಂಗನವಾಡಿ ಗೆ ನೀಡಿದ ಸೇವೆಯನ್ನು ಸ್ಮರಿಸಿ ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಮಕ್ಕಳ ಪೋಷಕರು, ತಾಯಂದಿರು, ಊರವರು, ಸ್ತ್ರೀ ಶಕ್ತಿ ತಂಡದ ಸದಸ್ಯರು, ಸ್ವಸಹಾಯ ತಂಡದ ಸದಸ್ಯರು, ಸಂಜೀವಿನಿ ತಂಡದ ಸದಸ್ಯರು, ಹಳೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ 1ನೇ ತರಗತಿಗೆ ಸೇರಿದ ಮಕ್ಕಳಿಗೆ ಬೀಳ್ಕೊಡುಗೆ ಕಾರ್ಯಕ್ರಮ ನಡೆಸಿ ನೆನಪಿನ ಕಾಣಿಕೆ ನೀಡಲಾಯಿತು. ಮಕ್ಕಳಿಗೆ ವಿವಿಧ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಿ ಬಹುಮಾನ ವಿತರಿಸಲಾಯಿತು.

ಪುಟಾಣಿ ಮಕ್ಕಳು ಪ್ರಾರ್ಥಿಸಿದರು. ಅಂಜನಿ ಎಂ. ರಾವ್ ಸ್ವಾಗತಿಸಿ, ಮನಿತಾ ಸಿ. ಶೆಟ್ಟಿ ನಿರೂಪಿಸಿ, ವಂದಿಸಿದರು. ಶ್ರಿಮತಿ ಸುನಂದ ಸಹಕರಿಸಿದರು.

Related posts

ನಿಡ್ಲೆ ಪ್ರಾ.ಕೃ.ಪ. ಸ.ಸಂಘದಲ್ಲಿ 72ನೇ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ಸಹಕಾರ ಸಪ್ತಾಹ ಆಚರಣೆ ಮತ್ತು ಕೊಬ್ಬರಿ ಎಣ್ಣೆಗಿರಣಿ ಉದ್ಘಾಟನೆ

Suddi Udaya

ವೇಣೂರು: ಪಡ್ಡಂದಡ್ಕ ನೂರುಲ್ ಹುಧಾ ಮಸೀದಿಯಲ್ಲಿ ಸಂಭ್ರಮದ ಈದುಲ್ ಅಧಾ ಆಚರಣೆ

Suddi Udaya

ಜು.17: ಧರ್ಮಸ್ಥಳದಲ್ಲಿ ಪುರಾಣ ಕಾವ್ಯ ವಾಚನ-ಪ್ರವಚನ

Suddi Udaya

ಬೆಳ್ತಂಗಡಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆಡಳಿತ ಕಚೇರಿ ಕಾರ್ಯದರ್ಶಿಯಾಗಿ ನವೀನ್ ಕುಮಾರ್ ಎಂ.ಎಸ್.

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬಕ್ರೀದ್ ಆಚರಣೆ

Suddi Udaya

ರಾಜ್ಯದ ಕಾಂಗ್ರೆಸ್ ಸರಕಾರದ ದುರಾಡಳಿತದ ವಿರುದ್ದ ಕಳಿಯ ಗ್ರಾ.ಪಂ. ಎದುರು ಬಿಜೆಪಿ ಪ್ರತಿಭಟನೆ

Suddi Udaya
error: Content is protected !!